ಈಗ ಸಣ್ಣ ಸ್ಫೋಟವಾದರೂ ಡ್ಯಾಂ ಬಿರುಕು ಸಾಧ್ಯತೆ

ಸದ್ಯ ಜಲಾಶಯ ಪೂರ್ಣ ತುಂಬಿರುವುದರಿಂದ ಮತ್ತು ಅಣೆಕಟ್ಟೆ ನೀರಿನ ಒತ್ತಡಕ್ಕೆ ಬಿರುಕು ಸಂಭವ

Team Udayavani, Aug 24, 2019, 5:34 PM IST

24-April-42

ಅಣೆಕಟ್ಟೆಯ ಸುರಕ್ಷತೆ ಬಗ್ಗೆ ನಗರದ ಎಂಜಿನಿಯರುಗಳ ಸಂಸ್ಥೆಯಲ್ಲಿ ತಜ್ಞರ ಸಭೆ ನಡೆಯಿತು.

ಮೈಸೂರು: ಕೆಆರ್‌ಎಸ್‌ ಅಣೆಕಟ್ಟೆಯ ಹಿತದೃಷ್ಟಿ ಯಿಂದ ಮಂಡ್ಯ ಜಿಲ್ಲಾಡಳಿತ ಮತ್ತು ಕರ್ನಾಟಕ ಸರ್ಕಾರ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಅಣೆಕಟ್ಟೆಯ ಸುತ್ತಮುತ್ತ ಸುಮಾರು 20 ಕಿ.ಮೀ ವರೆಗೆ ಶಾಶ್ವತವಾಗಿ ಎಲ್ಲಾ ರೀತಿಯ ಗಣಿಗಾರಿಕೆಯನ್ನು ನಿಷೇಧಿಸಬೇಕು ಎಂದು ಮೈಸೂರಿನ ಎಂಜಿನಿಯರುಗಳ ಸಂಸ್ಥೆ ಶಿಫಾರಸು ಮಾಡಿದೆ.

ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ ನಗರದ ಎಂಜಿನಿಯರುಗಳ ಸಂಸ್ಥೆಯ ಸಭಾಂಗಣದಲ್ಲಿ ನಿವೃತ್ತ ಮೇಜರ್‌ ಜನರಲ್ ಒಂಬತ್ಕೆರೆ ಮತ್ತು ಎಂ.ಲಕ್ಷ್ಮಣ ಅವರ ನೇತೃತ್ವದಲ್ಲಿ ಶುಕ್ರವಾರ ಸಭೆ ನಡೆಸಿದ ಎಂಜಿನಿಯರುಗಳು ಹಾಗೂ ರೈತ ಮುಖಂಡರು, ಕೆಆರ್‌ಎಸ್‌ ಅಣೆಕಟ್ಟೆ ಸುತ್ತಮುತ್ತ ಕಲ್ಲು ಗಣಿಗಾರಿಕೆಗಾಗಿ ಸ್ಫೋಟಕಗಳನ್ನು ಬಳಸುತ್ತಿರುವುದರಿಂದ ಅಣೆಕಟ್ಟು ಎಷ್ಟರ ಮಟ್ಟಿಗೆ ಸುರಕ್ಷಿತ ಎಂಬುದರ ಬಗ್ಗೆ ಚರ್ಚಿಸಿ, ತಾಂತ್ರಿಕ ವರದಿ ಸರ್ಕಾರಕ್ಕೆ ಸಲ್ಲಿಸಲು ತೀರ್ಮಾನಿಸಿತು.

ಅಣೆಕಟ್ಟೆ ಸುರಕ್ಷತೆ ವರದಿ ನೀಡಿ: ಕೆಆರ್‌ಎಸ್‌ ಅಣೆಕಟ್ಟೆಯನ್ನು ಭೂಕಂಪನ ವಲಯದಲ್ಲಿ ನಿರ್ಮಿಸಿರುವುದರಿಂದ ಸ್ಫೋಟಕಗಳಿಂದ ಅಣೆಕಟ್ಟೆಯ ಕಟ್ಟಡ ಬಿರುಕು ಬಿಡುವ ಸಾಧ್ಯತೆಗಳಿದ್ದು, ಕೆಆರ್‌ಎಸ್‌ ಸುತ್ತಮುತ್ತ ಎಲ್ಲ ರೀತಿಯ ಸ್ಫೋಟಕಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಕೆಆರ್‌ಎಸ್‌ ಅಣೆಕಟ್ಟೆಗೆ 90 ವರ್ಷಗಳಾಗಿರುವುದರಿಂದ ಕೇಂದ್ರ ಭೂವಿಜ್ಞಾನ ಇಲಾಖೆಯಿಂದ ಸರ್ವೆಯಾಗಬೇಕು ಹಾಗೂ ಕೂಡಲೇ ಅಣೆಕಟ್ಟೆಯ ಸುರಕ್ಷತೆ ಬಗ್ಗೆ ವರದಿ ನೀಡಬೇಕು. ಅಣೆಕಟ್ಟೆಯ ಕಟ್ಟಡದ ಆಯಸ್ಸಿನ ಬಗ್ಗೆ ತಿಳಿಯಲು ಅಣೆಕಟ್ಟೆಯ ಅನಾಲಿಸಿಸ್‌ ಆಗಬೇಕಿದೆ. ಇದರಿಂದ ಅಣೆಕಟ್ಟೆ ಇನ್ನೂ ಎಷ್ಟರ ಮಟ್ಟಿಗೆ ಗಟ್ಟಿತನ ಉಳಿಸಿಕೊಂಡಿದೆ ಎಂಬುದು ತಿಳಿಯುತ್ತದೆ.

ಜಿಲ್ಲಾಡಳಿತ ಮತ್ತು ಕರ್ನಾಟಕ ಸರ್ಕಾರ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಕೆಆರ್‌ಎಸ್‌ ಅಣೆಕಟ್ಟೆಯ ಹಿತದೃಷ್ಟಿಯಿಂದಶಾಶ್ವತವಾಗಿ ಅಣೆಕಟ್ಟೆಯ ಸುತ್ತಮುತ್ತ ಸುಮಾರು 20 ಕಿ.ಮೀ ವರೆಗೆ ಎಲ್ಲಾ ರೀತಿಯ ಗಣಿಗಾರಿಕೆಯನ್ನು ನಿಷೇಧಿಸಬೇಕು.

ಸದ್ಯ ಜಲಾಶಯ ಪೂರ್ಣ ಪ್ರಮಾಣದಲ್ಲಿ ತುಂಬಿರುವುದರಿಂದ ಮತ್ತು ಅಣೆಕಟ್ಟೆ ನೀರಿನ ಒತ್ತಡಕ್ಕೆ ಒಳಗಾಗಿರುವುದರಿಂದ, ಸಣ್ಣ ಪ್ರಮಾಣದ ಸ್ಫೋಟ ಕೂಡ ಅಣೆಕಟ್ಟೆ ಬಿರುಕು ಬಿಡಲು ಅವಕಾಶ ನೀಡುತ್ತದೆ. ಸಣ್ಣ ಬಿರುಕು ನೀರಿನ ಒತ್ತಡದಿಂದ ಕೆಲವೇ ದಿನಗಳಲ್ಲಿ ದೊಡ್ಡ ಬಿರುಕಾಗಿ ಮಾರ್ಪಡುತ್ತದೆ ಎಂದು ಶಿಫಾರಸು ಮಾಡಿ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ತ.ಮ.ವಿಜಯಭಾಸ್ಕರ್‌, ಮಂಡ್ಯ ಜಿಲ್ಲಾಧಿಕಾರಿ ಹಾಗೂ ಕೇಂದ್ರ ಜಲಸಂಪನ್ಮೂಲ ಇಲಾಖೆಯ ಮುಖ್ಯ ಎಂಜಿನಿಯರ್‌ಗೆ ಕಳುಹಿಸಲು ತೀರ್ಮಾನಿಸಿತು.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.