ಮೃಗಾಲಯಕ್ಕೆ 1.5 ಕೋಟಿ ರೂ. ದೇಣಿಗೆ


Team Udayavani, May 8, 2020, 6:02 PM IST

ಮೃಗಾಲಯಕ್ಕೆ 1.5 ಕೋಟಿ ರೂ. ದೇಣಿಗೆ

ಮೈಸೂರು: ಲಾಕ್‌ಡೌನ್‌ ಹಿನ್ನೆಲೆ ಮೃಗಾಲಯ ನಿರ್ವಹಣೆಗಾಗಿ ಸಚಿವ ಎಸ್‌.ಟಿ. ಸೋಮಶೇಖರ್‌ ಮೂರನೇ ಹಂತವಾಗಿ 21.14 ಲಕ್ಷ ರೂ. ಹಾಗೂ ಸಚಿವ ಭೈರತಿ ಬಸವರಾಜು ಅವರು 84 ಲಕ್ಷ ರೂ. ಚೆಕ್‌ನ್ನು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್‌ ಕುಲಕರ್ಣಿ ಅವರಿಗೆ ಹಸ್ತಾಂತರಿಸಿದರು. ಈ ಮೂಲಕ ಮೃಗಾಲಯಕ್ಕೆ ಒಟ್ಟಾರೆ 1,05,14,000 ರೂ. ದೇಣಿಗೆಯಾಗಿ ನೀಡಿದಂತಾಗಿದೆ.

ಮೃಗಾಲಯ ಬಂದ್‌ ಮಾಡಿದ್ದರ ಪರಿಣಾಮ ಜೀವಿಗಳು ಸೇರಿದಂತೆ ನೌಕರರ ನಿರ್ವಹಣೆಗೆ ಸಂಪನ್ಮೂಲ ಕೊರತೆ ಎದುರಾಗಿತ್ತು. ಈ ಹಿನ್ನೆಲೆ ಸಚಿವರು ಗುರುವಾರ 3ನೇ ಬಾರಿಗೆ ಮೃಗಾಲಯಕ್ಕೆ ಭೇಟಿ ನೀಡಿ, ತಮ್ಮ ಸ್ವಕ್ಷೇತ್ರದಲ್ಲಿ ದಾನಿಗಳಿಂದ ದೇಣಿಗೆ ಸಂಗ್ರಹಿಸಿದ್ದರು.  ಸಚಿವ ಸೋಮಶೇಖರ್‌ ಮಾತನಾಡಿ, ರಾಜ್ಯದ ಸಚಿವರಲ್ಲಿ ಮೃಗಾಲಯಕ್ಕೆ ದೇಣಿಗೆ ನೀಡುವಂತೆ ಮಾಡಿದ ಮನವಿಗೆ ಸ್ಪಂದಿಸಿ ಸಚಿವ ಬೈರತಿ ಬಸವರಾಜು 84 ಲಕ್ಷ ರೂ. ಸಂಗ್ರಹಿಸಿ ನೀಡಿದ್ದಾರೆ. ಇದು ಅವರ ಸಮಾಜಮುಖೀ ಕಾರ್ಯವನ್ನು ತೋರಿಸುತ್ತದೆ ಎಂದರು. ಅಮೆರಿಕದ ಅಕ್ಕ ಸಂಸ್ಥೆ ಅಧ್ಯಕ್ಷ ಅಮರನಾಥ ಅವರೊಂದಿಗೆ ಈ ಬಗ್ಗೆ ಮಾತನಾಡಿದ್ದೇನೆ. ಅವರಿಗೂ ದೇಣಿಗೆ ಬಗ್ಗೆ ಮಾಹಿತಿ ನೀಡಿದ್ದೇನೆ. ಅವರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಮಾಹಿತಿ ನೀಡಿದರು.

ಹಸಿವು ನೀಗಿಸುವುದು ನಮ್ಮ ಕರ್ತವ್ಯ: ಸಚಿವ ಬೈರತಿ ಬಸವರಾಜು ಮಾತನಾಡಿ, ಮನುಷ್ಯರು ಹಸಿವಾದರೆ ಹೇಳಿಕೊಳ್ಳಬಹುದು. ಆದರೆ, ಪ್ರಾಣಿಗಳಿಗೆ ಅದು ಸಾಧ್ಯವಿಲ್ಲ. ಹೀಗಾಗಿ ಅವುಗಳ ಹಸಿವು ನೀಗಿಸುವುದು ನಮ್ಮ ಕರ್ತವ್ಯ. ದಾನಿಗಳು ಅರ್ಥ ಮಾಡಿಕೊಂಡು ಆದಷ್ಟು ಆರ್ಥಿಕ ಸಹಾಯ ಮಾಡಿ ಎಂದು ಸಚಿವ ಸೋಮಶೇಖರ್‌ ಅವರು ಮನವಿ ಮಾಡಿದರು.

ರೈತರ ಅನುಕೂಲಕ್ಕಾಗಿ ಗಡಿಭಾಗ ಸಡಿಲ: ಲಾಕ್‌ಡೌನ್‌ನಿಂದಾಗಿ ರೈತರಿಗೆ ಬೆಳೆದ ಬೆಳೆ ಮಾರಾಟಕ್ಕೆ ತೊಂದರೆಯಾಗುತ್ತಿದೆ. ಹೀಗಾಗಿ ಹೂವು, ತರಕಾರಿ ಹಾಗೂ ಇನ್ನಿತರ ಉತ್ಪನ್ನಗಳ ಮಾರಾಟಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಗಡಿಭಾಗದಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಇನ್ನು ಕೆಲವು ಕಡೆಗಳಲ್ಲಿ ಯಾವುದಕ್ಕೆ ಅವಕಾಶ ಕೊಡಬೇಕು ಎಂಬುದ ಕುರಿತು ಶೀಘ್ರ ನಿರ್ಧಾರವಾಗಲಿದೆ ಎಂದು ಸಚಿವರು ಹೇಳಿದರು.

ಮೃಗಾಲಯಕ್ಕೆ 2.32 ಕೋಟಿ ರೂ. ಕೊಡುಗೆ: ಸಚಿವ ಸೋಮಶೇಖರ್‌ ಅವರು ಈವರೆಗೆ ತಮ್ಮ ಕ್ಷೇತ್ರ ಹಾಗೂ ಇತರ ಸಚಿವರಿಂದ ಮೃಗಾಲಯಕ್ಕೆ ಒಟ್ಟಾರೆಯಾಗಿ 2,31,60,000 ರೂ. ದೇಣಿಗೆಯಾಗಿ ನೀಡಿದಂತಾಗಿದೆ. ಈ ಸಂದರ್ಭದಲ್ಲಿ ಸಂಸದ ಪ್ರತಾಪ್‌ ಸಿಂಹ, ಶಾಸಕ ಎಸ್‌.ಎ.ರಾಮದಾಸ್‌, ಎಲ್‌. ನಾಗೇಂದ್ರ, ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ಹಾಜರಿದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.