ನೆರೆಗೆ 10 ಸೇತುವೆ, 70 ಕಿ.ಮೀ. ರಸ್ತೆ ಹಾನಿ


Team Udayavani, Sep 1, 2019, 3:00 AM IST

nerege

ಹುಣಸೂರು: ತಾಲೂಕಿನ ಜೀವನದಿ ಲಕ್ಷ್ಮಣತೀರ್ಥ ನದಿಯ ಪ್ರವಾಹವು ಬೆಳೆ, ಮನೆಗಳ ಹಾನಿಯ ಜೊತೆಗೆ ಸೇತುವೆಗಳು, ರಸ್ತೆಗಳನ್ನೂ ಭಾರೀ ಪ್ರಮಾಣದಲ್ಲಿ ಹಾನಿಗೊಳಿಸಿ ಸಂಚಾರ ವ್ಯವಸ್ಥೆಯನ್ನು ಅಸ್ತವ್ಯಸ್ತಗೊಳಿಸಿದೆ.

ನದಿ ಪಾತ್ರದ ಹನಗೋಡು ಹೋಬಳಿಯಲ್ಲಿ ಹೆಚ್ಚು ಹಾನಿಯಾಗಿದ್ದರೆ, ಬಿಳಿಕೆರೆ, ಕಸಬಾ ಮತ್ತು ಗಾವಡಗೆರೆ ಹೋಬಳಿಗಳಲ್ಲೂ ವಿವಿಧೆಡೆ ಸೇತುವೆ, ರಸ್ತೆಗಳು ಕಿತ್ತು ಹೋಗಿವೆ. ಒಟ್ಟಾರೆ ತಾಲೂಕಿನಲ್ಲಿ 10ಕ್ಕೂ ಹೆಚ್ಚು ಸೇತುವೆ, 70 ಕಿ.ಮೀ. ರಸ್ತೆ ಹದಗೆಟ್ಟು ಹೋಗಿದೆ. ಸದ್ಯ ಇನ್ನೂ ನೆರೆ ಪರಿಹಾರ ಬಿಡುಗಡೆಯಾಗದಿರುವುದರಿಂದ ದುರಸ್ತಿ ಕಾರ್ಯ ನಡೆಯುತ್ತಿಲ್ಲ. ವಾಹನ ಸವಾರರು, ಪ್ರಯಾಣಿಕರು ಸುತ್ತು ಬಳಸಿ ಸಂಚರಿಸುವಂತಾಗಿದೆ.

ಹನಗೋಡು ಸೇತುವೆಗೆ ಹಾನಿ: ನದಿಯ ಭಾರೀ ಪ್ರವಾಹದಿಂದಾಗಿ ಹನಗೋಡು, ಕೊಳುವಿಗೆ, ರಾಮೇನಹಳ್ಳಿ, ರಾಮಪಟ್ಟಣ ಸೇತುವೆಗಳಿಗೆ ಹಾನಿಯಾಗಿದೆ. ಕೊಳವಿಗೆ ರಸ್ತೆಯ ಹನಗೋಡು ಬಳಿ ನಿರ್ಮಿಸಿರುವ ಸೇತುವೆ ಒಂದು ಭಾಗದ ಎರಡು ಕಡೆ ತಡೆಗೋಡೆ ಕುಸಿದಿದೆ. ಸೇತುವೆ ಮೇಲ್ಭಾಗದ ಕೈಪಿಡಿಗಳು(ಗೋಡೆಗಳು), ಅಳವಡಿಸಿದ್ದ ಕೇಬಲ್‌ಗ‌ಳ ಕಾಂಕ್ರೀಟ್‌ ಸಹ ಕಿತ್ತು ಹೋಗಿದೆ. ಸೇತುವೆಯ ಎರಡು ಬದಿಯ ಕಾಂಕ್ರೀಟ್‌ ನಡುವೆ ದೊಡ್ಡದಾದ ಗಿಡಗಳು ಬೆಳೆದಿದ್ದು, ಸೇತುವೆಗೆ ಅಪಾಯ ತಂದೊಡ್ಡಿದೆ.

ಕಳೆದ ಎರಡು ವರ್ಷಗಳ ಹಿಂದೆ ಭಾರೀ ಪ್ರಮಾಣದಲ್ಲಿ ಬಿದಿರು ಸಿಕ್ಕಿಕೊಂಡಿದ್ದ ವೇಳೆ ಕಿಡಿಗೇಡಿಗಳು ಬಿದಿರು ಹಿಂಡಲಿಗೆ ಬೆಂಕಿ ಹಾಕಿದ್ದರಿಂದ ಸೇತುವೆಗೆ ಹಾನಿ ಸಂಭವಿಸಿತ್ತು. ಅಲ್ಲದೇ ಸೇತುವೆ ಕೆಳಗೆ ಅಪಾರ ಪ್ರಮಾಣದಲ್ಲಿ ಮರಳು ತೆಗೆದಿದ್ದರಿಂದ ಪ್ರವಾಹದಲ್ಲಿ ಸಾಕಷ್ಟು ಮಣ್ಣು ಕೊಚ್ಚಿಕೊಂಡು ಹೋಗಿದ್ದು, ತಳಪಾಯ ಕಾಣಿಸಿಕೊಂಡು ಅಪಾಯಕ್ಕೆ ಆಹ್ವಾನ ನೀಡಿದೆ.

ಅಪಾಯದಲ್ಲಿ ಕೊಳುವಿಗೆ ಸೇತುವೆ: ಹನಗೋಡು ಕೊಳವಿಗೆ ಬಳಿ ನದಿಗೆ ನಿರ್ಮಿಸಿರುವ ಸೇತುವೆಯ ಒಂದು ಬದಿಯಲ್ಲಿ ಪ್ರವಾಹವು ಅಪಾರ ಪ್ರಮಾಣದಲ್ಲಿ ಸೇತುವೆ ತಡೆಗೋಡೆಯ ಮಣ್ಣನ್ನು ಹಾಗೂ ರಸ್ತೆಯನ್ನೇ ಕೊಚ್ಚಿಹಾಕಿದ್ದು, ಈ ಸೇತುವೆ ಮೇಲೆ ದ್ವಿಚಕ್ರ ವಾಹನ ಹೊರತುಪಡಿಸಿ, ಬೇರೆ ಯಾವ ವಾಹನಗಳು ಸಂಚರಿಸಲಾಗುತ್ತಿಲ್ಲ. ಬಸ್‌ ಸಂಚಾರ ಕೂಡ ಸ್ಥಗಿತಗೊಂಡಿದ್ದು, ಬದಲಿ ಮಾರ್ಗದಲ್ಲಿ ಸುತ್ತಿಬಳಸಿ ಸಂಚರಿಸಬೇಕಾಗಿದೆ.

ಸೇತುವೆ ಪಿಲ್ಲರ್‌ ಅಪಾಯದಲ್ಲಿ: ಹುಣಸೂರು ನಗರದ ಬೈಪಾಸ್‌ ರಸ್ತೆಯ ಸೇತುವೆ ಡಾಂಬರ್‌ ಕಿತ್ತು ಹೋಗಿ ಗುಂಡಿಗಳು ಬಿದ್ದಿದ್ದರೆ, ತಳಭಾಗದಲ್ಲೂ ಭಾರೀ ಕೊರಕಲು ಉಂಟಾಗಿದೆ. ಈ ಸೇತುವೆ ಮೇಲೆ ನಿತ್ಯ ಸಾವಿರಾರು ವಾಹನಗಳು ಓಡಾಡುತ್ತಿದ್ದು, ಕೈಯಲ್ಲಿ ಜೀವ ಹಿಡಿದು ಸಂಚರಿಸುವಂತಾಗಿದೆ. ಇನ್ನು ನಗರಕ್ಕೆ ಸಮೀಪದ ಹನಗೋಡು ರಸ್ತೆಯ ರಾಮೇನಹಳ್ಳಿ ಬಳಿ ನದಿಗೆ ನಿರ್ಮಿಸಿದ್ದ ಸೇತುವೆಯ ಒಂದು ಬದಿ ಮಣ್ಣನ್ನು ಹೊತ್ತೂಯ್ದಿದೆ. ರಾಮಪಟ್ಟಣ ಬಳಿಯ ಸೇತುವೆ ರಸ್ತೆಯ ತಡೆಗೋಡೆ ಬಿದ್ದುಹೋಗಿದೆ.

10 ಕಿರು ಸೇತುವೆಗೆ ಹಾನಿ: ಹುಣಸೂರು-ಕೆ.ಆರ್‌.ನಗರ ರಸ್ತೆಯ ಶನಿದೇವರ ದೇವಾಲಯದ ಹತ್ತಿರ ಕಿರು ಸೇತುವೆ ಹಾನಿಗೊಳಗಾಗಿದ್ದು, ಸಂಚಾರ ಬಂದ್‌ ಆಗಿದೆ. ನಾಗನಹಳ್ಳಿ-ತಿಪ್ಪಲಾಪುರ ಮಾರ್ಗ ಬಳಸುದಾರಿಯಲ್ಲಿ ವಾಹನಗಳು ಸಂಚರಿಸುತ್ತಿವೆ. ನಿಲುವಾಗಿಲಿನ ಅವಲಕ್ಕಿಕಡದ ಮೋರಿ, ಭಾರತವಾಡಿ-ದೊಡ್ಡಹೆಜ್ಜೂರು ರಸ್ತೆಯ ಕೆರೆ ಏರಿಯ ಮೋರಿ ಸೇರಿದಂತೆ ಅನೇಕ ಕಡೆಗಳಲ್ಲಿ ಹಾನಿಯಾಗಿದೆ. 10ಕ್ಕೂ ಹೆಚ್ಚು ಸೇತುವೆಗಳು ಹಾನಿಯಾಗಿವೆ.

70 ಕಿ.ಮೀ. ರಸ್ತೆ ಹಾನಿ: ಪ್ರವಾಹದ ನೀರು ಗ್ರಾಮದೊಳಗೆ ನುಗ್ಗಿದ್ದರಿಂದ ಲೋಕೋಪಯೋಗಿ ಹಾಗೂ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಗೆ ಸೇರಿದ ಸುಮಾರು 70 ಕಿ.ಮೀ. ರಸ್ತೆಗಳು ಹಾಳಾಗಿವೆ. ಹನಗೋಡು ಭಾಗದ ಕೋಣನಹೊಸಳ್ಳಿ ಗ್ರಾಮದ ಎಲ್ಲಾ ರಸ್ತೆಗಳನ್ನು ಕೊಚ್ಚಿ ಹೋಗಿದ್ದರೆ, ಕೊಳುವಿಗೆ, ಬಿಲ್ಲೇನಹೊಸಳ್ಳಿ, ಕೆ.ಜಿ.ಹಬ್ಬನಕುಪ್ಪೆ, ನೇಗತ್ತೂರು, ಅಬ್ಬೂರು, ಕಾಮಗೌಡನಹಳ್ಳಿ ಗೇಟ್‌, ಕಲ್ಲೂರಪ್ಪನ ಬೆಟ್ಟದ ರಸ್ತೆ, ಹರಳಹಳ್ಳಿ ರಸ್ತೆ, ಗಾವಡಗೆರೆ ಹೋಬಳಿಯ ಹುಲ್ಯಾಳು ರಸ್ತೆ, ಬಿಳಿಕೆರೆ ಹೋಬಳಿಯ ಚಿಕ್ಕಬೀಚನಹಳ್ಳಿ ರಸ್ತೆಗಳು ಹದಗೆಟ್ಟಿವೆ.

ಬಹುತೇಕ ಹಳ್ಳಿಗಳಲ್ಲಿ ಜಮೀನಿಗೆ ಹೋಗುವ ರಸ್ತೆಗಳಂತೂ ಕಿತ್ತು ಹೋಗಿವೆ. ಪ್ರವಾಹಕ್ಕೆ ಮೊದಲು ಜುಲೈನಲ್ಲಿ ಸುರಿದಿದ್ದ ಬಿರುಗಾಳಿ ಮಳೆಗೂ ಹಲವು ಕಡೆ ರಸ್ತೆಗಳು ಹದಗೆಟ್ಟಿದ್ದವು. ಕೆಲ ಮುಖ್ಯರಸ್ತೆಗಳನ್ನು ಹೊರತುಪಡಿಸಿದರೆ, ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ದುರಸ್ತಿ ಕಾರ್ಯ ಆರಂಭಗೊಂಡಿಲ್ಲ, ಕಾಮಗಾರಿ ನಡೆಸಲು ಅನುಮತಿ ಸಿಗದೆ, ಅನುದಾನ ಕೊರತೆಯೂ ಸಾಕಷ್ಟಿದೆ ಎಂಬುದು ತಿಳಿದು ಬಂದಿದೆ.

ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿ ನಾಲ್ಕು ದೊಡ್ಡ ಸೇತುವೆ, ಹತ್ತಕ್ಕೂ ಹೆಚ್ಚು ಕಿರು ಸೇತುವೆಗಳು, 9 ಕಿ.ಮೀ.ಗೂ ಹೆಚ್ಚು ರಸ್ತೆ ಹಾಳಾಗಿದೆ. ಹನಗೋಡು ಸೇತುವೆ ಬಳಿಯ ರಸ್ತೆ ಸೇರಿದಂತೆ ಅಗತ್ಯವಿರುವ ಕೆಲವೆಡೆ ತುರ್ತು ಕಾಮಗಾರಿ ಮಾತ್ರ ಕೈಗೊಳ್ಳಲಾಗಿದೆ. ರಸ್ತೆ ಹಾಗೂ ಸೇತುವೆ ದುರಸ್ತಿ ಕಾರ್ಯಕ್ಕೆ 7.5 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದೆ. ಅಲ್ಲದೇ ಈ ಹಿಂದೆ ಸುರಿದಿದ್ದ ಭಾರೀ ಮಳೆಗೆ 9 ಕಿ.ಮೀ ರಸ್ತೆಹಾನಿಯಾಗಿತ್ತು. ಈ ರಸ್ತೆಗಳ ದುರಸ್ತಿಗೆ 75 ಲಕ್ಷ ರೂ. ಪ್ರಸ್ತಾವನೆಯನ್ನು ಸರ್ಕಾರ‌ಕ್ಕೆ ಸಲ್ಲಿಸಲಾಗಿದೆ.
-ಕೃಷ್ಣ, ಎಇಇ, ಲೋಕೋಪಯೋಗಿ ಇಲಾಖೆ

ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ 60 ಕಿ.ಮೀ. ರಸ್ತೆ ಹಾನಿಯಾಗಿದೆ. ಎರಡು ಮೋರಿ, ಒಂದು ಸೇತುವೆಯ ತಡೆಗೋಡೆಗೆ ಧಕ್ಕೆಯಾಗಿದ್ದು, ಇವುಗಳ ದುರಸ್ತಿಗಾಗಿ 3.84 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುದಾನ ಬಿಡುಗಡೆಯಾದ ತಕ್ಷಣ ಕಾಮಗಾರಿ ಆರಂಭಿಸಲಾಗುವುದು.
-ಮಹೇಶ್‌ ಎಇಇ, ಜಿಪಂ ಎಂಜಿನಿಯರಿಂಗ್‌ ವಿಭಾಗ

ತಾಲೂಕಿನಲ್ಲಿ ಪ್ರವಾಹದ ಹಾನಿಯಿಂದಾಗಿರುವ ರಸ್ತೆ-ಸೇತುವೆ ಮತ್ತಿತರ ಹಾನಿ ಬಗ್ಗೆ ರಾಜ್ಯ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ‌ ಮಾಹಿತಿ ನೀಡಲಾಗಿದೆ. ಹಣ ಬಿಡುಗಡೆಯಾದ ನಂತರ ದುರಸ್ತಿ ಕಾರ್ಯ ಕೈಗೊಳ್ಳಲಾಗುವುದು.
-ವೀಣಾ, ಉಪವಿಭಾಗಾಧಿಕಾರಿ

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.