ತ್ರಿನೇಶ್ವರಸ್ವಾಮಿಗೆ 11 ಕೆ.ಜಿ. ತೂಕದ ಚಿನ್ನದ ಮುಖವಾಡ
Team Udayavani, Mar 5, 2019, 7:49 AM IST
ಮೈಸೂರು: ಅರಮನೆ ಆವರಣದಲ್ಲಿರುವ ತ್ರಿನೇಶ್ವರಸ್ವಾಮಿ ದೇವಾಲಯದಲ್ಲಿ ಶಿವರಾತ್ರಿ ಪ್ರಯುಕ್ತ ತ್ರಿನೇಶ್ವರ ಸ್ವಾಮಿಗೆ ಚಿನ್ನದ ಕೊಳಗ ಧಾರಣೆ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮುಂಜಾನೆಯೇ ದೇವಾಲಯಕ್ಕೆ ಆಗಮಿಸಿದ್ದ ಸಹಸ್ರಾರು ಭಕ್ತರು, ಚಿನ್ನದ ಕೊಳಗ ಧಾರಣೆ ಮಾಡಲಾಗಿದ್ದ ತ್ರಿನೇಶ್ವರಸ್ವಾಮಿಯ ದರ್ಶನ ಪಡೆದು ಧನ್ಯರಾದರು.
ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ತ್ರಿಷಿಕಾಕುಮಾರಿ ಒಡೆಯರ್ ಅವರು ಪುತ್ರ ಆದ್ಯವೀರ್ ಒಡೆಯರ್ ಜೊತೆಗೆ ತೆರಳಿ ತ್ರಿನೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಸೋಮವಾರ ಮುಂಜಾನೆ 3 ಗಂಟೆಯಿಂದಲೇ ದೇವಾಲಯದಲ್ಲಿ ಪೂಜಾ ಕಾರ್ಯ ಆರಂಭಿಸಲಾಯಿತು.
4.30ಕ್ಕೆ ದೇವರಿಗೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಬಿಲ್ವಾರ್ಚನೆ, ಮಹಾ ನಿವೇದನೆ ಸೇರಿದಂತೆ ವಿಶೇಷ ಅಭಿಷೇಕ ಮಾಡಲಾಯಿತು. ನಂತರ, ಜಿಲ್ಲಾ ಖಜಾನೆಯಿಂದ ಶನಿವಾರ ಹಸ್ತಾಂತರಿಸಲಾಗಿದ್ದ ಮಹಾರಾಜ ಜಯಚಾಮರಾಜ ಒಡೆಯರ್ ಕೊಡುಗೆಯಾಗಿ ನೀಡಿರುವ 11 ಕೆ.ಜಿ. ತೂಕದ ಚಿನ್ನದ ಮುಖವಾಡವನ್ನು ಪೊಲೀಸ್ ಬಂದೋಬಸ್ತ್ನಲ್ಲಿ ಚಾಮುಂಡಿಬೆಟ್ಟದ ಕಾರ್ಯ ನಿರ್ವಾಹಣಾಧಿಕಾರಿ, ಮುಜರಾಯಿ ತಹಶೀಲ್ದಾರ್, ಮುಖ್ಯಆಗಮಿಕರು, ಅರಮನೆ ಮಂಡಳಿ ಅಧಿಕಾರಿಗಳ ಸಮ್ಮುಖದಲ್ಲಿ ತ್ರಿನೇಶ್ವರ ಸ್ವಾಮಿಗೆ ಧಾರಣೆ ಮಾಡಲಾಯಿತು.
ಬಳಿಕ ಮಹಾ ನಿವೇದನೆ ಸೇರಿ ಇನ್ನಿತರ ವಿಶೇಷ ಪೂಜೆ ನೆರವೇರಿಸಿ ಮಹಾ ಮಂಗಳಾರತಿ ಮಾಡುವ ಮೂಲಕ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಮಹಾ ಶಿವರಾತ್ರಿಯ ಪ್ರಯುಕ್ತ ತ್ರಿನೇಶ್ವರ ಸ್ವಾಮಿಗೆ ಆಹೋರಾತ್ರಿ ಪೂಜೆ ಸಲ್ಲಿಸಲಾಯಿತು. ಜೊತೆಗೆ ಅಹೋರಾತ್ರಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ