12 ಕೋಟಿ ವೆಚ್ಚದ ರಸ್ತೆ ಕಾಮಗಾರಿ ಅವೈಜ್ಞಾನಿಕ


Team Udayavani, Aug 27, 2019, 3:00 AM IST

12koti-vech

ಎಚ್‌.ಡಿ.ಕೋಟೆ: ಪಟ್ಟಣದಿಂದ ನಾಗರಹೊಳೆ ಹಾಗೂ ತಾಲೂಕಿನ ಹತ್ತಾರು ಗ್ರಾಮಗಳು ಸೇರಿದಂತೆ ಕೊಡಗು ಜಿಲ್ಲೆಯ ಬಾಳಲೇ, ವೀರಾಜಪೇಟೆ ಮತ್ತು ಕುಟ್ಟ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಮೂರ್ಕಲ್‌ ರಸ್ತೆ ಡಾಂಬರೀಕರಣ ಕಾಮಗಾರಿ ಮಳೆ ನಡುವೆಯೇ ಆರಂಭಗೊಂಡಿದ್ದು, ಗುಣಮಟ್ಟ ಹಾಗೂ ಅವೈಜ್ಞಾನಿಕ ಕಾಮಗಾರಿ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ರಸ್ತೆಯಲ್ಲಿ ಗುಂಡಿಗಳು: ಇದೇ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ತಾಲೂಕು ಬಸ್‌ ಘಟಕ ಇದ್ದು, ಘಟಕದ ನೂರಾರು ಬಸ್‌ಗಳು ಸೇರಿದಂತೆ ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತವೆ. ಅನೇಕ ವರ್ಷಗಳ ರಸ್ತೆಗೆ ಹಾಕಲಾಗಿದ್ದ ಡಾಂಬರ್‌ ಕಿತ್ತು ರಸ್ತೆಯಲ್ಲಿ ದೊಡ್ಡ ಗುಂಡಿ ಸೃಷ್ಟಿಯಾಗಿ ವಾಹನ ಸವಾರರು ಸಂಚರಿಸಲು ಹರಸಾಹಸ ಪಡುವಂತಾಗಿತ್ತು.

12 ಕೋಟಿ ವೆಚ್ಚದ ಯೋಜನೆ: ಪ್ರತಿದಿನ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಅನುಭವಿಸುತ್ತಿರುವ ಯಾತನೆ ಹಾಗೂ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಪಟ್ಟಣದಿಂದ ತಾಲೂಕಿನ ಕಲ್ಲಹಟ್ಟಿ ಗ್ರಾಮದವರೆಗೆ 12 ಕಿ.ಮೀ. ರಸ್ತೆಯನ್ನು 12 ಕೋಟಿ ರೂ.ವೆಚ್ಚ (ಸಿಆರ್‌ಎಫ್‌ ಅನುದಾನ)ದಲ್ಲಿ ರಸ್ತೆಗೆ ನೂತನ ಡಾಂಬರೀಕರಣಕ್ಕೆ ಕಳೆದ ವರ್ಷ ಚಾಲನೆ ನೀಡಲಾಗಿತ್ತು.

ಕಳಪೆ ಕಾಮಗಾರಿ: ಸುಮಾರು ಒಂದು ತಿಂಗಳಿನಿಂದ ಈ ಭಾಗದಲ್ಲಿ ಭಾರೀ ಮಳೆಯಾಗಿ ರಸ್ತೆ ಮೇಲೆ ಹರಿಯುತ್ತಿದ್ದ ನೀರು ಅಲ್ಲಲ್ಲಿ ನಿಂತಿದ್ದರೂ ಗುತ್ತಿಗೆದಾರ ಮಾತ್ರ ಮಳೆಯ ನಡುವೆಯೇ ಕಾಮಗಾರಿ ನಡೆಸುತ್ತಿದ್ದಾರೆ. ಮಳೆಯ ನಡುವೆಯೇ ಕಾಮಗಾರಿ ನಡೆದರೆ ರಸ್ತೆ ಕಳಪೆಯಾಗುತ್ತದೆ ಎಂದು ನಾಗರಿಕರು ದೂರಿದ್ದಾರೆ.

ಅವೈಜ್ಞಾನಿಕ ಕಾಮಗಾರಿ: ಇದು ತುಂಬಾ ವರ್ಷದ ಹಿಂದೆ ನಿರ್ಮಾಣವಾಗಿದ್ದ ರಸ್ತೆಯಾಗಿದ್ದು, ರಸ್ತೆಗೆ ಹಿಂದೆ ಹಾಕಲಾಗಿದ್ದ ಹಳೆ ಡಾಂಬರ್‌ ಮತ್ತು ಸತ್ವ ಕಳೆದುಕೊಂಡಿರುವ ಮಣ್ಣುನ್ನು ತೆಗೆದು, ಕೆಲವು ಕಡೆ ರಸ್ತೆಯ ಎತ್ತರವನ್ನು ಹೆಚ್ಚಿಸಿ ಹಂತ ಹಂತವಾಗಿ ಜಲ್ಲಿ ಮತ್ತು ಗುಣಮಟ್ಟದ ಗ್ರಾವೆಲ್‌ ಮಣ್ಣು, ವೆಟ್‌ಮಿಕ್ಸ್‌ ಹಾಕಿ ರೋಲರ್‌ ಮಾಡಿ ನಂತರ ಡಾಂಬರೀಕರಣ ಮಾಡಬೇಕು ಎನ್ನುವ ನಿಯಮ ಇದೆ.

ಅದರೆ, ಗುತ್ತಿಗೆದಾರ ಮಾತ್ರ ಹಳೆಯ ರಸ್ತೆಯ ಮೇಲಿದ್ದ ಹಳಿದುಳಿದ ಹಳೆ ಡಾಂಬರನ್ನು ಸರಿಯಾಗಿ ತೆರವು ಮಾಡದೆ ಅದರ ಮೇಲೆಯೇ ಜಲ್ಲಿ ಮಣ್ಣು ಸುರಿದು ಡಾಂಬರೀಕರಣಕ್ಕೆ ಮುಂದಾಗಿದ್ದರು. ಇದನ್ನು ಕಂಡ ಪಟ್ಟಣದ ನಾಗರಿಕರು ಸ್ಥಳದಲ್ಲಿ ಕಾಮಗಾರಿ ನಿರ್ವಹಿಸುತ್ತಿದ್ದ ವ್ಯಕ್ತಿ¤ಯನ್ನು ಪ್ರಶ್ನಿಸಿ, ನಂತರ ಕರೆ ಮಾಡಿ ಇಲ್ಲಿನ ಅವ್ಯವಸ್ಥೆ ಕುರಿತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಸ್ಥಳ ಪರಿಶೀಲನೆ: ನಂತರ ಸ್ಥಳಕ್ಕೆ ದೌಡಾಯಿಸಿ ಬಂದ ಕಿರಿಯ ಎಂಜಿನಿಯರ್‌ ಕಾಮಗಾರಿ ನಿರ್ವಹಿಸುತ್ತಿದ್ದ ವ್ಯಕ್ತಿಗೆ ಹಳೆ ಡಾಂಬರನ್ನು ಪೂರ್ಣ ಪ್ರಮಾಣದಲ್ಲಿ ತೆಗೆದು ಕಾಮಗಾರಿ ನಡೆಸಲು ಸೂಚಿಸಿದರು. ಸ್ಥಳದಲ್ಲಿದ್ದ ಜನರಿಗೆ ಕಾಮಗಾರಿಯಲ್ಲಿ ಯಾವುದೇ ಲೋಪವಾಗದಂತೆ ಗುಣಮಟ್ಟದಲ್ಲಿ ರಸ್ತೆ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.

ತಾಲೂಕು ಕೇಂದ್ರ ಸ್ಥಾನದಲ್ಲಿರುವ ಈ ರಸ್ತೆ ಅದರಲ್ಲೂ ಕೂಗಳತೆ ದೂರದಲ್ಲಿಯೇ ಲೋಕೋಪಯೋಗಿ ಇಲಾಖೆ ಕಚೇರಿ ಇದ್ದರೂ ಕಾಮಗಾರಿ ಉಸ್ತುವಾರಿ ಹೊತ್ತ ಹಿರಿಯ, ಕಿರಿಯ ಅಭಿಯಂತರರ ಅನುಪಸ್ಥಿತಿಯಲ್ಲಿ ಕಾಮಗಾರಿ ನಡೆಯುತ್ತಿದೆ. ಇನ್ನಾದರೂ ಕ್ಷೇತ್ರದ ಶಾಸಕರು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮೂರ್ಕಲ್‌ ರಸ್ತೆ ಕಾಮಗಾರಿಯ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಗುಣಮಟ್ಟ ರಸ್ತೆ ನಿರ್ಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಎಚ್‌.ಡಿ.ಕೋಟೆ ಪಟ್ಟಣದಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿರುವ ಮೂರ್ಕಲ್‌ ರಸ್ತೆ ಡಾಂಬರೀಕರಣ ಕಾಮಗಾರಿಯನ್ನು ಅಂದಾಜು ಪಟ್ಟಿಯಂತೆ ನಿರ್ವಹಿಸುವಂತೆ ಸಂಬಂಧಪಟ್ಟ ಎಂಜಿನಿಯರ್‌ಗೆ ಸೂಚನೆ ನೀಡಿದ್ದೇನೆ. ಶೀಘ್ರದಲ್ಲೇ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸುತ್ತೇನೆ.
-ಅನಿಲ್‌ ಚಿಕ್ಕಮಾದು, ಶಾಸಕ

ಈ ಮೊದಲು ರಸ್ತೆ ಚಿಕ್ಕದಾಗಿತ್ತು, ಈಗ ರಸ್ತೆ ಅಗಲೀಕರಣ ಆಗಿರುವುದರಿಂದ ಈ ಹಿಂದೆ ರಸ್ತೆ ಬದಿ ಇದ್ದ ವಿದ್ಯುತ್‌ ಕಂಬ, ಭಾರಿ ಗಾತ್ರದ ಮರಗಳು, ಕುಡಿಯುವ ನೀರಿನ ವಾಲ್‌ಗ‌ಳು ಈಗ ರಸ್ತೆ ಒಳ ಭಾಗಕ್ಕೆ ಬಂದಿವೆ. ಅವುಗಳನ್ನು ಸ್ಥಳಾಂತರ ಮಾಡಿ ಕಾಮಗಾರಿ ನಡೆಸುವಂತೆ ಶಾಸಕರು ಸೂಚಿಸಿದರೂ ಗುತ್ತಿಗೆದಾರ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ. ಇನ್ನೇರಡು ದಿನದಲ್ಲಿ ಸ್ಥಳಾಂತರ ಮಾಡದಿದ್ದರೆ ಕಾಮಗಾರಿಯನ್ನು ತಡೆಯಲಾಗುವುದು.
-ಪುಟ್ಟಬಸವನಾಯ್ಕ, ಪುರಸಭೆ ಮಾಜಿ ಅಧ್ಯಕ್ಷ

ರಸ್ತೆ ಕಾಮಗಾರಿಯನ್ನು ಮಳೆಯ ನಡುವೆಯೇ ನಡೆಸುತ್ತಿರುವುದು ಸರಿಯಲ್ಲ. ರಸ್ತೆಗೆ ಹತ್ತಾರೂ ವರ್ಷಗಳ ಹಿಂದೆ ಹಾಕಲಾಗಿದ್ದ ಡಾಂಬರನ್ನು ಪೂರ್ಣ ಪ್ರಮಾಣದಲ್ಲಿ ತೆಗೆಯದೆ ಕಾಮಗಾರಿ ನಡೆಸಲಾಗುತ್ತಿದೆ. ಜೊತೆಗೆ ರಸ್ತೆ ಮಧ್ಯೆ ಅಡ್ಡಲಾಗಿ ಹಾಕಬೇಕಿದ್ದ ಡಕ್‌ಗಳನ್ನು ನಿರ್ಮಿಸುತ್ತಿಲ್ಲ. ಈಗ ರಸ್ತೆ ಮಧ್ಯೆ ಇರುವ ಕುಡಿಯುವ ನೀರಿನ ವಾಲ್‌ಗ‌ಳನ್ನು ಸ್ಥಳಾಂತರಿಸಿಲ್ಲ, ಸಂಬಂಧಪಟ್ಟವರು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು.
-ಶ್ರೀನಿವಾಸ್‌, ಪಟ್ಟಣ ನಿವಾಸಿ

* ಬಿ.ನಿಂಗಣ್ಣಕೋಟೆ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.