1226 ಎಕರೆ ಬೆಳೆ, 818 ಮನೆ ಹಾನಿ, 2,064 ಸಂತ್ರಸ್ರರು


Team Udayavani, Aug 12, 2019, 3:00 AM IST

1226akre

ಮೈಸೂರು: ಕಳೆದ ಒಂದು ವಾರದಿಂದ ಕಾವೇರಿ ಮತ್ತು ಕಬಿನಿ ಜಲಾನಯನ ಪ್ರದೇಶದಲ್ಲಿ ಎಡಬಿಡದೆ ಮಳೆ ಸುರಿದ ಹಿನ್ನೆಲೆ ಜಿಲ್ಲೆಯಲ್ಲಿ 1226 ಎಕರೆ ಪ್ರದೇಶದಲ್ಲಿ ಬೆಳೆ ನಷ್ಟವಾಗಿದ್ದು, 818 ಮನೆಗಳು ಹಾನಿಯಾಗಿದೆ. ಜೊತೆಗೆ 2064 ಮಂದಿ ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ ಎಂದು ಜಿಲ್ಲಾಧಿಕಾರಿ ಅಭಿರಾಮ್‌ ಜಿ. ಶಂಕರ್‌ ತಿಳಿಸಿದ್ದಾರೆ.

ಪ್ರವಾಹದಿಂದಾಗಿ ಜಿಲ್ಲೆಯ ನಂಜನಗೂಡು ಮತ್ತು ಎಚ್‌.ಡಿ.ಕೋಟೆ ತಾಲೂಕುಗಳ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ನಷ್ಟವಾಗಿದೆ. 8 ತಾಲೂಕುಗಳ ಮುಖ್ಯರಸ್ತೆಗಳ ಸೇತುವೆಗಳು ಜಲಾವೃಗೊಂಡು ಮಾರ್ಗ ಬದಲಾಯಿಸಲಾಗಿದೆ.

1226 ಎಕರೆ ಬೆಳೆ ಹಾನಿ: ಹಿಂಗಾರಿನಲ್ಲಿ ಬಿತ್ತನೆ ಮಾಡಿದ್ದ ಫ‌ಸಲು ಕೈಗೆ ಬರುವ ಮುನ್ನವೇ ಪ್ರವಾಹಕ್ಕೆ ಸಿಲುಕಿ ಹಾನಿಯಾಗಿದ್ದು, ರೈತರಿಗೆ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ನಂಜನಗೂಡು ತಾಲೂಕಿನಲ್ಲಿ 370 ಎಕರೆ, ಎಚ್‌.ಡಿ.ಕೋಟೆ ತಾಲೂಕಿನಲ್ಲಿ 847 ಎಕರೆ ಸೇರಿ ಒಟ್ಟು 1,226 ಎಕರೆ ಪ್ರದೇಶದ ಬೆಳೆ ನಾಶವಾಗಿದೆ.

818 ಮನೆ ಹಾನಿ: ವರುಣನ ಅಬ್ಬರಕ್ಕೆ ಜಿಲ್ಲೆಯಲ್ಲಿ 818 ಮನೆಗಳು ಹಾನಿಯಾಗಿವೆ. ನಂಜನಗೂಡು 379, ಎಚ್‌.ಡಿ.ಕೋಟೆ 215, ಹುಣಸೂರು 129, ಪಿರಿಯಾಪಟ್ಟಣ 39, ಸರಗೂರು 22, ತಿ.ನರಸೀಪುರ 5 ಮತ್ತು ಕೆ.ಆರ್‌.ನಗರ ತಾಲೂಕಿನಲ್ಲಿ 7 ಮನೆಗಳು ಹಾನಿಯಾಗಿವೆ.

ಪರಿಹಾರ ಕೇಂದ್ರಗಳಲ್ಲಿ 2064 ಮಂದಿ: ನಂಜನಗೂಡು ತಾಲೂಕಿನ 11 ಪರಿಹಾರ ಕೇಂದ್ರಗಳಲ್ಲಿ 1,277 ಮಂದಿ ಆಶ್ರಯ ಪಡೆದಿದ್ದು, 2 ಗೋಶಾಲೆಯಲ್ಲಿ 75 ಜಾನುವಾರು ಸಂರಕ್ಷಿಸಲಾಗಿದೆ. ಎಚ್‌.ಡಿ.ಕೋಟೆ ತಾಲೂಕಿನ 4 ಪರಿಹಾರ ಕೇಂದ್ರಗಳಲ್ಲಿ 584 ಮಂದಿ, ಹುಣಸೂರು ತಾಲೂಕಿನ 9 ಕೇಂದ್ರಗಳಲ್ಲಿ 155 ಮಂದಿ, ಪಿರಿಯಾಪಟ್ಟಣ ತಾಲೂಕಿನ 2 ಕೇಂದ್ರಗಳಲ್ಲಿ 13 ಮಂದಿ, ಸರಗೂರು ಕೇಂದ್ರದಲ್ಲಿ 35 ಮಂದಿ ಆಶ್ರಯ ಪಡೆದಿದ್ದಾರೆ.

ಮಳೆ ಅನಾಹುತ ಇಬ್ಬರ ಸಾವು: ಪ್ರವಾಹಕ್ಕೆ ಜಿಲ್ಲೆಯಲ್ಲಿ ಓರ್ವ ಮಹಿಳೆ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಮನೆಗೋಡೆ ಕುಸಿದು ಗಣೇಶ್‌(35) ಮತ್ತು ಬಿದರಹಳ್ಳಿಯಲ್ಲಿ ಗೋಡೆ ಕುಸಿದು ಮುಬಿನಾ ತಾಜ್‌ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.