ಏ.13ಕ್ಕೆ ನಂಜುಂಡೇಶ್ವರನ ಪ್ರಸಾದ ಯಾರಿಗೆ?


Team Udayavani, Apr 11, 2017, 12:58 PM IST

mys2.jpg

ಮೈಸೂರು: ರಾಜಾದ್ಯಂತ ಭಾರೀ ಕುತೂಹಲ ಕೆರಳಿಸಿದ್ದ ನಂಜನಗೂಡು ಉಪ ಚುನಾವಣೆಯ ಕಣದಲ್ಲಿದ್ದ ಅಭ್ಯರ್ಥಿಗಳ ಭವಿಷ್ಯ ಮತಯಂತ್ರಗಳಲ್ಲಿ ಭ ದ್ರವಾಗಿದ್ದು, ಮತ ಎಣಿಕೆ ನಡೆಯುವ ಏ.13 ರಂದು ಯಾರಿಗೆ ನಂಜುಂಡೇಶ್ವರನ ಪ್ರಸಾದ ಸಿಗಲಿದೆ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ. ನಂಜನಗೂಡಿನ ದೇವೀರಮ್ಮನ ಹಳ್ಳಿ ಗೇಟ್‌ ಬಳಿ ಇರುವ ಜೆಎಸ್‌ಎಸ್‌ ಪ್ರಥಮ ದರ್ಜೆ ಕಾಲೇಜಿನಲ್ಲಿ ಏ.13ರಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಫ‌ಲಿತಾಂಶ ಹೊರಬೀಳಲಿದೆ.

ಭಾನುವಾರ ನಡೆದ ಉಪ ಚುನಾವಣೆಯಲ್ಲಿ ಮತ ಚಲಾವಣೆಯಾದ ಮತಯಂತ್ರಗಳು ಹಾಗೂ ವಿವಿ ಪ್ಯಾಟ್‌ಗಳನ್ನು ಅಭ್ಯರ್ಥಿ, ಅಭ್ಯರ್ಥಿ ಪರ ಏಜೆಂಟರು, ಚುನಾವಣಾ ವೀಕ್ಷಕರ ಸಮಕ್ಷಮದಲ್ಲಿ ಭಾನುವಾರ ರಾತ್ರಿ 11.55 ಗಂಟೆಗೆ ಭದ್ರತಾ ಕೊಠಡಿ ಯಲ್ಲಿ ಇರಿಸಲಾಗಿದ್ದು, ಭದ್ರತಾ ಕೊಠಡಿಗೆ 24 ಗಂಟೆಗಳ ಕಾಲ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು, ಕೇಂದ್ರೀಯ ಅರೆ ಸೇನಾ ಪಡೆಯನ್ನು ಭದ್ರತೆಗೆ ನಿಯೋಜಿಸಲಾಗಿದ್ದು, ಕಾಲೇಜಿನ ಹೊರ ಭಾಗದಲ್ಲಿ ಸ್ಥಳೀಯ ಪೊಲೀಸರನ್ನು ಭದ್ರತೆಗೆ ನೇಮಿಸಲಾಗಿದೆ.

ಶೇ. 77.45 ಮತದಾನ 101930 ಪುರುಷ ಹಾಗೂ 99879 ಮಹಿಳಾ ಮತದಾರರು ಸೇರಿದಂತೆ ಕ್ಷೇತ್ರದ ಒಟ್ಟು 201818 ಮತದಾರರ ಪೈಕಿ, 156315 ಮತದಾರರು ಹಕ್ಕು ಚಲಾಯಿಸಿದ್ದು, ಒಟ್ಟಾರೆ ಶೇ.77.45 ಮತದಾನವಾಗಿದೆ. ನಂಜನಗೂಡು ಪಟ್ಟಣದ 24ನೇ ವಾರ್ಡ್‌ ಮತಗಟ್ಟೆ ಸಂಖ್ಯೆ 51ರಲ್ಲಿ ಅತಿ ಕಡಿಮೆ (ಶೇ.47.51) ಮತದಾನವಾಗಿದ್ದು, ಕಾಳೀಹುಂಡಿಯ ಮತಗಟ್ಟೆ ಸಂಖ್ಯೆ 144ರಲ್ಲಿ ಅತಿ ಹೆಚ್ಚಿನ (ಶೇ.95.53) ಮತದಾನವಾಗಿದೆ.

ಭಾರತ ಚುನಾವಣಾ ಆಯೋಗ ನೀಡಿರುವ ಮತದಾರರ ಗುರುತಿನ ಚೀಟಿ ಬಳಸಿ 1,24,163 ಮಂದಿ ಮತದಾನ ಮಾಡಿದ್ದರೆ, ಉಳಿದವರು ಇತರೆ ಗುರುತಿನ ಚೀಟಿಗಳನ್ನು ಬಳಸಿ ಮತ ಚಲಾಯಿಸಿದ್ದಾರೆ. 236 ಮತಗಟ್ಟೆಗಳನ್ನು ಹೊಂದಿರುವ ನಂಜನ ಗೂಡು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಯಾವುದೇ ತಾಂತ್ರಿಕ ತೊಂದರೆ ಕಾಣಿಸಿ ಕೊಂಡರೂ ತಕ್ಷಣ ಬದಲೀ ವ್ಯವಸ್ಥೆ ಮಾಡುವ ಸಲುವಾಗಿ ಹೆಚ್ಚುವರಿ ಯಂತ್ರಗಳನ್ನು ತರಿಸಿ ಕಾದಿರಿಸಿ ಕೊಳ್ಳಲಾಗಿತ್ತು, 354 ಬ್ಯಾಲೆಟ್‌ ಯೂನಿಟ್‌, 307 ಕಂಟ್ರೋಲ್‌, ಯೂನಿಟ್‌ ಹಾಗೂ 366 ವಿವಿ ಪ್ಯಾಟ್‌ಗಳನ್ನು ತರಿಸಲಾಗಿತ್ತು ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಿ.ರಂದೀಪ್‌ ತಿಳಿಸಿದ್ದಾರೆ.

ಈ ಪೈಕಿ ತಾಂತ್ರಿಕ ತೊಂದರೆ ಕಾಣಿಸಿಕೊಂಡಿದ್ದರಿಂದ 2 ಬ್ಯಾಲೆಟ್‌ ಯೂನಿಟ್‌, 2 ಕಂಟ್ರೋಲ್‌ ಯೂನಿಟ್‌ ಹಾಗೂ 13 ವಿವಿ ಪ್ಯಾಟ್‌ಗಳನ್ನು ಬದಲಾಯಿಸ ಲಾಯಿತು ಎಂದು ಹೇಳಿದ್ದಾರೆ. ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳಿಗೆ ಕೇಂದ್ರೀಯ ಸಶಸ್ತ್ರ ಪೊಲೀಸ್‌ ಪಡೆ ಸೇರಿದಂತೆ 2223 ಪೊಲೀಸರನ್ನು ಚುನಾವಣಾ ಭದ್ರತೆ ಕಾರ್ಯಕ್ಕೆ ಬಳಸಿಕೊಳ್ಳಲಾಗಿದೆ.

ಪ್ರಕರಣ: ಚುನಾವಣೆ ಪ್ರಕ್ರಿಯೆ ಆರಂಭವಾದ ದಿನದಿಂದ ಈವರೆಗೆ 77.33 ಲಕ್ಷ ರೂ. ನಗದು ವಶಪಡಿಸಿ ಕೊಂಡಿದ್ದು, ಮಾದರಿ ನೀತಿ ಸಂಹಿತೆ ಉಲ್ಲಂಘನೆ ಸಂಬಂಧ 107 ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಅಬಕಾರಿ ಕಾಯ್ದೆ ಉಲ್ಲಂಘನೆ ಸಂಬಂಧ 72 ಪ್ರಕರಣ ದಾಖಲಾಗಿದ್ದು, 85,930 ರೂ. ಮೌಲ್ಯದ 249.77 ಲೀಟರ್‌ ಮದ್ಯ ವಶಪಡಿಸಿಕೊಳ್ಳಲಾಗಿದೆ. ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದಂತೆ 465 ಜನರ ವಿರುದ್ಧ ಜಾಮೀನು ರಹಿತ ವಾರೆಂಟ್‌ ಹೊರಡಿಸಲಾಗಿದ್ದು, 628 ಜನರ ವಿರುದ್ಧ ಸಿಆರ್‌ಪಿಸಿಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Untitled-1

BJP-JDS 19 ಸಂಸದರಿದ್ರೂ ಬಜೆಟ್‌ನಲ್ಲಿ ರಾಜ್ಯಕ್ಕೆ ನಾಮ: ಎಂ.ಲಕ್ಷ್ಮಣ್‌

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.