ಹುಣಸೂರು: ಒಂದು ದಿನಕ್ಕೆ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ 14 ವರ್ಷದ ಬಾಲಕಿ.!


Team Udayavani, Apr 30, 2022, 12:04 PM IST

ಹುಣಸೂರು: ಒಂದು ದಿನಕ್ಕೆ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ 14 ವರ್ಷದ ಬಾಲಕಿ.!

ಹುಣಸೂರು: ಕ್ಯಾನ್ಸರ್ ಪೀಡಿತೆ ಬಾಲಕಿಯೊಬ್ಬಳ ಜೀವನದ ಬಹುದೊಡ್ಡ ಆಸೆಯನ್ನು ಒಂದು ದಿನದ ಮಟ್ಟಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ನನಸಾಗಿಸಿದ ಘಟನೆ ಹುಣಸೂರಿನಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಬೇವಕಲ್ಲು ಗ್ರಾಮದ ಈರಯ್ಯ-ನೇತ್ರಾವತಿ ದಂಪತಿ  ಪುತ್ರಿ 14 ವರ್ಷದ ಐಶ್ವರ್ಯ ಒಂದು ದಿನಕ್ಕೆ ಆರ್.ಎಫ್.ಓ ಆಗಿದ್ದಾಕೆ.

ಈಕೆ ಮೂಳೆ  ಕ್ಯಾನ್ಸರ್‌ಗೆ ತುತ್ತಾಗಿ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ  ಪಡೆಯುತ್ತಿದ್ದಾಳೆ. ಮೈಸೂರು ಅರಣ್ಯ ಭವನದಲ್ಲಿ “ಡಿ” ದರ್ಜೆ ನೌಕರರಾಗಿರುವ ಐಶ್ವರ್ಯಳ ಅಜ್ಜಿ ಹೇಳುತ್ತಿದ್ದ ಕತೆಗಳನ್ನು ಕೇಳಿ ಅರಣ್ಯ, ವನ್ಯಜೀವಿ ಹಾಗೂ ಪರಿಸರ ಸಂರಕ್ಷಣೆ ಕುರಿತು ಆಸಕ್ತಿ ವ್ಯಕ್ತಪಡಿಸುತ್ತಿದ್ದಳು.

ಬಾಲ್ಯದಿಂದಲೂ ಐಶ್ವರ್ಯಳಿಗೆ ಅರಣ್ಯಾಧಿಕಾರಿಯಾಗಬೇಕು ಎಂಬ ಹಂಬಲವಿತ್ತು. ಪೋಷಕರಿಗೂ ಮಗಳನ್ನು  ಅರಣ್ಯಾಧಿಕಾರಿಯಾಗಿಸಬೇಕೆಂಬ ಕನಸು ಹೊತ್ತಿದ್ದರು.  ಆದರೆ ಮಗಳಿಗೆ  ಕ್ಯಾನ್ಸರ್ ಇದೆ ಎಂಬುದನ್ನು ತಿಳಿದು ಸಂಕಟಪಟ್ಟರು.

ಆಸೆಗೆ ನೀರೇರೆದ ಫೌಂಡೇಶನ್; ಇಂಥ ಮಕ್ಕಳ ಕನಸನ್ನು  ನನಸಾಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರಿನ ಮೇಕ್  ವಿಶ್ ಫೌಂಡೇಶನ್ ಆಪ್ ಇಂಡಿಯಾ ಸಂಸ್ಥೆಯ ಅರುಣ್‌ಕುಮಾರ್ ಮತ್ತು  ಬಾಸ್ಕೋರವರ ಸತತ ಪರಿಶ್ರಮದಿಂದ ಅರಣ್ಯಾಧಿಕಾರಿಯಾಗುವ ಐಶ್ವರ್ಯರ  ಆಸೆಯನ್ನು ನನಸಾಗಿಸಲು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಗಮನಸೆಳೆದು  ಐಶ್ವರ್ಯಳಿಗೆ ಖಾಕಿ ಸಮವಸ್ತ್ರ ಹಾಕುವ ಅವಕಾಶ ಕಲ್ಪಿಸಿಕೊಟ್ಟರು.

ಗುರುವಾರ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ನಿರ್ದೇಶಕರ ಕಛೇರಿಯಲ್ಲಿ ಐಶ್ವರ್ಯ ವಲಯ ಅರಣ್ಯಾಧಿಕಾರಿಯಾಗಿ  ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ವಿ.ಸತೀಶ್‌ರಲ್ಲಿ ವರದಿ ಮಾಡಿಕೊಂಡು,  ಏ.29ರ ಶುಕ್ರವಾರ ನಾಗರಹೊಳೆ ವನ್ಯಜೀವಿ ವಲಯದಲ್ಲಿ ಸಿಬ್ಬಂದಿಗಳಿಂದ  ಗೌರವರಕ್ಷೆ ಸ್ವೀಕರಿಸಿ, ವಲಯ ಕಛೇರಿಯಲ್ಲಿ ವಲಯ ಅರಣ್ಯಾಧಿಕಾರಿ  ಮುಹಮ್ಮದ್ ಜೀಷಾನ್‌ರಿಂದ ಅಧಿಕಾರ ಸ್ವೀಕರಿಸಿ, ಸಿಬ್ಬಂದಿಗಳೊಂದಿಗೆ ದೈನಂದಿನ  ಚಟುವಟಿಕೆಗಳ ಬಗ್ಗೆ ಚರ್ಚಿಸಿ, ಕಳ್ಳಬೇಟೆ ತಡೆ ಶಿಬಿರ ಹಾಗೂ ನಾಗರಹೊಳೆ ಉದ್ಯಾನದ ಅರಣ್ಯ  ಗಡಿಗಳನ್ನು ಪರಿಶೀಲಿಸಿದರು.

ವನ್ಯಜೀವಿಗಳ ಕಂಡು  ಪುಳಕಿತರಾಗಿದ್ದರು. ಒಂದು ದಿನದ ಕರ್ತವ್ಯ ಮುಗಿಸಿ, ಆರ್‌ಎಫ್‌ಓ  ಐಶ್ವರ್ಯ ತಾಯಿಯೊಂದಿಗೆ ಸಮವಸ್ತ್ರದಲ್ಲೇ ಊರಿಗೆ ಪಯಣ  ಬೆಳೆಸಿದಳು. ಹುಣಸೂರು ಕಛೇರಿಯಿಂದ ಎಸಿಎಫ್ ಸತೀಶ್ ಬೀಳ್ಕೊಟ್ಟರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.