16ರಿಂದ 3 ದಿನ ಉತ್ತನಹಳ್ಳಿ ತ್ರಿಪುರ ಸುಂದರಿ ಜಾತ್ರೆ


Team Udayavani, Feb 6, 2020, 3:00 AM IST

16rinda

ಮೈಸೂರು: ಮಾರಿಸಾರು ಉತ್ತನಹಳ್ಳಿ ಜಾತ್ರೆ ಎಂದೇ ಪ್ರಸಿದ್ಧವಾಗಿರುವ ಶ್ರೀ ಜ್ವಾಲಾಮುಖೀ ತ್ರಿಪುರ ಸುಂದರಿ ಅಮ್ಮನವರ ಜಾತ್ರಾ ಮಹೋತ್ಸವು ಫೆ.16ರಿಂದ 18 ರವರೆಗೆ ನಡೆಯಲಿದೆ. ಫೆ.16ರಂದು ಭಾನುವಾರ ಮಾಘ ಬಹುಳ ಅಷ್ಟಮಿ ವಿಶಾಖದ ಅಂಗವಾಗಿ ರಾತ್ರಿ 9 ಗಂಟೆಗೆ ಕನ್ಯಾ ಕನ್ನಡಿ ಉತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜರುಗಲಿದೆ. ಫೆ.17ರಂದು ಸೋಮವಾರ ಮಡೆಪೂಜೆ ಮತ್ತು ತಂಬಿಟ್ಟು ಪೂಜೆ ನಡೆಯಲಿದೆ. ಫೆ.18ರಂದು ದೇವಿಗೆ ವಿವಿಧ ಪೂಜಾ ಕಾರ್ಯಕ್ರಮಗಳು ನೆರವೇರಲಿದೆ.

ನಾಟಕಗಳ ಪ್ರದರ್ಶನ: ಉತ್ತನಹಳ್ಳಿ ಜಾತ್ರೆ ಪ್ರಯುಕ್ತ ಫೆ. 17ರ ಸೋಮವಾರ ರಾತ್ರಿ 9.30ಕ್ಕೆ ಶ್ರೀಶನೈಶ್ಚರಸ್ವಾಮಿ ಭಕ್ತ ಮಂಡಳಿಯಿಂದ ಮಹಿಷಾಸುರ ಮರ್ದಿನಿ ಪೌರಾಣಿಕ ನಾಟಕ, ಏಳಿಗೆಹುಂಡಿಯಲ್ಲಿ ಕನಕದಾಸ ಯುವಕರ ಬಳಗದಿಂದ ಭೂಮಿ ತೂಕದ ಹೆಣ್ಣು ಸಾಮಾಜಿಕ ನಾಟಕ ಮತ್ತು ಡಾ.ಬಿ.ಆರ್‌. ಅಂಬೇಡ್ಕರ್‌ ಅಭಿಮಾನಿಗಳ ಬಳಗದಿಂದ ದಕ್ಷಯಜ್ಞ ಪೌರಾಣಿಕ ನಾಟಕ ಪ್ರದರ್ಶನ ಆಯೋಜಿಸಲಾಗಿದೆ.

ಗೊಂದಲಕ್ಕೆ ತೆರೆ: ಮೈಸೂರು ನಗರ ಹೊರವಲಯದ ಸರ್ಕಾರಿ ಉತ್ತನಹಳ್ಳಿಯ ಶ್ರೀಜ್ವಾಲಾಮುಖೀ ತ್ರಿಪುರ ಸುಂದರಿ ಅಮ್ಮನವರ ಜಾತ್ರಾ ಮಹೋತ್ಸವು ಕ್ಯಾಲೆಂಡರ್‌ ಪ್ರಕಾರ ಫೆ. 16 ರಂದೇ ನಡೆಯಲಿದ್ದು, ಈ ಸಂಬಂಧ ಮೂರು ದಿನಗಳಿಂದ ಸೃಷ್ಟಿಯಾಗಿದ್ದ ಗೊಂದಲಕ್ಕೆ ಜಿಲ್ಲಾಧಿಕಾರಿ ಅಭಿರಾಮ್‌ ಜಿ. ಶಂಕರ್‌ ತೆರೆ ಎಳೆದಿದ್ದಾರೆ.

ಒಂಟಿಕೊಪ್ಪಲು ಪಂಚಾಂಗ ಮತ್ತು ಅರಮನೆ ಪಂಚಾಂಗದಲ್ಲಿ ನಮೂದಾಗಿದ್ದ ದಿನಾಂಕಗಳ ಗೊಂದಲದಿಂದಾಗಿ ಉತ್ತನಹಳ್ಳಿ ಗ್ರಾಮಸ್ಥರು ಗೊಂದಲಕ್ಕೀಡಾಗಿದ್ದರು. ಈ ಸಂಬಂಧ ಸೋಮವಾರವಷ್ಟೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರನ್ನೂ ಭೇಟಿ ಮಾಡಿ ಫೆ.16 ರಂದು ಜಾತ್ರೆ ನಡೆಸಲು ಅನುವು ಮಾಡಿಕೊಡುವಂತೆ ಗ್ರಾಮಸ್ಥರು ಕೇಳಿಕೊಂಡಿದ್ದರು. ಮಂಗಳವಾರ ಜಿಲ್ಲಾಧಿಕಾರಿ ಅಭಿರಾಮ್‌ ಜಿ. ಶಂಕರ್‌ ಅವರನ್ನು ಭೇಟಿಯಾದ ಗ್ರಾಮಸ್ಥರು ಫೆ.16 ರಂದು ಆಚರಿಸಲು ಸಹಕಾರ ನೀಡುವಂತೆ ಕೋರಿದ್ದರು.

ಗ್ರಾಮಸ್ಥ ರ ಮನವಿ ಆಲಿಸಿದ ಜಿಲ್ಲಾಧಿಕಾರಿ, ಮುಜರಾಯಿ ತಹಶೀಲ್ದಾರ್‌ ಯತಿರಾಜ್‌ ಸಂಪತ್‌ಕುಮಾರನ್‌ ಅವರಿಗೆ ಸೂಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದ್ದರು. ಸಂಜೆ ಆಗಮಿಕರ ಸಭೆ ನಡೆಸಿದ ಯತಿರಾಜು ಸಂಪತ್‌ಕುಮಾರನ್‌ ಅಂತಿಮವಾಗಿ ಫೆ.16ರಂದೇ ಜಾತ್ರೆ ನಡೆಸ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಆದೇಶಿಸಿದ್ದಾರೆ. ಅಲ್ಲದೇ ಬಸ್‌ ವ್ಯವಸ್ಥೆ ಕಲ್ಪಿಸಲು ಕೆಎಸ್ಸಾರ್ಟಿಸಿ ನಗರ ವಿಭಾಗದ ಸಂಚಾರ ನಿಯಂತ್ರಣಾಧಿಕಾರಿಗಳಿಗೂ ಪತ್ರ ಬರೆದಿದ್ದಾರೆ.

ದೇಗುಲದ ಆಡಳಿತ ಮಂಡಳಿ ವಿರುದ್ಧ ದೂರು: ಉತ್ತನಹಳ್ಳಿ ಜಾತ್ರಾ ಮಹೋತ್ಸವದ ಗೊಂದಲಕ್ಕೆ ಕಾರಣರಾದ ದೇವಸ್ಥಾನದ ಪಾರುಪತ್ತೇದಾರ ಸುರೇಶ್‌ ಮತ್ತು ಆಗಮಿಕ ಮಹದೇವಪ್ರಸಾದ್‌ ವಿರುದ್ಧ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು. ಸಾವಿರಾರು ಭಕ್ತರ ನಂಬಿಕೆ ವಿಚಾರದಲ್ಲಿ ಗೊಂದಲ ಸೃಷ್ಟಿಸಿದ್ದಾರೆ ಎಂದು ಉತ್ತನಹಳ್ಳಿ ಮತ್ತು ಏಳಿಗೆಹುಂಡಿ ಗ್ರಾಮಸ್ಥರು ಜಿಲ್ಲಾಧಿಕಾರಿ ಅಭಿರಾಮ್‌ ಜಿ. ಶಂಕರ್‌ ಅವರಿಗೆ ದೂರು ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಗ್ರಾಪಂ ಸದಸ್ಯ ಶಿವಬೀರ, ಮಾಜಿ ಸದಸ್ಯ ಬಸವರಾಜು, ಜೆ. ಮರಿಯಪ್ಪ, ಶಿವಣ್ಣ, ಜೆ. ಗೋಪಿ, ಚೌಲಿó ಮಂಜು, ಬಿ. ಯಶವಂತಕುಮಾರ್‌, ಪಿ. ರಾಜು ಇತರರಿದ್ದರು.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.