ಸಿಎಫ್ಟಿಆರ್‌ಐನಿಂದ 2 ಹೊಸ ಉತ್ಪನ್ನ ಬಿಡುಗಡೆ


Team Udayavani, Feb 12, 2019, 7:26 AM IST

m3-cftr.jpg

ಮೈಸೂರು: ಮೈಸೂರಿನ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ (ಸಿಎಫ್ಟಿಆರ್‌ಐ) ದೀರ್ಘ‌ ಕಾಲ ಬಾಳಿಕೆ ಬರುವ 2 ವಿನೂತನ ಉತ್ಪನ್ನಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ.

ಉತ್ತರ ಕರ್ನಾಟಕದಲ್ಲಿ ಸುಪ್ರಸಿದ್ಧವಾದ ಗೋಧಿ ಹುಗ್ಗಿ ಇದೀಗ ಒಂದು ವರ್ಷಗಳ ಕಾಲ ಬಾಳಿಕೆ ಬರುವಂತೆ ಕ್ಯಾನುಗಳಲ್ಲಿ ಪ್ಯಾಕ್‌ ಆಗಿ ದೊರೆಯಲಿದೆ. ಗೋಧಿಯಿಂದ ತಯಾರಿಸಲ್ಪಡುವ ಪಾಯಸದಂತಹ ಈ ತಿನಿಸನ್ನು ಧಾರವಾಡದ ಲತ್ತಿ/ ಲಟ್ಟಿ ಫ‌ುಡ್ಸ್‌ ಕಂಪನಿಯು ತಯಾರಿಸಿ ಮಾರಾಟ ಮಾಡುತ್ತಿದೆ.

ಮೈಸೂರಿನ ಅವಧೂತ ದತ್ತಪೀಠವು ಭಕ್ತರಿಗೆ ವಿತರಿಸುವ ಪ್ರಸಾದಂ, ಸಂಸ್ಥೆಯು ಅಭಿವೃದ್ಧಿಪಡಿಸಿರುವ ಮತ್ತೂಂದು ಉತ್ಪನ್ನ. ಗೋಧಿ ಹಿಟ್ಟು, ಬೆಲ್ಲ, ತುಪ್ಪ, ಗೋಡಂಬಿ-ಬಾದಾಮಿಯಂತಹ ಬೀಜಗಳನ್ನು ಸೇರಿಸಿ ತಯಾರಿಸುವ ಪ್ರಸಾದವು ಈಗ ಟಿನ್‌ ರಹಿತ ಸ್ಟೀಲ್‌ ಡಬ್ಬಿಯಲ್ಲಿ ಪ್ಯಾಕ್‌ ಆಗಿ ದೊರೆಯಲಿದೆ. ಕನಿಷ್ಠ ಮೂರು ತಿಂಗಳು ಈ ಪ್ರಸಾದ ಕೆಡದೆ ಉಳಿಯಲಿದೆ.

ಗಣಪತಿ ಸಚ್ಚಿದಾನಂದ ಆಶ್ರಮ ಎಂದು ಹೆಸರಿರುವ ಶ್ರೀ ದತ್ತಪೀಠ ದೀರ್ಘ‌ ಬಾಳಿಕೆಯ ಪ್ರಸಾದವನ್ನು ಅಭಿವೃದ್ಧಿಪಡಿಸಿಕೊಡುವಂತೆ ವಿನಂತಿಸಿತ್ತು. ಅದಕ್ಕಾಗಿ ಪ್ರಸಾದವನ್ನು ಹರ್ಡಲ್‌ ತಂತ್ರಜ್ಞಾನವನ್ನು ಬಳಸಿ ಸಂಸ್ಕರಿಸಿ ಪ್ಯಾಕ್‌ ಮಾಡಿದೆವು.

ಸಾಮಾನ್ಯ ಉಷ್ಣತೆಯಲ್ಲಿ ಈ ಪ್ರಸಾದ ಮೂರು ತಿಂಗಳು ಬಾಳಿಕೆ ಬರುತ್ತದೆ ಎನ್ನುತ್ತಾರೆ ಪ್ರಸಾದವನ್ನು ಅಭಿವೃದ್ಧಿಪಡಿಸಿದ ತಂಡದ ಸದಸ್ಯರಾದ ಸಿಎಫ್ಟಿಆರ್‌ಐ ಆಹಾರ ಪ್ಯಾಕೇಜಿಂಗ್‌ ತಂತ್ರಜ್ಞಾನ ವಿಭಾಗದ ಮುಖ್ಯಸ್ಥರೂ ಆಗಿರುವ ವಿಜ್ಞಾನಿ ಎಚ್.ಎಸ್‌.ಸತೀಶ್‌.

ದೀರ್ಘ‌ ಬಾಳಿಕೆ: ಪಾರಂಪರಿಕ ಸ್ವಾದದ ಜೊತೆಗೆ ದೀರ್ಘ‌ ಬಾಳಿಕೆಯ ತಂತ್ರಜ್ಞಾನವೂ ಮಿಳಿತವಾಗಿರುವ ಈ ಉತ್ಪನ್ನಗಳನ್ನು ದಾಸ್ತಾನಿಡಲು ರೆಫ್ರಿಜಿರೇಟರುಗಳ ಅಗತ್ಯವಿಲ್ಲ. ಆಹಾರ ಸುರಕ್ಷತೆಯ ಜೊತೆಗೇ ವಿಸ್ತೃತ ಮಾರುಕಟ್ಟೆಯ ಲಾಭವನ್ನು ಇವು ಒದಗಿಸಲಿವೆ ಎನ್ನುತ್ತಾರೆ ಸತೀಶ್‌.

ಟಾಪ್ ನ್ಯೂಸ್

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.