ಮೈಸೂರು ಜಿಲ್ಲೆಯಲ್ಲಿ 21 ಮಂದಿಯಲ್ಲಿ ಬ್ಲಾಕ್ ಫಂಗಸ್ ಪತ್ತೆ: ರೋಹಿಣಿ ಸಿಂಧೂರಿ


Team Udayavani, May 24, 2021, 4:15 PM IST

rohini sindhuri

ಮೈಸೂರು: ಜಿಲ್ಲೆಯಲ್ಲಿ 21 ಮಂದಿಗೆ ಬ್ಲ್ಯಾಕ್‌ ಫಂಗಸ್ ಇರುವುದು ದೃಢಪಟ್ಟಿದ್ದು, ಅಷ್ಟೂ ಮಂದಿಗೂ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದರು.

ಕೆ.ಆರ್.ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಆರ್.ಆಸ್ಪತ್ರೆಯಲ್ಲಿ 17, ಜೆಎಸ್‌ಎಸ್‌ ಆಸ್ಪತ್ರೆಯಲ್ಲಿ 3, ಅಪೋಲೋದಲ್ಲಿ 1 ಪ್ರಕರಣ ಇದೆ. ಬ್ಲ್ಯಾಕ್ ಫಂಗಸ್‌ನಿಂದ ಜಿಲ್ಲೆಯಲ್ಲಿ ಮೃತಪಟ್ಟವರು ಒಬ್ಬರು ಮಾತ್ರ.‌ ರೋಗದ ಲಕ್ಷಣ ಇದ್ದವರು ಆದಷ್ಟು ಬೇಗನೆ ಆಸ್ಪತ್ರೆಗೆ ಬನ್ನಿ. ಈಗಾಗಲೇ ಹಲವರಿಗೆ ಕಣ್ಣಿನವರೆಗೂ ಸರ್ಜರಿ ಮಾಡಲಾಗಿದೆ. ಒಂದೇ ಕಡೆ ಮೂಗು ಸೋರುವಿಕೆ, ತಲೆ ವಿಪರೀತ ನೋವು ಇದೆಲ್ಲವೂ ಬ್ಲಾಕ್ ಫಂಗಸ್‌ನ ರೋಗ ಲಕ್ಷಣಗಳು. ರೋಗ ಲಕ್ಷಣ ಕಂಡುಬಂದ ತಕ್ಷಣ ಆಸ್ಪತ್ರೆಗೆ ಬನ್ನಿ ಎಂದು ಹೇಳಿದರು.

ಈಗ ಕೆ.ಆರ್.ಆಸ್ಪತ್ರೆಯಲ್ಲಿರುವ ಎಲ್ಲಾ ಬ್ಲಾಕ್ ಫಂಗಸ್ ರೋಗಿಗಳು ಕ್ಷೇಮವಾಗಿದ್ದು, ಇವರು ಗುಣಮುಖವಾಗಲು ಕನಿಷ್ಠ ಮೂರು ವಾರವೇ ಬೇಕು. ಚಿಕಿತ್ಸೆ ಹಾಗೂ ಸರ್ಜರಿಯೇ ಇದಕ್ಕೆ ಮದ್ದು. ಮೊದಲ ಹಂತದಲ್ಲೇ ಇದ್ದರೆ ಅದನ್ನು ಔಷಧಿಯಲ್ಲೇ ಗುಣಪಡಿಸಬಹುದು. ನಂತರ ಬಂದರೆ ಸರ್ಜರಿ ಅನಿವಾರ್ಯ. ಜನರು ಈ ಬಗ್ಗೆ ನಿಗಾ ವಹಿಸಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ:ಲಸಿಕೆ, ಆಕ್ಸಿಜನ್ ಲಭ್ಯತೆ ಬಗ್ಗೆ ರಾಜ್ಯ ಸರ್ಕಾರ ಶ್ವೇತ ಪತ್ರ ಹೊರಡಿಸಲಿ: ಸಿದ್ದರಾಮಯ್ಯ

ತಮ್ಮ ಕುಟುಂಬದವರಿಗೆ ಕೋವಿಡ್‌ ತಗುಲಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಮೂವರು ಮನೆಯಲ್ಲಿದ್ದಾರೆ, ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲರ ಆರೋಗ್ಯದಲ್ಲೂ ಸುಧಾರಣೆಯಾಗಿದೆ. ನಾನು ಪರೀಕ್ಷಿಸಿಕೊಂಡಾಗ ನೆಗೆಟಿವ್ ಬಂದಿದೆ. ನಾನು ನಿತ್ಯವೂ ಕೋವಿಡ್ ತಪಾಸಣೆ ಮಾಡಿಸುತ್ತೇನೆ.‌ ನಮ್ಮಿಂದ ಯಾರಿಗೂ ಸಮಸ್ಯೆ ಆಗಬಾರದು. ಹೀಗಾಗಿ, ದಿನದ ತಪಾಸಣೆಯಲ್ಲಿ ನೆಗೆಟಿವ್ ಇದ್ದರೆ ಮಾತ್ರ ಬರುತ್ತೇನೆ ಎಂದರು.

ಎಲ್ಲಾ ಜಿಲ್ಲಾಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಒದಗಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ನನ್ನ ಭೇಟಿ ಇದೇ ಮೊದಲೇನಲ್ಲ, ಹಿಂದೆಯೂ ಎರಡು ಬಾರಿ ಭೇಟಿ ನೀಡಿದ್ದೆ. ಸದ್ಯ ಬ್ಲ್ಯಾಕ್‌ ಫಂಗಸ್‌ ಕಡೆಗೆ ಹೆಚ್ಚಿನ ಗಮನ ಹರಿಸಿದ್ದೇವೆ. ತಾಲ್ಲೂಕು ಮಟ್ಟದಲ್ಲೂ ಜಿಲ್ಲಾಡಳಿತ ಕೆಲಸ ಮಾಡುತ್ತಿದೆ. ಆಸ್ಪತ್ರೆಗಳಲ್ಲಿ ಔಷಧಿಗೆ ಬೇಡಿಕೆ ಇದೆ. ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಚತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Mysore; ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಛತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

Congress ಲೂಟಿ ತಪ್ಪಿಸಲು ಬಿಜೆಪಿ ಜತೆ ಮೈತ್ರಿ: ಎಚ್‌.ಡಿ. ದೇವೇಗೌಡ

Congress ಲೂಟಿ ತಪ್ಪಿಸಲು ಬಿಜೆಪಿ ಜತೆ ಮೈತ್ರಿ: ಎಚ್‌.ಡಿ. ದೇವೇಗೌಡ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.