ಪ್ರವಾಹ ಪರಿಹಾರಕ್ಕೆ 27 ಕೋಟಿ ಬಿಡುಗಡೆ
Team Udayavani, Sep 4, 2019, 11:58 AM IST
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಮಳೆ ಮತ್ತು ಪ್ರವಾಹ ದಿಂದ ಹಾನಿಗೊಳಗಾಗಿರುವ ರಸ್ತೆ ಹಾಗೂ ಸೇತುವೆಗಳ ಕಾಮಗಾರಿಗಳಿಗೆ ಒಟ್ಟು 82 ಕೋಟಿ ರೂ. ಬೇಕಾಗಿದೆ. ಈಗಾ ಗಲೇ 27 ಕೋಟಿ ರೂ.ಅನುದಾನ ಬಿಡುಗಡೆ ಮಾಡ ಲಾಗಿ ದ್ದು, ಕಾಮಗಾರಿಗಳು ಭರದಿಂದ ಸಾಗುತ್ತಿವೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಹೇಳಿದರು.
ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಮಂಗಳವಾರ ಪ್ರವಾಹ ಪರಿಹಾರ ಕಾಮಗಾರಿಗಳ ಪರಿಶೀಲನಾ ಸಭೆ ನಡೆಸಿದ ಅವರು, ಪ್ರವಾಹ ಪೀಡಿತ ಪ್ರದೇಶಗಳ ಹಾನಿ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ. ಅಗತ್ಯವಿರುವ ಅನುದಾನವನ್ನು ಸರ್ಕಾರದಿಂದ ಬಿಡುಗಡೆ ಮಾಡಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಎರಡು ರಾಷ್ಟ್ರೀಯ ಹೆದ್ದಾರಿಗಳು ಪ್ರವಾಹದಿಂದ ದುರಸ್ತಿಗೆ ಒಳಗಾಗಿವೆ. ನಂಜನಗೂಡು ಮಾರ್ಗದಲ್ಲಿ ಹೆಚ್ಚಿನ ಸಮಸ್ಯೆಯಾಗಿದ್ದು, ರಸ್ತೆಯನ್ನು ಎತ್ತರಿಸಬೇಕಾಗಿದೆ ಹಾಗೂ ತಿ.ನರಸೀಪುರ ಮಾರ್ಗದಲ್ಲಿ ಕಾಮಗಾರಿ ಮಾಡಬೇಕಾಗಿರುವುದರಿಂದ ಸುಮಾರು 8 ಕೋಟಿ ರೂ. ಬೇಕಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ವಿಭಾಗದ ಇಂಜಿನಿಯರ್ ಮಾಹಿತಿ ನೀಡಿದರು.
ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 7 ರಸ್ತೆಗಳು ದುರಸ್ತ್ತಿಯಾಗಿದ್ದು, ಕಾಮಗಾರಿಗಳಿಗೆ 3.80 ಕೋಟಿ ರೂ., ತಿ.ನರಸೀಪುರ ಕ್ಷೇತ್ರದಲ್ಲಿ ರಸ್ತೆಗಳ ಕಾಮಗಾರಿಗೆ 1.52 ಕೋಟಿ ರೂ., ವರುಣಾ ಕ್ಷೇತ್ರಕ್ಕೆ 6.48 ಕೋಟಿ ರೂ. ಬೇಕಾ ಗುತ್ತದೆ ಎಂದು ಮೈಸೂರು ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಸಭೆಗೆ ಮಾಹಿತಿ ನೀ
ಇದಕ್ಕೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು, ರಾಜ್ಯದಲ್ಲಿ ಒಟ್ಟು ರಸ್ತೆ, ಸೇತುವೆ ಹಾಗೂ ಸಾರ್ವಜನಿಕ ಕಟ್ಟಡಗಳ ಕಾಮಗಾರಿಗಳಿಗೆ 8 ಸಾವಿರ ಕೋಟಿ ರೂ.ಬೇಕಾಗಿದ್ದು, ತುರ್ತು ಕಾಮಗಾರಿಗಾಗಿ 500 ಕೋಟಿ ರೂ.ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.
ರಾಜ್ಯ ಸರ್ಕಾರ ಶಾಲಾ ಮಕ್ಕಳ ಕೌಶಲ್ಯ ಅಭಿವೃದ್ಧಿ ಹಾಗೂ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಕೌಶಲ್ಯ ತರಬೇತಿ ನೀಡಬೇಕು ಹಾಗೂ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಉತ್ತಮ ಆಹಾರ ವ್ಯವಸ್ಥೆ ಕಲ್ಪಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ನಗರ ಪ್ರದೇಶಗಳಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಣ ಪಡೆಯುವುದರಿಂದ ಮತ್ತಷ್ಟು ಹಾಸ್ಟೆಲ್ಗಳನ್ನು ಪ್ರಾರಂಭಿಸಬೇಕು.ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಿವೇಶನಗಳನ್ನು ಪಡೆದುಕೊಂಡು ಮಾಹಿತಿ ನೀಡಿದರೆ ವಿದ್ಯಾರ್ಥಿನಿಲಯ ಕಾಮಗಾರಿಗೆ ಬೇಕಾಗುವ ಅನುದಾನವನ್ನು ಸರ್ಕಾರದಿಂದ ಬಿಡುಗಡೆ ಮಾಡಿಸಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟು ಎಷ್ಟು ಭವನಗಳು ಕಾಮಗಾರಿ ಪ್ರಗತಿಯಲ್ಲಿವೆ ಎಂಬುದನ್ನು ಪಟ್ಟಿ ಮಾಡಿ,ಅದಕ್ಕೆ ಬೇಕಾಗಿರುವ ಅನುದಾನದ ವಿವರವನ್ನು ಮುಂದಿನ ಸಭೆಯಲ್ಲಿ ಮಾಹಿತಿ ನೀಡಿದರೆ ಭವನಗಳ ಕಾಮಗಾರಿ ಪೂರ್ಣಗೊಳಿಸಲು ಅನುದಾನ ನೀಡುವುದಾಗಿ ತಿಳಿಸಿದರು.
ನಗರ ಹಾಗೂ ಗ್ರಾಮಾಂತರ ಪ್ರದೇಶದ ಕೆಲವು ಭಾಗದಲ್ಲಿ ಸ್ಮಶಾನಕ್ಕೆ ಜಾಗದ ಕೊರತೆಯಿದ್ದು, ಜಿಲ್ಲಾಡಳಿತದಿಂದ ಕೂಡಲೇ ಖರಾಬ್ ಭೂಮಿಯನ್ನು ಸ್ಮಶಾನಕ್ಕೆ ಮಂಜೂರು ಮಾಡಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಜಿಲ್ಲಾಧಿಕಾರಿಗಳ ಕಚೇರಿಗೆ ಸಂಬಂಧಿಸಿದ ಇಲಾಖೆಗಳು ಸ್ಥಳಾಂತರವಾಗಬೇಕು ಎಂದರು.
ಅಂಬೇಡ್ಕರ್ ನಿಗಮದ ವತಿಯಿಂದ 5 ಐರಾವತ ಟ್ಯಾಕ್ಸಿಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ