ಚುನಾವಣಾ ಆಯುಕ್ತರ 27ನೇ ರಾಷ್ಟ್ರಮಟ್ಟದ ಸಮ್ಮೇಳನಕ್ಕೆ ಚಾಲನೆ
Team Udayavani, Dec 5, 2018, 6:00 AM IST
ಮೈಸೂರು: ಚುನಾವಣೆಗಳಲ್ಲಿ ಆನ್ಲೈನ್ ಓಟಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸುವುದು, ಹೊಸ ತಂತ್ರಜ್ಞಾನಗಳ ಅನುಷ್ಠಾನ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸುವ ನಿಟ್ಟಿನಲ್ಲಿ ಆಯೋಜಿಸಿರುವ ವಿವಿಧ ರಾಜ್ಯಗಳ ಚುನಾವಣಾ ಆಯುಕ್ತರ 27ನೇ
ರಾಷ್ಟ್ರಮಟ್ಟದ ಸಮ್ಮೇಳನಕ್ಕೆ ಮಂಗಳವಾರ ಚಾಲನೆ ದೊರೆಯಿತು.
ನಗರದ ಲಲಿತ ಮಹಲ್ ಹೋಟೆಲ್ ನಲ್ಲಿ ಆಯೋಜಿಸಿರುವ ಎರಡು ದಿನಗಳ ಸಮ್ಮೇಳನಕ್ಕೆ ಮಧ್ಯಪ್ರದೇಶ ರಾಜ್ಯ
ಚುನಾವಣಾ ಆಯುಕ್ತರೂ ಆದ ಸಮ್ಮೇಳನಾಧ್ಯಕ್ಷ ಪರಶುರಾಮ್ ಚಾಲನೆ ನೀಡಿದರು. ಸಮ್ಮೇಳನದಲ್ಲಿ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ, ಇವಿಎಂ ಹಾಗೂ ಮಲ್ಟಿಚಾಯಿಸ್ ಇವಿಎಂ ಬಳಕೆ, ನಿಗದಿತ ವೇಳೆಗೆ ಚುನಾವಣೆ ನಡೆಸಲು ಎದುರಾಗುವ ಕಾನೂನು ತೊಡಕುಗಳು, ಚುನಾವಣಾ ನೀತಿ ಸಂಹಿತೆಯನ್ನು ಅನುಷ್ಠಾನಗೊಳಿಸುವು ದು ಹಾಗೂ ಕಾನೂನಿನ ಸುಧಾರಣೆ ಮತ್ತು ಹೊಸ ನಿಯಮಗಳ ಕುರಿತಂತೆ ಚರ್ಚೆ ನಡೆಸಲಾ ಯಿತು. ಸಮ್ಮೇಳನದ ಉದ್ಘಾ ಟನಾ ಸಮಾರಂಭದಲ್ಲಿ ಚುನಾವಣಾ ಆಯೋಗದ ಕಾರ್ಯ ನಿರ್ವಹಣೆಗೆ ಸಂಬಂಧಿಸಿದ ಮೂರು ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು.
ಸಮ್ಮೇಳನದಲ್ಲಿ ಕರ್ನಾಟಕ ರಾಜ್ಯ ಚುನಾವಣಾ ಆಯುಕ್ತ ಪಿ.ಎನ್. ಶ್ರೀನಿವಾಸಚಾರಿ, ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್ನ ನಿರ್ದೇಶಕ ವಿನಯ್ ಕುಮಾರ್ ಕಟ್ಯಾಲ್, ಎಲೆಕ್ಟ್ರಾನಿಕ್ ಕಾರ್ಪೊàರೇಷನ್ ಇಂಡಿಯ ಲಿಮಿಟೆಡ್ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ಸಂಜಯ್ ಚೌಬೆ, ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ಜಿ.ಎಂ.ಸೇನಾಪತಿ, ಮೈಸೂರು ಅರಗು ಮತ್ತು ಬಣ್ಣದ
ಕಾರ್ಖಾನೆ ಪ್ರಧಾನ ವ್ಯವಸ್ಥಾಪಕ ಚಂದ್ರಶೇಖರ್ ದೊಡ್ಡಮನಿ, ಮಧ್ಯಪ್ರದೇಶ ರಾಜ್ಯ ಚುನಾವಣಾ ಆಯೋಗದ ಉಪ ಕಾರ್ಯದರ್ಶಿ ದೀಪಕ್ ಸಕ್ಸೇನಾ, ಐಎಲ್ ಅಂಡ್ ಎಫ್ ಎಸ್ನ ಉಪಾಧ್ಯಕ್ಷ ಪಂಕಜ್ ಗುಪ್ತಾ ಸೇರಿದಂತೆ 19 ರಾಜ್ಯಗಳ ಚುನಾವಣಾ ಆಯುಕ್ತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ