ದಸರೆಗೆ 28.74 ಕೋಟಿ ರೂ. ವೆಚ್ಚ


Team Udayavani, Nov 2, 2022, 3:02 PM IST

tdy-14

ಮೈಸೂರು: 2022ರ ನಾಡಹಬ್ಬ ಮೈಸೂರು ದಸರಾ ಉತ್ಸವವನ್ನು ಈ ಬಾರಿ ಅದ್ಧೂರಿಯಾಗಿ ಆಚರಣೆ ಮಾಡಲಾಗಿದ್ದು, ಅದಕ್ಕಾಗಿ 28.74 ಕೋಟಿ ರೂ. ಹಣ ವೆಚ್ಚವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್‌ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಾಗೂ ಜಂಬೂ ಸವಾರಿ ಮೆರವಣಿಗೆ ಆದ ವೆಚ್ಚದ ಬಗ್ಗೆ ಮಾಹಿತಿ ನೀಡಿ, ದಸರಾ ಉತ್ಸವಕ್ಕಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 10 ಕೋಟಿ ರೂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 15 ಕೋಟಿ ರೂ., ಅರಮನೆ ಆಡಳಿತ ಮಂಡಳಿಯಿಂದ 5 ಕೋಟಿ ರೂ., ಪ್ರಯೋಜಕತ್ವದಿಂದ 32 ಲಕ್ಷದ 50 ಸಾವಿರ, ಟಿಕೆಟ್‌ ಮತ್ತು ಗೋಲ್ಡ್ ಕಾರ್ಡ್‌ ಮಾರಾಟದಿಂದ 76.38 ಲಕ್ಷ ರೂ. ಸೇರಿದಂತೆ ಒಟ್ಟು 31 ಕೋಟಿ, 8 ಲಕ್ಷದ 88 ಸಾವಿರದ 819 ರೂ. ಸಂಗ್ರಹವಾಗಿತ್ತು. ಇದರಲ್ಲಿ ದಸರಾ ಉಪಸಮಿತಿಗಳಿಗೆ 26,54,49,058 ರೂ. ಹಾಗೂ ಮಂಡ್ಯ ಚಾಮರಾಜನಗರ ಹಾಸನ ಜಿಲ್ಲೆಯ ದಸರಾ ಉತ್ಸವಕ್ಕೆ 2.20 ಕೋಟಿ ರೂ. ವೆಚ್ಚವಾಗಿದೆ. ಜತೆಗೆ ರಾಜವಂಶಸ್ಥರಿಗೆ 47.20 ಲಕ್ಷ ರೂ. ಗೌರವ ಧನ ನೀಡಲಾಗಿದೆ. 1.26 ರೂ. ಉಳಿಕೆಯಾಗಿದ್ದು, ಖರ್ಚು ವೆಚ್ಚದ ವಎಚ್ಚ ಬಗ್ಗೆ 21 ದಸರಾ ಉಪಸಮಿತಿಗಳು ಸೇರಿದಂತೆ ವೆಚ್ಚದ ಲೆಕ್ಕಾಚಾರವನ್ನು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಾಲ್ಕು ದಿನಗಳಲ್ಲಿ ಪರಿಶೀಲನೆ ನಡೆಯಲಿದೆ ಎಂದು ಹೇಳಿದರು. ‌

ಸಂಸದ ಪ್ರತಾಪ್‌ ಸಿಂಹ, ಮೇಯರ್‌ ಶಿವಕುಮಾರ್‌, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಂ. ಶಿವಕುಮಾರ್‌, ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ, ನಗರ ಪೊಲೀಸ್‌ ಆಯುಕ್ತ ಡಾ. ಚಂದ್ರಗುಪ್ತ, ಎಸ್‌ಪಿ ಆರ್‌. ಚೇತನ್‌, ಜಿಪಂ ಸಿಇಒ ಬಿ.ಆರ್‌. ಪೂರ್ಣಿಮಾ, ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ ಸೇರಿದಂತೆ ಅನೇಕರು ಇದ್ದರು.

ದಸರಾ ಉತ್ಸವ ವೆಚ್ಚದ ಸಂಪೂರ್ಣ ವಿವರ: ದಸರಾ ಉತ್ಸವ ಅಂಗವಾಗಿ ರಚನೆಯಾಗಿದ್ದ 17 ಉಪ ಸಮಿತಿ ಸೇರಿದಂತೆ ಅರಣ್ಯ ಇಲಾಖೆ, ರಂಗಾಯಣ ಹಾಗೂ ವಿವಿಧ ಕಾಮಗಾರಿಗೆ 26,54,49,058 ರೂ. ವೆಚ್ಚಾಗಿದೆ. ಇದರಲ್ಲಿ ಸ್ವಾಗತ ಮತ್ತು ಆಮಂತ್ರಣ ಉಪಸಮಿತಿಗೆ 78.57 ಲಕ್ಷ ರೂ., ಗಣ್ಯರಿಗೆ ಮತ್ತು ಕಲಾವಿದರಿಗೆ ಸ್ಥಳಾವಕಾಶ ಮತ್ತು ಸಾರಿಗೆ ವ್ಯವಸ್ಥೆ 3.77 ಕೋಟಿ ರೂ., ಮೆರವಣಿಗೆ ಉಪಸಮಿತಿಗೆ 2.22 ಕೋಟಿ ರೂ., ಪಂಜಿನ ಕವಾಯತು ಉಪಸಮಿತಿಗೆ 1.17 ಕೋಟಿ ರೂ., ಸ್ತಬ್ಧಚಿತ್ರ ಉಪಸಮಿತಿಗೆ 29.88 ಲಕ್ಷ ರೂ., ರೈತ ದಸರಾ (ಗ್ರಾಮೀಣ ದಸರಾ)ಕ್ಕೆ 51.66 ಲಕ್ಷ ರೂ. ರೂ., ಕ್ರೀಡಾ ಉಪಸಮಿತಿಗೆ 22.02 ಲಕ್ಷ ರೂ., ಸಾಂಸ್ಕೃತಿಕ ಉಪಸಮಿತಿಗೆ 1.61 ಕೋಟಿ ರೂ., ಲಲಿತಕಲೆ ಮತ್ತು ಕರಕುಶಲ ಉಪಸಮಿತಿಗೆ 17.90 ಲಕ್ಷ ರೂ., ಕವಿಗೋಷ್ಠಿ ಉಪಸಮಿತಿಗೆ 41.69 ಲಕ್ಷ ರೂ., ಯೋಗ ದಸರಾ ಉಪಸಮಿತಿಗೆ 18.94 ಲಕ್ಷ ರೂ., ಯುವ ಸಂಭ್ರಮ ಮತ್ತು ಯುವ ದಸರಾ ಉಪಸಮಿತಿಗೆ 6.36 ಕೋಟಿ ರೂ., ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿಗೆ 31.07 ಲಕ್ಷ ರೂ., ಸ್ವತ್ಛತೆ ಮತ್ತು ವ್ಯವಸ್ಥೆ ಉಪಸಮಿತಿಗೆ 29.08 ಲಕ್ಷ ರೂ., ಚಲನಚಿತ್ರ ಉಪಸಮಿತಿಗೆ 25.50 ಲಕ್ಷ ರೂ., ಕುಸ್ತಿ ಉಪಸಮಿತಿಗೆ 34.47 ಲಕ್ಷ ರೂ., ಪ್ರಚಾರ ಉಪಸಮಿತಿಗೆ 7.40 ಲಕ್ಷ ರೂ., ದಸರಾ ದರ್ಶನ ಉಪಸಮಿತಿಗೆ 18.50 ಲಕ್ಷ ರೂ., ಅರಣ್ಯ ಇಲಾಖೆಗೆ 1.46 ಲಕ್ಷ ರೂ., ರಂಗಾಯಣಕ್ಕೆ 10 ಲಕ್ಷ ರೂ., ಸಿವಿಲ್‌ ಮತ್ತು ವಿದ್ಯುತ್‌ ಕಾಮಗಾರಿಗಳಿಗೆ ಮುಡಾ, ಪಾಲಿಕೆ ಹಾಗೂ ಲೋಕೋಪಯೋಗಿ ಇಲಾಖೆಯಿಂದ 5.76 ಕೋಟಿ ರೂ. ವೆಚ್ಚವಾಗಿದೆ. ಒಟ್ಟು 26.54 ಕೋಟಿ ರೂ. ವೆಚ್ಚವಾಗಿದ ಎಂದು ಹೇಳಿದರು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.