ಭಕ್ತಾದಿಗಳ ರಕ್ಷಣೆಗೆ 43 ಈಜುಗಾರರ ನಿಯೋಜನೆ


Team Udayavani, Feb 18, 2019, 7:27 AM IST

m4-bhaktadi.jpg

ಮೈಸೂರು: ನಾವು ಚಿಕ್ಕೋರಿದ್ದಾಗ ಒಂದ್‌ ಸಾರಿ ಕುಂಭಮೇಳದಲ್ಲಿ ಅಗಸೆöೕಶ್ವರ ಸ್ವಾಮಿ ದೇವಸ್ಥಾನದಿಂದ ನಡುಗಡ್ಡೆವರೆಗೆ ನಿರ್ಮಿಸಿದ್ದ ಮರದ ತಾತ್ಕಾಲಿಕ ಸೇತುವೆ ಮುರಿದು, ನೀರಲ್ಲಿ ಕೊಚ್ಚಿಕೊಂಡು ಹೋಗಿ ಒಂದಿಬ್ಬರಿಗೆ ಗಾಯಗಳಾಗಿತ್ತು. ಅವರನ್ನು ರಕ್ಷಿಸಿದ್ದರು. ಅದು ಬಿಟ್ಟರೆ ಇನ್ಯಾವಾಗಲೂ ಅವಘಡ ಸಂಭವಿಸಿಲ್ಲ. ಕುಂಭಮೇಳ ಸಂದರ್ಭ ಮಾತ್ರವಲ್ಲ, ಬೇರೆ ದಿನಗಳಲ್ಲೂ ಭಕ್ತರು ಇಲ್ಲಿ ಬಂದು ಪುಣ್ಯಸ್ನಾನ ಮಾಡಲು ಬರುತ್ತಾರೆ. ಆದರೆ, ಇಲ್ಲಿ ವಸತಿ ವ್ಯವಸ್ಥೆ ಇಲ್ಲದಿರುವುದರಿಂದ ಯಾರು ಉಳಿಯುವುದಿಲ್ಲ ಎನ್ನುತ್ತಾರೆ ಇಲ್ಲಿ ತೆಪ್ಪ ಓಡಿಸುವ ಶಾಂತರಾಜು.

ನನಗಿದು 11ನೇ ಕುಂಭಮೇಳ: ಉದಯವಾಣಿ ಜೊತೆ ತಮ್ಮ ಅನಿಸಿಕೆ ಹಂಚಿಕೊಂಡ ಈಜುಗಾರ ರಾದ ಮಹೇಶ್‌ ನನಗಿದು 6ನೇ ಕುಂಭಮೇಳ, ಶ್ರೀನಿವಾಸ ನನಗೆ 9ನೇ ಕುಂಭಮೇಳ ಇದು. ನಾವು ಇಲ್ಲಿಯೇ ತೆಪ್ಪ ಓಡಿಸಿಕೊಂಡು ಜೀವನ ಸಾಗಿಸುತ್ತೇವೆ. ಕುಂಭಮೇಳ ಆರಂಭವಾದಾಗಿ ನಿಂದಲೂ ನೋ ಡುತ್ತಾ ಬಂದಿದ್ದು, ನನಗಿದು 11ನೇ ಕುಂಭಮೇಳ.

ಅಪಾಯಕ್ಕೆ ಸಿಲುಕಿದವರ ರಕ್ಷಣೆ: ಈ ಮೂರು ದಿನಗಳ ಕಾಲ ನಮ್ಮನ್ನು ಇಲ್ಲಿ ಪುಣ್ಯಸ್ನಾನಕ್ಕೆ ನದಿಗೆ ಇಳಿಯುವ ಭಕ್ತರ ಸುರಕ್ಷತೆ ನೋಡಿಕೊಳ್ಳಲು 43 ಜನ ಈಜುಗಾರರನ್ನು ನಿಯೋಜಿಸಿದ್ದಾರೆ. ನದಿಯಲ್ಲಿ ನಾಲ್ಕೂವರೆಯಿಂದ ಐದು ಅಡಿಗಳಷ್ಟು ನೀರಿದೆ. ಹೀಗಾಗಿ ಯಾವುದೇ ಅಪಾಯವಿಲ್ಲ. ಆದರೂ ಹೆಂಗಸರು, ಮಕ್ಕಳು, ವಯಸ್ಸಾದವರು ನದಿಗೆ ಇಳಿಯುವುದರಿಂದ ಅವರ ಬಗ್ಗೆ ಎಚ್ಚರವಹಿಸಬೇಕಿದೆ. ಯಾರಿಗಾದರೂ ತೊಂದರೆ ಯಾಗಿ ಅಪಾಯಕ್ಕೆ ಸಿಲುಕಿದರೆ ಅವರ ರಕ್ಷಣೆ ಮಾಡುವುದು ನಮ್ಮ ಕೆಲಸ.

ಸ್ವಚ್ಛತೆ ಬಗ್ಗೆ ಅರಿವು: ಬೆಳಗ್ಗೆ 4 ಗಂಟೆಯಿಂದಲೇ ಜನ ಸ್ನಾನ ಮಾಡಿ ಹೋಗುತ್ತಿದ್ದಾರೆ. ಈಗೀಗ ಶೇ.60ರಷ್ಟು ಭಕ್ತರಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಬಂದಿದೆ. ಮೊದಲೆಲ್ಲಾ ಹಾಕಿರುವ ಬಟ್ಟೆ, ಮನೆಯಲ್ಲಿಂದ ಹಳೆಯ ಹೂವುಗಳನ್ನೆಲ್ಲಾ ತಂದು ನದಿಯಲ್ಲಿ ಬಿಡುತ್ತಿದ್ದರು. ಈಗಲೂ ತಂದು ನದಿಗೆ ಬಿಡುವವರಿದ್ದಾರೆ. ಆದರೆ, ಪ್ರಮಾಣ ಕಡಿಮೆ. ಆ ರೀತಿ ಹಳೇ ಬಟ್ಟೆ, ಹೂವುಗಳನ್ನು ನದಿಗೆ ಬಿಡದಂತೆ ಅವರಿಂದ ಪಡೆದುಕೊಂಡು ಬೆಂಕಿ ಹಾಕಿ ಸುಟ್ಟು ಬಿಡುತ್ತೇವೆ.

ವಿವಿಧ ರಾಜ್ಯದಿಂದ ಭಕ್ತರ ಆಗಮನ: ಪ್ರತಿ ನಿತ್ಯ ಇಲ್ಲಿಗೆ ಪ್ರವಾಸಿಗರು ಬರುತ್ತಾರೆ. ಶನಿವಾರ, ಭಾನುವಾರ, ಸರ್ಕಾರಿ ರಜಾ ದಿನಗಳಲ್ಲಿ ಆಂಧ್ರ ಪ್ರದೇಶ, ತಮಿಳುನಾಡಿನಿಂದ ಹೆಚ್ಚು ಜನ ಬರು ತ್ತಾರೆ. ಕ್ಷೇತ್ರಕ್ಕೆ ಬರುವ ಪ್ರವಾಸಿಗರನ್ನು ತೆಪ್ಪದಲ್ಲಿ ಸಂಗಮಕ್ಕೆ ಕರೆದೊಯ್ಯುತ್ತೇವೆ. ಇಷ್ಟೇ ಕೊಡಿ ಎಂದು ಕೇಳುವುದಿಲ್ಲ, ಅವರು ಕೊಟ್ಟಷ್ಟು ಪಡೆ ಯುತ್ತೇವೆ. ಸಂಗಮದಲ್ಲಿ ಸ್ನಾನ ಮಾಡಿದ ಭಕ್ತರು ರುದ್ರಪಾದ, ನಂದಿಗೆ ಪೂಜೆ ಸಲ್ಲಿಸಿ ಬರುತ್ತಾರೆ. ಇಲ್ಲಿ ವಸತಿ ವ್ಯವಸ್ಥೆ ಇಲ್ಲದಿರುವುದರಿಂದ ಕ್ಷೇತ್ರಕ್ಕೆ ಬಂದವರು ಸ್ನಾನ, ಪೂಜೆ ಮುಗಿಸಿ ಹೊರಟು ಬಿಡುತ್ತಾರೆ.

ಸೇತುವೆ ನಿರ್ಮಾಣ: ಈ ವರ್ಷ ಮಿಲಿಟರಿ ಯವರು ಗುಂಜಾ ನರಸಿಂಹಸ್ವಾಮಿ ದೇವಾಲಯದ ಮೆಟ್ಟಿಲುಗಳಿಂದ ನಡುಗಡ್ಡೆವರೆಗೆ ತೇಲುವ ಸೇತುವೆ ನಿರ್ಮಿಸಿರುವುದರಿಂದ ಭಕ್ತರಿಗೆ ತುಂಬಾ ಅನುಕೂಲವಾಗಿದೆ. ಇಲ್ಲದಿದ್ದರೆ ಬಳಸಿ ಕೊಂಡು ಬರಬೇಕಾಗಿತ್ತು ಎನ್ನುತ್ತಾರೆ.

* ಗಿರೀಶ್‌ ಹುಣಸೂರು

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.