ಸೆ.30ರಿಂದ 5 ದಿನ ಮಹಿಳಾ-ಮಕ್ಕಳ ದಸರಾ


Team Udayavani, Sep 24, 2019, 3:00 AM IST

sep30

ಮೈಸೂರು: ಸೆ.30ರಿಂದ ಅ.4ರವರೆಗೆ ಜೀವಣ್ಣರಾಯನ ಕಟ್ಟೆ ಮೈದಾನದಲ್ಲಿ ಮಹಿಳಾ ಮತ್ತು ಮಕ್ಕಳ ದಸರಾ ನಡೆಯಲಿದ್ದು, 5 ದಿನಗಳ ಕಾಲ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಉಪ ಸಮಿತಿಯ ಉಪ ವಿಶೇಷಾಧಿಕಾರಿ ಡಾ.ಪ್ರೇಮ್‌ಕುಮಾರ್‌ ತಿಳಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.30ರಂದು ಬೆಳಗ್ಗೆ 7.30 ರಿಂದ 9.30ರವರೆಗೆ ಅಂಬಾವಿಲಾಸ ಅರಮನೆ ಮುಂಭಾಗ ರಂಗೋಲಿ ಚಿತ್ತಾರ ಕಾರ್ಯಕ್ರಮ ನಡೆಯಲಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದರು.

ಬೆಳಗ್ಗೆ 11ಗಂಟೆಗೆ ಜೆ.ಕೆ.ಮೈದಾನದಲ್ಲಿ ಮಹಿಳಾ ದಸರಾ ಉದ್ಯಮ ಸಂಭ್ರಮ, ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳು ಹಾಗೂ ಮಹಿಳಾ ಉದ್ಯಮಿಗಳು ತಯಾರಿಸಿದ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಸಚಿವರು ಉದ್ಘಾಟಿಸಲಿದ್ದಾರೆ.

ಮಧ್ಯಾಹ್ನ 12 ರಿಂದ 2 ಗಂಟೆವರೆಗೆ ಬಾಲಕಿಯರ ಬಾಲ ಮಂದಿರದ ಮಕ್ಕಳಿಂದ ಡೊಳ್ಳು ಕುಣಿತ ಮತ್ತು ಕಂಸಾಳೆ, ಬಾಲಕರ ಬಾಲಮಂದಿರದ ಮಕ್ಕಳಿಂದ ಯಕ್ಷಗಾನ ಕಾರ್ಯಕ್ರಮ ಹಾಗೂ ಜಿಲ್ಲಾ ಜವಾಹರ ಬಾಲಭವನದ ಮಕ್ಕಳಿಂದ ಪರಿಸರ ಸಂರಕ್ಷಣೆ ಬಗ್ಗೆ ಸಾಂಸ್ಕೃತಿಕ ಕಾರ್ಯಕ್ರಮ, ಮಧ್ಯಾಹ್ನ 3 ರಿಂದ 6 ಗಂಟೆವರೆಗೆ ರಸಮಂಜರಿ ಕಾರ್ಯಕ್ರಮ, ಸಂಜೆ 6ರಿಂದ ರಾತ್ರಿ 8ಗಂಟೆವರೆಗೆ ಭರತನಾಟ್ಯ ನಡೆಯಲಿದೆ.

ಚಿಣ್ಣರ ದಸರಾ: ಅ.2ರಂದು ಅಂಗನವಾಡಿ ಮಕ್ಕಳಿಂದ ಚಿಣ್ಣರ ದಸರಾ ಹಾಗೂ ವೇಷಭೂಷಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ. ಸಂಜೆ 4ರಿಂದ ರಾತ್ರಿ 8ಗಂಟೆವರೆಗೆ ನಕ್ಷತ್ರ ಫೌಂಡೇಷನ್‌ನ ಮಕ್ಕಳಿಂದ ನಮ್ಮ ಕನಸು ಕಿರು ನಾಟಕ. ಹಕ್ಕಿ ಕಲರವ ಮಿಮಿಕ್ರಿ ಕಾರ್ಯಕ್ರಮ. ಸರಿಗಮಪ ಖ್ಯಾತಿಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ. ಬಿಗ್‌ಬಾಸ್‌ ಖ್ಯಾತಿಯ ಸುಮಾ ರಾಜಕುಮಾರ್‌ ಅವರಿಂದ ಮಾತನಾಡುವ ಗೊಂಬೆ ಕಾರ್ಯಕ್ರಮ.

ಪ್ರತಿಭಾ ಪ್ರದರ್ಶನ: ಅ.3ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿಶೇಷಚೇತನ ಮಕ್ಕಳಿಂದ ಪ್ರತಿಭಾ ಪ್ರದರ್ಶನ, ಪದವಿ ಕಾಲೇಜು ವಿದ್ಯಾರ್ಥಿನಿಯರಿಗಾಗಿ ಮಹಿಳಾ ಸಬಲೀಕರಣ ಕುರಿತು ಚಿತ್ರಕಲಾ ಸ್ಪರ್ಧೆ. ಮಧ್ಯಾಹ್ನ 3 ರಿಂದ ಸಂಜೆ 5ಗಂಟೆವರೆಗೆ ಹಿರಿಯ ನಾಗರಿಕರಿಗೆ ವಿವಿಧ ಸ್ಪರ್ಧೆಗಳು, ಸಂಜೆ 5ರಿಂದ 6ಗಂಟೆವರೆಗೆ ಸಮರ್ಥನಂ ಅಂಗವಿಕಲರ ಸಂಸ್ಥೆಯವರಿಂದ ಸಾಂಸ್ಕೃತಿಕ ಕಾರ್ಯಕ್ರಮ. ಸಂಜೆ 6ರಿಂದ ರಾತ್ರಿ 8ಗಂಟೆವರೆಗೆ 18 ವರ್ಷ ಮೇಲ್ಪಟ್ಟ ವಿಶೇಷ ಚೇತನರಿಂದ ಸಾಂಸ್ಕೃತಿಕ ಕಾರ್ಯಕ್ರಮ.

ಅ.4ರಂದು ಬೆಳಗ್ಗೆ 10 ರಿಂದ ಸಂಜೆ 4ಗಂಟೆವರೆಗೆ ಕಿರುತೆರೆಯ ಒಗ್ಗರಣೆ ಡಬ್ಬಿ ಕಾರ್ಯಕ್ರಮ ಖ್ಯಾತಿಯ ಮುರಳಿ ನೇತೃತ್ವದಲ್ಲಿ ಸವಿರುಚಿ ಒಲೆ ರಹಿತ ಅಡುಗೆ ಸ್ಪರ್ಧೆ, ಚುಟುಕು ಹಾಸ್ಯ ಸ್ಪರ್ಧೆ ಹಾಗೂ ದಂಪತಿಗಳ ಸ್ಪರ್ಧೆ. ಸಂಜೆ 4 ರಿಂದ 6ಗಂಟೆವರೆಗೆ ಮಿಮಿಕ್ರಿ ಕಲಾವಿದ ಗೋಪಿ ಅವರಿಂದ ಮಿಮಿಕ್ರಿ. ಸಂಜೆ 6ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ ಎಂದರು. ಮಹಿಳಾ ಮತ್ತು ಮಕ್ಕಳ ದಸರಾ ಉಪ ಸಮಿತಿ ಅಧ್ಯಕ್ಷೆ ವಿದ್ಯಾ ಅರಸ್‌, ಉಪಾಧ್ಯಕ್ಷರುಗಳಾದ ಅನ್ನಪೂರ್ಣ, ಟಿ.ಎನ್‌.ಶಾಂತ, ರತ್ನ ಲಕ್ಷ್ಮಣ್‌, ಕಾರ್ಯಾಧ್ಯಕ್ಷೆ ಕೆ.ಪದ್ಮ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಮಹಿಳೆಯರಿಂದ ವಿಭಿನ್ನ, ಆಕರ್ಷಕ ಕಾರ್ಯಕ್ರಮ: ಅ.1ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1ಗಂಟೆವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸುವ ಮಹಿಳೆಯರಿಂದ ಜಾನಪದ ಸಿರಿ ಜಾನಪದ ನೃತ್ಯ ಕಾರ್ಯಕ್ರಮ. ಮಧ್ಯಾಹ್ನ 2 ರಿಂದ ಸಂಜೆ 5ಗಂಟೆವರೆಗೆ ಮಹಿಳೆಯರಿಂದ ಜಾನಪದ ಗೀತೆ ಸಮೂಹ ನೃತ್ಯ ಸ್ಪರ್ಧೆ, ಚಲನಚಿತ್ರಗೀತೆ ಸಮೂಹ ನೃತ್ಯ ಸ್ಪರ್ಧೆ, ಸಪ್ತಪದಿ ಸಾಂಪ್ರದಾಯಿಕ ವಧು-ವರರ ಉಡುಗೆಯ ಫ್ಯಾಷನ್‌ ಶೋ ಸ್ಪರ್ಧೆ. ಬಾಂಧವ್ಯ ತಾಯಿ-ಮಗಳ ಫ್ಯಾಷನ್‌ ಶೋ ಸ್ಪರ್ಧೆ. ಸಂಜೆ 5ರಿಂದ 6ಗಂಟೆವರೆಗೆ ಪೌರಾಣಿಕ ನಾಟಕ ಮತ್ತು ನೃತ್ಯ ರೂಪಕ. ಸಂಜೆ 6ರಿಂದ ರಾತ್ರಿ 8ಗಂಟೆವರೆಗೆ ಜನಪದ ನೃತ್ಯ ಮತ್ತು ಗುಂಪು ಗಾಯನ ಕಾರ್ಯಕ್ರಮ ನಡೆಯಲಿದೆ.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.