ಹುಣಸೂರು ತಾಲೂಕು ಆದಿವಾಸಿಗಳಿಗಾಗಿ 541 ಮನೆ ಮಂಜೂರು

ಕಪ್ಪನಕಟ್ಟೆ ಹಾಡಿಯಲ್ಲಿ85 ಲಕ್ಷರೂ ವೆಚ್ಚದ ಕಾಮಗಾರಿಗೆ ಚಾಲನೆನೀಡಿದ ಶಾಸಕ ಮಂಜುನಾಥ್

Team Udayavani, Aug 21, 2022, 10:28 PM IST

1-sadad

ಹುಣಸೂರು: ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ನಾಗರಹೊಳೆ ಉದ್ಯಾನದಂಚಿನ ತಾಲೂಕಿನ ಹನಗೋಡು ಹೋಬಳಿಯ ಕಪ್ಪನಕಟ್ಟೆ ಹಾಡಿಯಲ್ಲಿ 85 ಲಕ್ಷರೂ ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗೆ ಶಾಸಕ ಎಚ್.ಪಿ.ಮಂಜುನಾಥ್ ಚಾಲನೆ ನೀಡಿದರು.

ಗ್ರಾಮದಲ್ಲಿ 70 ಲಕ್ಷ ವೆಚ್ಚದ ರಸ್ತೆ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿದ ನಂತರ ನಡೆದ ಸಮಾರಂಭದಲ್ಲಿ ಮಾತನಾಡಿದ ಈ ರಸ್ತೆ ಮೂಲಕ ಮಳೆಗಾಲದಲ್ಲಿ ದೊಡ್ಡ ಹೆಜ್ಜೂರಿನ ರಸ್ತೆಯಿಂದ ಕಪ್ಪನಕಟ್ಟೆ ಹಾಡಿಗೆ ತೆರಳಲು ಸಾಧ್ಯವಾಗುತ್ತಿರಲಿಲ್ಲ. ಈ ಬಗ್ಗೆ ಸಾಕಷ್ಟು ಮನವಿ ಸಲ್ಲಿಸಿದ್ದರು. ಮೂರು ವರ್ಷಗಳ ಹಿಂದೆಯೇ ಯೋಜನೆ ಮಂಜೂರಾಗಿದ್ದರೂ ಕೊವಿಡ್-೧೯ನಿಂದಾಗಿ ಅನುದಾನ ಕೊರತೆಯಿಂದ ನೆನೆಗುದಿಗೆ ಬಿದ್ದಿತ್ತು. ಇದೀಗ ಒತ್ತಡ ಹಾಕಿದ ಪರಿಣಾಮ ಈ ರಸ್ತೆ ಡಾಂಬರೀಕರಣಗೊಳ್ಳುತ್ತಿದೆ. ಹಾಡಿಯ ಪಕ್ಕದಲ್ಲಿರುವ ರಕ್ತನ ಕೆರೆ ರಸ್ತೆ ಮೆಟ್ಲಿಂಗ್ ಮಾಡಲಾಗುವುದು. ಈ ಹಾಡಿಯ ಹಾಗೂ ರೈತರ ಬೇಡಿಕೆಯನ್ನು ಈಡೇರಿಸಿದ ತೃಪ್ತಿ ಇದೆ. ಈ ರಸ್ತೆ ಕಾಮಗಾರಿ ನಡೆಯುವ ವೇಳೆ ರಸ್ತೆ ಒತ್ತುವರಿ ಮಾಡಿಕೊಂಡಿರುವವರು ತೆರವುಗೊಳಿಸಿ ಸಮರ್ಪಕ ರಸ್ತೆ ನಿರ್ಮಿಸಲು ಸಹಕಾರ ನೀಡಬೇಕೆಂದು ಮನವಿ ಮಾಡಿ, ನಾಲ್ಕು ತಿಂಗಳೊಳಗೆ ಕಾಮಗಾರಿ ಮುಗಿಸುವಂತೆ ಗುತ್ತಿಗೆದಾರನಿಗೆ ತಾಕೀತು ಮಾಡಿದರು.

ಅಂಗವಾಡಿ-ಭವನಕ್ಕೂ ಭೂಮಿ ಪೂಜೆ
ಇದೇ ವೇಳೆ ಕಪ್ಪನಕಟ್ಟೆ ಹಾಡಿಯಯಲ್ಲಿ ನಿರ್ಮಿಸಲುದ್ದೇಶಿಸಿರುವ ೧೫ ಲಕ್ಷರೂ ವೆಚ್ಚದ ಹೈಟೆಕ್ ಅಂಗವನಾಡಿ, ೧೦ ಲಕ್ಷರೂ ವೆಚ್ಚದ ಸಮುದಾಯ ಭವನ ಕಾಮಗಾರಿಗೂ ಭೂಮಿ ಪೂಜೆ ನೆರವೇರಿಸಿದ ಅವರು ಹಾಡಿಯ ಮಹಿಳೆಯರೊಂದಿಗೆ ಚರ್ಚಿಸಿದ ವೇಳೆ ಮನೆಗಳು ದುರಸ್ಥಿಗೊಂಡಿದೆ, ಹಲವರಿಗೆ ಮನೆಯೇ ಇಲ್ಲ. ಮಂಜೂರು ಮಾಡಿಸುವಂತೆ ಕೋರಿದರು.

541 ಮನೆ ಮಂಜೂರು
ಐಟಿಡಿಪಿ ಯೋಜನೆಯಡಿ ತಾಲೂಕಿನ ಆದಿವಾಸಿಗಳಿಗಾಗಿ ೫೪೧ ಮನೆ ಮಂಜೂರಾಗಿದ್ದು, ಈ ಪೈಕಿ ೬೦ ಮನೆಗಳು ತಿರಸ್ಕೃತಗೊಂಡಿವೆ. ವಸತಿ ನಿಗಮದ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು. ರಾಜೀವಗಾಂಧಿ ವಸತಿ ನಿಗಮದವತಿಯಿಂದ ೪ ಲಕ್ಷರೂ ಅನುದಾನ ನೀಡುತ್ತಿದ್ದು, ಪ್ರಾಯೋಗಿಕವಾಗಿ ಮನೆ ನಿರ್ಮಿಸಿಕೊಡಲಾಗುವುದೆಂದರು.

ಕಾರ್ಯಕ್ರಮದಲ್ಲಿ ಗ್ರಾ.ಪಂ.ಅಧ್ಯಕ್ಷ ಸುಭಾಷ್, ಉಪಾಧ್ಯಕ್ಷೆ ಅಂಬಿಕಾ, ಮಾಜಿ ಅಧ್ಯಕ್ಷ ಶಿವಶಂಕರ್ ಹಾಗೂ ಸದಸ್ಯರಾದ ಬಸವರಾಜು, ನಟರಾಜ್, ಬಸವಣ್ಣ,ಗಣೇಶ್, ಶ್ರೀನಿವಾಸ್, ಶ್ಯಾಮಣ್ಣ, ವಿಜಯ್, ಐಟಿಡಿಪಿ ಅಧಿಕಾರಿ ಬಸವರಾಜು, ಉಪ ತಹಸೀಲ್ದಾರ್ ಚೆಲುವರಾಜು, ಆರ್.ಐ.ಪ್ರಶಾಂತರಾಜೇಅರಸ್, ವಿ.ಎ.ಶಿವಕುಮಾರ್, ಪಿಡಿಓ ಮಂಜುನಾಥ್, ಮುಖಂಡರಾದ ಗಣೇಶ್, ಕಸ್ತೂರಿಗೌಡ, ನಾಗೇಶ, ಹೊಂಬೇಗೌಡ, ನಾಗೇಗೌಡ, ಶಾವರ್, ಶ್ರೀನಿವಾಸ್, ಇಂಜಿನಿಯರ್ ಸಿದ್ದರಾಜು ಮತ್ತಿತರ ಮುಖಂಡರಿದ್ದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.