ರಾಷ್ಟ್ರಮಟ್ಟದ ಕಿಸಾನ್‌ ಸ್ವರಾಜ್‌ ಸಮ್ಮೇಳನಕ್ಕೆ ತೆರೆ 


Team Udayavani, Nov 14, 2022, 3:08 PM IST

tdy-9

ಮೈಸೂರು: ಹವಾಮಾನ ಬದಲಾವಣೆ ಕುರಿತು ನಡೆಯುತ್ತಿರುವ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯಮಟ್ಟದ ಸಮ್ಮೇಳನಗಳು ಕೇವಲ ಕಾಫಿ, ತಿಂಡಿಸೇವನೆಗೆ ಸೀಮಿತಗೊಳ್ಳುತ್ತಿವೆ ಹೊರತು, ಸಮ್ಮೇಳನದ ನಿರ್ಣಯಗಳ ಪರಿಣಾಮಕಾರಿ ಅನುಷ್ಠಾನವಾಗುತ್ತಿಲ್ಲ ಎಂದು ಆಶಾ ಕಿಶಾನ್‌ ಸ್ವರಾಜ್‌ ಸಂಸ್ಥೆ ರಾಷ್ಟ್ರೀಯಸಂಚಾಲಕ ಶ್ರೀಧರ್‌ ರಾಧಾಕೃಷ್ಣ ಬೇಸರ ವ್ಯಕ್ತಪಡಿಸಿದರು.

ನಗರದ ಕರಾಮುವಿ ಘಟಿಕೋತ್ಸವ ಭವನದಲ್ಲಿ ನಡೆಯತ್ತಿರುವ 5ನೇ ರಾಷ್ಟ್ರ ಮಟ್ಟದ ಕಿಸಾನ್‌ ಸ್ವರಾಜ್‌  ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ನಿರ್ಣಯಗಳ ನಿರ್ಲಕ್ಷ್ಯ: ಜಾಗತಿಕ ತಾಪಮಾನ, ಹವಾಮಾನ ಬದಲಾವಣೆ, ಅಕಾಲಿಕ ಮಳೆ ಹೀಗೆ ಅನೇಕ ವಿಷಯ ಕುರಿತು ಅಂತಾರಾಷ್ಟ್ರೀಯ ಮಟ್ಟದ ಸಮ್ಮೇಳನಗಳು ಕಾಲ ಕಾಲಕ್ಕೆ ಜರುಗುತ್ತಿವೆ. ಅದರಂತೆ ಈ ವರ್ಷದ ಈಜಿಪ್ಟ್ನಲ್ಲಿ ಕಾಪ್‌-27 ಸಭೆ ನಡೆಯುತ್ತಿದೆ. ಆದರೆ, ಸಭೆಯಲ್ಲಿಚರ್ಚೆಯಾಗುವ ಗಂಭೀರ ಸ್ವರೂಪದ ಸಮಸ್ಯೆಗಳ ವಿರುದ್ಧ ತೆಗೆದುಕೊಳ್ಳುವ ನಿರ್ಣಯಗಳನ್ನು ಯಾವ ದೇಶದ ಸರ್ಕಾರಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸದೆ ಕಾರ್ಪೊರೇಟ್‌ ಸಂಸ್ಥೆಗಳ ಹಿತಾಸಕ್ತಿಗೆ ಅನುಗುಣವಾಗಿ ನಡೆದುಕೊಳ್ಳುತ್ತಿವೆ ಎಂದು ಆರೋಪಿಸಿದರು.

ಸಾವಿನ ದವಡೆಗೆ ಸಿಲುಕಬೇಕಾಗುತ್ತೆ: ನಮ್ಮ ಜೀವನ ಶೈಲಿಯಿಂದಾಗಿ ಪರಿಸರಲ್ಲಿ ಸಾಕಷ್ಟು ಏರುಪೇರು ಉಂಟಾಗಿ ಈಗಾಗಲೇ ಪ್ರವಾಹ, ಅಕಾಲಿಕ ಮಳೆ, ಅಧಿಕ ತಾಪಮಾನದಂತಹ ಅನೇಕ ಸಮಸ್ಯೆಗಳನ್ನು ಅನುಭವಿಸುತ್ತಿದ್ದೇವೆ. ಒಂದು ವೇಳೆ ಇಂತಹ ಸಮಸ್ಯೆಗಳನ್ನು ಸರಿಪಡಿಸಲು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ನಮ್ಮ ಮುಂದಿನ ತಲೆಮಾರುಗಳು ಶುದ್ಧ ಗಾಳಿ, ನೀರು, ಮಣ್ಣು ಸಿಗದೆ ಸಾವಿನ ದವಡೆಗೆ ಸಿಲುಕಿ ನರಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸಮರ್ಪಕ ಹೋರಾಟ ನಡೆಸುತ್ತಿಲ್ಲ: ಬಿಹಾರ ಸಂಸದ ಅನಿಲ್‌ ಹೆಗ್ಗಡೆ ಮಾತನಾಡಿ, 1990ರ ದಶಕದ ಹಿಂದೆಯೇ ಕರ್ನಾಟಕಲ್ಲಿ ಎಂ.ಡಿ.ನಂಜುಂಡ ಸ್ವಾಮಿ ಅವರ ನೇತೃತ್ವದಲ್ಲಿ ಬಂಡವಾಳಶಾಹಿ ಪರವಾದಂತಹಗ್ಯಾಟ್‌ ಒಪ್ಪಂದಗಳ ವಿರುದ್ಧ ಚಳವಳಿ ನಡೆದಿತ್ತು. ಸಾವಯುವ ಬೆಳೆಗಳಿಗೆ ವಿರುದ್ಧವಾದಂತಹ ಜಿಎಂ ಬೀಜಗಳ ಉತ್ಪಾದನೆಯನ್ನು ಪ್ರೋತ್ಸಾಹಿಸುವಂತಹ ಯಾವುದೇ ನಿರ್ಣಯಗಳಿಗೆ ಅವರು ತೀವ್ರವಾಗಿ ವಿರೋಧಿಸುತ್ತಿದ್ದರು. ಆದರೆ, ಇಂದಿನ ರೈತ ಚಳವಳಿ ಗಳಲ್ಲಿ ಇಂತಹ ಸೂಕ್ಷ್ಮ ವಿಷಯಗಳ ಬಗ್ಗೆ ಸಮರ್ಪಕ ಹೋರಾಟ ನಡೆಸುತ್ತಿಲ್ಲ ಎಂದು ಹೇಳಿದರು.

ಹಿಂಪಡೆಯಲು ಆಗಿಲ್ಲ: ಗುಜರಾತಿನ ಕಾಂಡ್ಲಾದಲ್ಲಿ ಕಾರ್ಗಿಲ್‌ ಟ್ರೇಡ್‌ ಕಂಪನಿಗೆ ಸುಮಾರು ಹದಿನೈದು ಸಾವಿರ ಎಕರೆ ಕೃಷಿ ಭೂಮಿಯನ್ನು ಅತ್ಯಂತ ಕಡಿಮೆ ದರದಲ್ಲಿ ನೀಡಲು ನಿರ್ಧರಿಸಿದಾಗ ಅನೇಕ ರೈತ ಸಂಘಟನೆಗಳ ಹೋರಟ ನಡೆಸಿದ ಪರಿಣಾಮ ಸಾವಿರಾರು ಎಕರೆ ಕೃಷಿ ಭೂಮಿ ಉಳಿದು ಕೊಂಡಿತ್ತು. ನಮ್ಮ ದೇಶದ ಬಾಸುಮತಿ ಹಕ್ಕಿಯಪೇಟೆಂಟನ್ನು ಅಮೆರಿಕ ಪಡೆದುಕೊಂಡಿದ್ದು, ಇಂದಿಗೂ ಅದನ್ನು ಹಿಂಪಡೆಯಲು ಸಾಧ್ಯವಾಗಿಲ್ಲ ಎಂದು ಹೇಳಿದರು.

ನಿಮ್ಮ ವಿಜ್ಞಾನ ಮತ್ತು ತಂತ್ರಜ್ಞಾಗಳಾದ ಡ್ರೋನ್‌ ಇತ್ಯಾದಿಗಳನ್ನು ತಲೆ ಮೇಲೆ ಇಟ್ಟುಕೊಳ್ಳಿ. ರೈತರಿಗೆ ಅನುಕೂಲವಾಗುವಂತಹ, ಹವಾಮಾನ ಬದಲಾವಣೆಗೆ ಬೇಕಿರುವ ನೀತಿ ನಿಯಮಗಳನ್ನು ಅನುಷ್ಠನಾಗೊಳಿಸುವ ಬದ್ಧತೆ ಸರ್ಕಾರಗಳು ತೋರಬೇಕಿದೆ.– ಶ್ರೀಧರ್‌ ರಾಧಾಕೃಷ್ಣ, ರಾಷ್ಟ್ರೀಯ ಸಂಚಾಲಕ ಆಶಾ ಕಿಶಾನ್‌ ಸ್ವರಾಜ್‌ ಸಂಸ್ಥೆ.

ಟಾಪ್ ನ್ಯೂಸ್

ಚುನಾವಣೆಯಲ್ಲಿ ಎದುರಾಳಿ ಯಾರೇ ಇರಲಿ ಅದರ ಬಗ್ಗೆ ನನಗೆ ಚಿಂತೆ ಇಲ್ಲ: ಸಿದ್ದರಾಮಯ್ಯ

ಚುನಾವಣೆಯಲ್ಲಿ ಎದುರಾಳಿ ಯಾರೇ ಇರಲಿ ಅದರ ಬಗ್ಗೆ ನನಗೆ ಚಿಂತೆ ಇಲ್ಲ: ಸಿದ್ದರಾಮಯ್ಯ

naval

ಡೈರೆಕ್ಟರ್ ಜನರಲ್ ನೇವಲ್ ಆಪರೇಷನ್ಸ್ ಆಗಿ ಅತುಲ್ ಆನಂದ ಅಧಿಕಾರ ಸ್ವೀಕಾರ

mattimood

ಕಲಬುರಗಿ ಗ್ರಾಮೀಣ ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

1-ascdsadasd

ಬೈಂದೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಮುನಿಯಾಲು ಉದಯಕುಮಾರ್ ಶೆಟ್ಟಿ ಹೆಸರು ಪ್ರಸ್ತಾಪ

Ra

ಜೈಲು ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ನಾಳೆ ಸೂರತ್ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚುನಾವಣೆಯಲ್ಲಿ ಎದುರಾಳಿ ಯಾರೇ ಇರಲಿ ಅದರ ಬಗ್ಗೆ ನನಗೆ ಚಿಂತೆ ಇಲ್ಲ: ಸಿದ್ದರಾಮಯ್ಯ

ಚುನಾವಣೆಯಲ್ಲಿ ಎದುರಾಳಿ ಯಾರೇ ಇರಲಿ ಅದರ ಬಗ್ಗೆ ನನಗೆ ಚಿಂತೆ ಇಲ್ಲ: ಸಿದ್ದರಾಮಯ್ಯ

TDY-7

ಹುಣಸೂರು ಎರಡು ಚೆಕ್‌ಪೋಸ್ಟ್ ಗಳಲ್ಲಿ 15.26 ಲಕ್ಷ ರೂ. ವಶ

ವೈಭವದಿಂದ ನೆರವೇರಿದ ವಿಶ್ವ ವಿಖ್ಯಾತ ಮೇಲುಕೋಟೆ ಚಲುವನಾಯಣಸ್ವಾಮಿ ವೈರಮುಡಿ ಉತ್ಸವ

ವೈಭವದಿಂದ ನೆರವೇರಿದ ವಿಶ್ವ ವಿಖ್ಯಾತ ಮೇಲುಕೋಟೆ ಚಲುವನಾಯಣಸ್ವಾಮಿ ವೈರಮುಡಿ ಉತ್ಸವ

tdy-9

ಬೇಸಿಗೆ ಬಿಸಿಲ ತಾಪಕ್ಕೆ ಬರಿದಾಗುತ್ತಿದೆ ಕಬಿನಿ ಜಲಾಶಯದ ಒಡಲು

3-hunsur

ಹುಣಸೂರು: 50ಕ್ಕೂ ಹೆಚ್ಚು ಯುವಕರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಚುನಾವಣೆಯಲ್ಲಿ ಎದುರಾಳಿ ಯಾರೇ ಇರಲಿ ಅದರ ಬಗ್ಗೆ ನನಗೆ ಚಿಂತೆ ಇಲ್ಲ: ಸಿದ್ದರಾಮಯ್ಯ

ಚುನಾವಣೆಯಲ್ಲಿ ಎದುರಾಳಿ ಯಾರೇ ಇರಲಿ ಅದರ ಬಗ್ಗೆ ನನಗೆ ಚಿಂತೆ ಇಲ್ಲ: ಸಿದ್ದರಾಮಯ್ಯ

naval

ಡೈರೆಕ್ಟರ್ ಜನರಲ್ ನೇವಲ್ ಆಪರೇಷನ್ಸ್ ಆಗಿ ಅತುಲ್ ಆನಂದ ಅಧಿಕಾರ ಸ್ವೀಕಾರ

mattimood

ಕಲಬುರಗಿ ಗ್ರಾಮೀಣ ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

1-ascdsadasd

ಬೈಂದೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಮುನಿಯಾಲು ಉದಯಕುಮಾರ್ ಶೆಟ್ಟಿ ಹೆಸರು ಪ್ರಸ್ತಾಪ