ವಿವಿಯಿಂದ 6 ಗ್ರಾಮ ದತ್ತು: ಕುಲಪತಿ

ಹನೂರು ತಾಲೂಕಿನ 6 ಗ್ರಾಪಂಗಳ ಆರು ಹಳ್ಳಿ ಅಭಿವೃದ್ಧಿಗೆ ಯೋಜನೆ, 3 ಜಿಲ್ಲೆಗಳ 10 ಶಾಲೆ ದತ್ತು ಸ್ವೀಕಾರ

Team Udayavani, Jan 5, 2021, 4:08 PM IST

ವಿವಿಯಿಂದ 6 ಗ್ರಾಮ ದತ್ತು: ಕುಲಪತಿ

ಮೈಸೂರು: ಉನ್ನತ ಭಾರತ ಅಭಿಯಾನ ಯೋಜನೆಯಡಿ ಗ್ರಾಮಗಳ ಅಭಿವೃದ್ಧಿ ಉದ್ದೇಶದಿಂದ ಹನೂರು ತಾಲೂಕಿನ 6 ಗ್ರಾಮಗಳನ್ನು ದತ್ತು ಪಡೆಯಲಾಗಿದೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್‌ ಕುಮಾರ್‌ ಹೇಳಿದರು.

ನಗರದ ವಿವಿ ಕ್ರಾಫ‌ರ್ಡ್‌ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯೋಜನೆಯಡಿ ಹನೂರು ತಾಲೂಕಿನ 6 ಗ್ರಾಮ ಪಂಚಾಯಿತಿಗಳಿಂದ 6ಗ್ರಾಮಗಳನ್ನು ದತ್ತು ಪಡೆದುಕೊಳ್ಳಲಾಗಿದೆ. ಲೊಕ್ಕನ ಹಳ್ಳಿ ಗ್ರಾಪಂ ವ್ಯಾಪ್ತಿಯ ಸೇಬಿನ ಕೋಟೆ, ಪಿ.ಜಿ.ಪಾಳ್ಯ ಗ್ರಾಪಂ ವ್ಯಾಪ್ತಿಯ ಹುಯಿಲ್ನತ್ತ, ಎಂ.ಎಂ .ಹಿಲ್ಸ್ ಗ್ರಾಪಂ ವ್ಯಾಪ್ತಿಯ ಒಡಕೆಹಳ್ಳ, ಪೊನ್ನಾಚಿ ಗ್ರಾಪಂ ರಾಮೇಗೌಡನಹಳ್ಳಿ, ಮಿಣ್ಯಂ ಗ್ರಾಪಂ ವ್ಯಾಪ್ತಿಯ ಸೂಳೆಕೋಬೆ, ಹುತ್ತೂರು ಗ್ರಾಪಂ ವ್ಯಾಪ್ತಿಯ ಗುಳ್ಳದ ಬಯಲು ಗ್ರಾಮಗಳನ್ನು ದತ್ತು ಸ್ವೀಕರಿಸಲಾಗಿದೆ ಎಂದರು.

10 ಶಾಲೆ ದತ್ತು: ಮೈಸೂರು ವಿಶ್ವವಿದ್ಯಾಲಯವು ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸುವ ಉದ್ದೇಶದಿಂದ ಮೈಸೂರು, ಮಂಡ್ಯ, ಹಾಸನ, ಚಾಮರಾಜ ನಗರ ಜಿಲ್ಲೆಗಳಿಂದ 10 ಶಾಲೆಗಳನ್ನು ದತ್ತು ಸ್ವೀಕರಿಸಿದೆ.

ಚಾ.ನಗರ ಜಿಲ್ಲೆ: ದತ್ತು ಪಡೆದಿರುವ ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿಯ ಸರ್ಕಾರಿ ಹಿರಿಯ ಪ್ರಾಥ ಮಿಕ ಶಾಲೆ (ಶತಮಾನ ಕಂಡ ಶಾಲೆ), ಯಳಂದೂರು ತಾಲೂಕಿನ ಕೊಮಾರನಪುರದ ಸರ್ಕಾರಿ ಹಿರಿಯಪ್ರಾಥಮಿಕ ಶಾಲೆ (ಶತಮಾನ ಕಂಡ ಶಾಲೆ), ಹನೂರು ತಾಲೂಕಿನ ಸರ್ಕಾರಿ ಉನ್ನತೀಕರಿಸಿದ ಹಿರಿಯಪ್ರಾಥಮಿಕ ಶಾಲೆಯನ್ನು ಚಾಮರಾಜನಗರ ಜಿಲ್ಲೆಯ ಡಾ.ಬಿ.ಆರ್‌.ಅಂಬೇಡ್ಕರ್‌ ಸ್ನಾತಕೋತ್ತರ ಕೇಂದ್ರ ನೋಡಿಕೊಳ್ಳಲಿದೆ ಎಂದು ಹೇಳಿದರು.

ಮಂಡ್ಯ, ಹಾಸನ ಜಿಲ್ಲೆ: ಪಾಂಡವಪುರ ತಾಲೂಕಿನ ಲಕ್ಷ್ಮೀಸಾಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ,ಮಂಡ್ಯ ತಾಲೂಕಿನ ಎಲೆಚಾಕನಹಳ್ಳಿ ಸರ್ಕಾರಿ ಹಿರಿಯಪ್ರಾಥಮಿಕ ಶಾಲೆಗಳನ್ನು ಮಂಡ್ಯ ಜಿಲ್ಲೆಯ ತೂಬಿನ ಕೆರೆ ಸರ್‌.ಎಂ.ವಿಶ್ವೇಶ್ವರಯ್ಯ ಸ್ನಾತಕೋತ್ತರ ಕೇಂದ್ರ ನೋಡಿಕೊಳ್ಳಲಿದೆ. ಹೊಳೆನರಸೀಪುರ ತಾಲೂಕಿನ ಯಲ್ಲೇಶಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಹಾಸನ ಜಿಲ್ಲೆಯ ಹೇಮಗಂಗೋತ್ರಿ ಸ್ನಾತಕೋತ್ತರ ಕೇಂದ್ರದ ನೋಡಿಕೊಳ್ಳಲಿದೆ.

ಮೈಸೂರು: ಮೈಸೂರು ತಾಲೂಕಿನ ಮಾರ್ಬಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಗುಂಗ್ರಾಲ್‌ ಛತ್ರದ ಸರ್ಕಾರಿ ಪ್ರೌಢಶಾಲೆ, ಕೆ.ಆರ್‌.ಮಿಲ್‌ ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಎಚ್‌.ಡಿ.ಕೋಟೆ ತಾಲೂಕಿನಕ್ಯಾತನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನುಮೈಸೂರು ವಿಶ್ವವಿದ್ಯಾಲಯ ನೋಡಿ ಕೊಳ್ಳ ಲಿದೆ ಎಂದು ಮಾಹಿತಿ ನೀಡಿದರು.

ಸಮತಿ ರಚನೆ: ವಿಶ್ವವಿದ್ಯಾಲಯ ದತ್ತು ಪಡೆದಿರುವ ಶಾಲೆಗಳನ್ನು ಅಭಿವೃದ್ಧಿಪಡಿಸುವ ಹಾಗೂ ಅವುಗಳ ಜೀರ್ಣೋದ್ಧಾರಕ್ಕಾಗಿ ಒಂದು ಸಮಿತಿಯನ್ನು ರಚಿ ಸಿದ್ದು, ಅದರಂತೆ ಸಮಿತಿಯು ಅಧ್ಯಕ್ಷರನ್ನೊಳ ಗೊಂಡ ಎಲ್ಲ ಸದ ಸ್ಯರು ಶಾಲೆಗಳಿಗೆ ಖುದ್ದು ಭೇಟಿ ನೀಡಿ, ಶಾಲೆಗಳಲ್ಲಿರುವಂತಹ ನೂನ್ಯತೆಗಳನ್ನು ಗುರುತಿಸಿದ್ದಾರೆ ಎಂದರು.

ಈ ಸಂಬಂಧ ಮುಖ್ಯಮಂತ್ರಿಗಳ ಶಿಕ್ಷಣ ಸುಧಾ ರಣಾ ಸಲಹಗಾರರಾದ ಡಾ.ಎಂ.ಆರ್‌.ದೊರೆಸ್ವಾಮಿ ಇವರ ಜೊತೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ನಡೆದ ಸಭೆಯಲ್ಲಿ ದತ್ತು ಪಡೆದಿರುವ ಶಾಲೆಗಳ ಬಗ್ಗೆ ಚರ್ಚಿ ಸಲಾಯಿತು ಎಂದು ಅವರು ತಿಳಿಸಿದರು.

ಮೈಸೂರು ವಿವಿಯು ಶತಮಾನೋತ್ಸವ ಆಚರಿಸಿಕೊಂಡಿದ್ದು, ವಿವಿ ವ್ಯಾಪ್ತಿಯಲ್ಲಿ ನೂರು ವರ್ಷಗಳ ಇತಿಹಾಸ ಹೊಂದಿರುವ, ಹಲವು ಸಾಧನೆಗಳನ್ನು ಮಾಡಿರುವಂತಹ ಶಾಲೆಗಳನ್ನು ಗುರುತಿಸಿ ಮತ್ತಷ್ಟು ಬಲವರ್ಧನೆಗೊಳಿಸುವ ಹಾಗೂ ಗುಣಮಟ್ಟದ ಶಿಕ್ಷಣ ಹೆಚ್ಚಿಸುವ ಮೂಲಕ ಮಾದರಿ ಶಾಲೆಗಳನ್ನಾಗಿಸುವ ಉದ್ದೇಶದಿಂದ ಶಾಲೆಗಳನ್ನು ದತ್ತು ಸ್ವೀಕರಿಸಲಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕುಲಸಚಿವ ಪ್ರೊ.ಆರ್‌.ಶಿವಪ್ಪ, ಪ್ರಸಾರಾಂಗ ನಿರ್ದೇಶಕ ಪ್ರೊ.ಎನ್‌.ಎಂ.ತಳವಾರ,ಪ್ರಾಚ್ಯವಿದ್ಯಾ ಸಂಶೋಧನಾಲಯ ನಿರ್ದೇಶಕ ಪ್ರೊ. ಎಸ್‌.ಶಿವರಾಜಪ್ಪ ಮತ್ತಿತರರು ಉಪಸ್ಥಿತರಿದ್ದರು

ಸರ್ಕಾರಿ ಶಾಲೆಗಳ ಪುನರುಜ್ಜೀವನ :

ಸರ್ಕಾರಿ ಶಾಲೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬಲವರ್ಧನೆಗೊಳಿಸಿ, ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಹಾಗೂ ಉತ್ತಮ ಶೈಕ್ಷಣಿಕ ವಾತಾವರಣ ಸೃಷ್ಟಿಸುವ ಹಿನ್ನೆಲೆಯಲ್ಲಿ ಸಮಗ್ರ ಅಭಿವೃದ್ಧಿ ಕ್ರಿಯಾ ಯೋಜನೆಯಡಿ 10 ಶಾಲೆಗಳನ್ನು ದತ್ತು ಪಡೆದು ಕೊಳ್ಳಲಾಗಿದೆ ಎಂದು ಕುಲಪತಿ ಪ್ರೊ.ಜಿ.ಹೇಮಂತ್‌ ಕುಮಾರ್‌ ತಿಳಿಸಿದರು. ವಿದ್ಯಾರ್ಥಿಗಳಿಗೆ ಶೌಚ ಗೃಹ ನಿರ್ಮಿಸಿ ಕೊಡುವುದು ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದು, ಶಾಲೆಗಳ ಪುನರುಜ್ಜೀವನ ಮಾಡುವುದು, ಶತಮಾನ ಕಂಡ ಶಾಲೆಗಳನ್ನು ಗುರುತಿಸಿ ಗೌರವಿಸುವುದು, ಸಮಗ್ರ ಇತಿಹಾಸದ ದಾಖಲೀಕರಣ ಮಾಡುವುದು, ಮಾದರಿ ಶಾಲೆಯಾಗಿ ರೂಪಿಸುವ ಉದ್ದೇಶವಿದೆ. ಹಳೆಯ ವಿದ್ಯಾರ್ಥಿಗಳ ಸಂಘ ರಚಿಸಿ ಶೈಕ್ಷಣಿಕ ಅಭಿವೃದ್ಧಿಗೆ ಪೂರಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದು, ಸರ್ಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಹೆಚ್ಚಿಸುವುದು ವಿವಿಯ ಆಶಯವಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.