ಬಲಿಷ್ಠ ರಾಷ್ಟ್ರ ನಿರ್ಮಿಸಲು ಒಟ್ಟಾಗಿ ಶ್ರಮಿಸೋಣ: ತಹಶೀಲ್ದಾರ್ ಕೆ.ಚಂದ್ರಮೌಳಿ


Team Udayavani, Jan 26, 2022, 6:46 PM IST

ಬಲಿಷ್ಠ ರಾಷ್ಟ್ರ ನಿರ್ಮಿಸಲು ಒಟ್ಟಾಗಿ ಶ್ರಮಿಸೋಣ: ತಹಶೀಲ್ದಾರ್ ಕೆ.ಚಂದ್ರಮೌಳಿ

ಪಿರಿಯಾಪಟ್ಟಣ: ಮಹಾತ್ಮ ಗಾಂಧಿ, ಡಾ.ಅಂಬೇಡ್ಕರ್ರವರ ತ್ಯಾಗ ಬಲಿದಾನದ ಸ್ವಾತಂತ್ರ್ಯವನ್ನು ಎಲ್ಲರೂ ಜವಾಬ್ದಾರಿಯಿಂದ ಕಾಪಾಡಿಕೊಂಡು ಮುನ್ನಡೆಯಬೇಕಿದೆ ಎಂದು ತಹಶೀಲ್ದಾರ್ ಕೆ.ಚಂದ್ರಮೌಳಿ ತಿಳಿಸಿದರು.

ಪಟ್ಟಣದ ಗೋಣಿಕೊಪ್ಪ ರಸ್ತೆಯ ಜೂನೀಯರ್ ಕಾಲೇಜು ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಏರ್ಪಡಿಸಿದ್ದ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇಶದ ಪ್ರಜೆಗಳಾದ ನಾವೆಲ್ಲರೂ ಜಾತಿ, ಧರ್ಮ, ಭಾಷೆ, ಪಂಗಡ, ಗಳೆಂಬ ಸಂಕುಚಿತ ಭಾವನೆಯಿಂದ ಹೊರಬರಬೇಕು ಆ ಮೂಲಕ ಬಲಿಷ್ಠ ರಾಷ್ಟ್ರ ನಿರ್ಮಾಣ ಮಾಡಬೇಕಿದೆ. ದೇಶದ ಪ್ರತಿಯೊಬ್ಬ ಪ್ರಜೆಯೂ ನಮ್ಮ ಭವ್ಯ ಪರಂಪರೆ ಮತ್ತು ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕಿದೆ, 2020 ರಿಂದ ಹಿಂದೆಂದೂ ಕಂಡರಿಯದ ಕೊರೋನಾ ವೈರಸ್ ಎಂಬ ಮಹಾಮಾರಿ ಜಗತ್ತನ್ನೆ ನುಂಗುತ್ತಿರುವ ಸಮಯದಲ್ಲಿ ಕೊರೋನಾಕ್ಕೆ ಲಸಿಕೆಯನ್ನು ಕಂಡು ಹಿಡಿದು ಭಾರತ ಜಗತ್ತಿಗೆ ಮಾದರಿಯಾಗಿದೆ. ತಾಲ್ಲೂಕು ಆಡಳಿತವು ಕೂಡ ಜನತೆಗೆ ಅಗತ್ಯವಾದ ಸಲಹೆ ಸಹಕಾರ ನೀಡಿ ಕೊರೋನಾ ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿದೆ. ದೇಶದ ಪ್ರಗತಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಇವುಗಳನ್ನು ಸದ್ಬಳಕೆ ಮಾಡಿಕೊಂಡು ಪ್ರಗತಿಯತ್ತ ಸಾಗಬೇಕಿದೆ ಎಂದರು.

ಕಾರ್ಯಕ್ರಮದ ಮುಖ್ಯ ಭಾಷಣಕಾರ ಸಿಡಿಪಿಒ ಕುಮಾರ್ ಮಾತನಾಡಿ ಡಾ. ಅಂಬೇಡ್ಕರ್ ರವರು ದೇಶಕ್ಕೆ ಬಲಿಷ್ಠ  ಸಂವಿಧಾನವನ್ನು ನೀಡುವ ಮೂಲಕ  ಇಡೀ ವಿಶ್ವವೇ ಭಾರತವನ್ನು ತಿರುಗಿ ನೋಡುವಂತೆ ಮಾಡಿದ್ದಾರೆ. ದೇಶದಲ್ಲಿ ಸಮಗ್ರ ಏಕತೆಯನ್ನು ಸಾರುವ ಉದ್ದೇಶದಿಂದ ಎಲ್ಲಾ ಜಾತಿ, ಧರ್ಮ ಒಳಗೊಂಡಂತೆ ಎಲ್ಲರೂ ಒಗ್ಗಟ್ಟಿನಿಂದ ಸಮಾನತೆಯಿಂದ ಸಂವಿಧಾನದ ಅಡಿಯಲ್ಲಿ ಕಾನೂನು ಹಾಗೂ ಜನಪ್ರತಿನಿಧಿಗಳು ಆಡಳಿತ ನಡೆಸುವಂತೆ ಮಾಡಿದ್ದಾರೆ ಎಂದರು.

ಶಾಸಕ ಕೆ.ಮಹದೇವ್ ಮಾತನಾಡಿ ಭಾರತ ಸಂಪತ್ಬರಿತ ರಾಷ್ಟ್ರ ಆದರೆ ಅದನ್ನು ಸದ್ಬಳಕೆ ಮಾಡಿಕೊಳ್ಳುವ ಮಟ್ಟಕ್ಕೆ ನಾವು ಬೆಳೆದಿಲ್ಲ, ದೇಶ ಆಡಳಿತದಲ್ಲಿ ಹಿನ್ನಡೆ ಅನುಭವಿಸುತ್ತಿದೆ ಇದಕ್ಕೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ಸಮನ್ವಯದ ಕೊರತೆಯೇ ಕಾರಣ, ಎಲ್ಲರೂ ನೆಮ್ಮದಿಯಿಂದ ಬದುಕಲಿ ಎಂಬ ಕಾರಣಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ರವರು ಸಂವಿಧಾನವನ್ನು ನಮಗೆ ಕೊಟ್ಟು, ವ್ಯಕ್ತಿಯ ಬೆಳವಣಿಗೆಗೆ ಬೇಕಾದ ಶಿಕ್ಷಣ, ಸಮಾನತೆ, ಸ್ವತಂತ್ರ, ಧರ್ಮ, ಸಂಸ್ಕೃತಿ, ಹಕ್ಕು ಮತ್ತು ಕರ್ತವ್ಯಗಳು ಹಾಗೂ  ಸಮಾನ ಅವಕಾಶಗಳನ್ನು ನೀಡಿದ್ದಾರೆ ಆದರೆ ಇದನ್ನು ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ನಾವು ವಿಫಲರಾಗಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಪುರಸಭಾ ಮುಖ್ಯಾಧಿಕಾರಿ ಪ್ರಸನ್ನ, ಅಧ್ಯಕ್ಷ ಮಂಜುನಾಥ ಸಿಂಗ್, ಟಿಎಪಿಸಿಎಂಎಸ್ ಅಧ್ಯಕ್ಷ ತಿಮ್ಮೇಗೌಡ, ಎಪಿಎಂಸಿ ಅಧ್ಯಕ್ಷ ಶಂಕರಪ್ಪ, ವೃತ್ತ ನಿರೀಕ್ಷಕರಾದ ಜಗದೀಶ್, ಪ್ರಕಾಶ್, ಪಿಎಸ್ಐ ಪುಟ್ಟರಾಜು ಎಇಇ  ಮಂಜುನಾಥ್, ಕೃಷಿ ಇಲಾಖೆ ಸಹಾಯಕ ನಿರ್ದೆಶಕ ಪ್ರಸಾದ್ ವಿವಿಧ ಇಲಾಖೆಗಳ ಅಧಿಕಾರಿಗಳಾದ ಭಾರತಿ, ಚಿಕ್ಕಣ್ಣ, ಪ್ರಕಾಶ್, ಕರುಣಾಕರ್, ರಾಕೇಶ್, ಶೇಖರ್ ಡಾ.ಸೋಮಯ್ಯ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮೋಹನ್ ಕುಮಾರ್,  ಸೇರಿದಂತೆ ಮತ್ತಿತರರು ಹಾಜರಿದದರು.

 

ಟಾಪ್ ನ್ಯೂಸ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.