ಹುಣಸೂರು: ಅಕ್ರಮವಾಗಿ ವ್ಯಾಪಾರ ಮಾಡುತ್ತಿದ್ದ 75 ನಗರಸಭೆ ಮಳಿಗೆಗಳಿಗೆ ಬೀಗ

ಹರಾಜು ಆಗಿ 9 ತಿಂಗಳಾದರೂ ಜಾಗ ಖಾಲಿ ಮಾಡದ ಬಾಡಿಗೆದಾರರ ವಿರುದ್ದ ಕ್ರಮ

Team Udayavani, Dec 4, 2022, 12:34 PM IST

7

ಹುಣಸೂರು: ಹುಣಸೂರು ನಗರದ ವಿವಿಧೆಡೆ ನಿರ್ಮಿಸಿರುವ ನಗರಸಭೆಯ ವಾಣಿಜ್ಯ ಮಳಿಗೆಗಳು ಹರಾಜು ಆಗಿ 9 ತಿಂಗಳು ಕಳೆದಿದ್ದರೂ ಬಾಡಿಗೆದಾರರು ಖಾಲಿ ಮಾಡದ ಪರಿಣಾಮ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ನಗರಸಭೆ ಪೌರಾಯುಕ್ತೆ ಎಂ.ಮಾನಸರ ನೇತೃತ್ವದಲ್ಲಿ ಹಲವರ ವಿರೋಧದ ನಡುವೆಯೂ ಕಾರ್ಯಾಚರಣೆ ನಡೆಸಿ 75 ಮಳಿಗೆಗಳನ್ನು ತೆರವುಗೊಳಿಸಿ ಬೀಗ ಜಡಿದು ವಶಕ್ಕೆ ಪಡೆದರು.

ಶನಿವಾರ ಮುಂಜಾನೆ 6 ಗಂಟೆಯಿಂದ ಸಂಜೆವರೆಗೂ ಕಾರ್ಯಾಚರಣೆಗಿಳಿದ ಪೌರಾಯುಕ್ತೆ ಎಂ.ಮಾನಸ, ಪರಿಸರ ಇಂಜಿನಿಯರ್ ರೂಪಾ, ಕಂದಾಯಾಧಿಕಾರಿ ಪಂಪಾ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಸಿಬ್ಬಂದಿಗಳು ನಗರದ ಸಂತೆ ಮಾಳದಲ್ಲಿದ್ದ 71, ಅಕ್ಷಯ ಬಂಡಾರ್ ವೃತ್ತದಲ್ಲಿ 2 ಹಾಗೂ ಎಚ್.ಡಿ.ಕೋಟೆ ವೃತ್ತದಲ್ಲಿ 2 ಸೇರಿದಂತೆ ಒಟ್ಟು 75 ಮಳಿಗೆಗಳಲ್ಲಿ ಅಕ್ರಮವಾಗಿ ಮಳಿಗೆಗಳಲ್ಲಿ ವ್ಯಾಪಾರ ನಡೆಸುತ್ತಿದ್ದವರಿಗೆ ತೆರವುಗೊಳಿಸುವಂತೆ ಸೂಚಿಸಿದರು.

ಕೆಲವರು ಒಪ್ಪಿ ತಾವೇ ತೊರವುಗೊಳಿಸಿದರೆ, ಇನ್ನೂ ಹಲವರು ವಿರೋಧ ವ್ಯಕ್ತಪಡಿಸಿ ಅಧಿಕಾರಿಗಳೊಂದಿಗೆ ಮಾತಿನ ಚಕಮಕಿಗಿಳಿದು ಖಾಲಿ ಮಾಡಲು ಮತ್ತಷ್ಟು ಸಮಯಾವಕಾಶ ನೀಡಿ, ಕೋರ್ಟಿಗೆ ಹೋಗಿ ತಡೆಯಾಜ್ಞೆ ತರುತ್ತೇವೆಂಬ ಮನವಿಗೆ ಅಧಿಕಾರಿಗಳು ಒಪ್ಪದಿದ್ದಾಗ ವ್ಯಾಪಾರಸ್ಥರು ಪ್ರತಿಭಟನೆಗೆ ಮುಂದಾದರೂ ಅಧಿಕಾರಿಗಳು, ಪೊಲೀಸರು ಅವಕಾಶ ನೀಡಲಿಲ್ಲ.

ನಂತರ ತೆರವುಗೊಳಿಸಲು ಹಿಂದೇಟು ಹಾಕಿದ ಮಳಿಗೆಗಳಲ್ಲಿದ್ದ ವಸ್ತುಗಳನ್ನು ವಿಡಿಯೋ ಚಿತ್ರಿಕರಣಗೊಳಿಸಿ, ತೆರವುಗೊಳಿಸಿ ಬೀಗ ಹಾಕಿ ಸೀಲ್ ಹಾಕಿ ನಗರಸಭೆ ಸುಪರ್ದಿಗೆ ಪಡೆದರು.

ಕಾರ್ಯಾಚರಣೆಯಲ್ಲಿ ಮೈಸೂರಿನ ಯೋಜನಾ ಪ್ರಾಧಿಕಾರ ಕಚೇರಿಯ ಅಧಿಕಾರಿ ಸೋಮನಾಥ್, ಸಾಯಿಶಂಕರ್, ಕಂದಾಯಾಧಿಕಾರಿಗಳಾದ ಸಿದ್ದರಾಜು, ಸುರೇಂದ್ರ, ಹಿರಿಯ ಆರೋಗ್ಯಾಧಿಕಾರಿ ಸತೀಶ್, ಚಂದ್ರು, ನಗರಸಭೆ ವಕೀಲ ನಂದನ್ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

ಅಕ್ರಮವಾಗಿ ಕುಳಿತಿದ್ದ ಮಳಿಗೆಯವರಿಗೆ ಹಲವು ಬಾರಿ ನೋಟಿಸ್‌ ನೀಡಲಾಗಿತ್ತಾದರೂ ತೆರವುಗೊಳಿಸಿರಲಿಲ್ಲ. ಹೀಗಾಗಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಕಾರ್ಯಾಚರಣೆ ನಡೆಸಲಾಗಿದೆ. ನಗರಸಭೆಯ 103 ಮಳಿಗೆಗಳ ಪೈಕಿ ಮೂರು ಮಳಿಗೆ ಹರಾಜಾಗಿಲ್ಲ. 12 ಮಳಿಗೆಯವರು ನ್ಯಾಯಾಲಯದ ಮೊರೆ ಹೋಗಿದ್ದರಿಂದ ತೆರವುಗೊಳಿಸಿಲ್ಲ. 13 ಮಂದಿ ಹರಾಜಾಗಿರುವ ಮಳಿಗೆಗಳಲ್ಲೇ ಮುಂದುವರೆದಿರುವುದರಿಂದ ಉಳಿದ 75 ಮಳಿಗೆಗಳನ್ನು ತೆರವುಗೊಳಿಸಲಾಗಿದೆ.

ಈ ಸಂಬಂಧ ಕೌನ್ಸಿಲ್ ಸಭೆಯಲ್ಲಿ ಚರ್ಚಿಸಿ, ನಿರ್ಣಯಿಸಿ  ಹರಾಜಿನಲ್ಲಿ ಮಳಿಗೆ ಪಡೆದಿರುವವರಿಗೆ ನಿಯಮಾನುಸಾರ ಮಳಿಗೆಗಳನ್ನು ಹಸ್ತಾಂತರಿಸಲಾಗುವುದೆಂದು ಪೌರಾಯುಕ್ತೆ ಉದಯವಾಣಿಗೆ ಎಂ.ಮಾನಸ ತಿಳಿಸಿದರು.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.