ಯುವ ಮತದಾರರ ಸೆಳೆಯಲು ಅಭಿಯಾನ


Team Udayavani, Mar 14, 2023, 3:28 PM IST

tdy-16

ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆಯನ್ನು ಮುಕ್ತ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದು, 400 ರೌಡಿಶೀಟರ್‌ಗಳನ್ನು ಗುರುತಿಸಲಾಗಿದೆ. ಇವರಲ್ಲಿ ಓರ್ವ ರೌಡಿಶೀಟರ್‌ನ್ನು ಈಗಾಗಲೇ ಗಡಿಪಾರು ಮಾಡಲಾಗಿದ್ದು, ಇನ್ನೂ 3 ಮಂದಿಯನ್ನು ಗಡಿಪಾರು ಮಾಡುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದರು.

ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಕೆಲವರ ಚಲನ-ವಲನಗಳನ್ನು ಪರಿಶೀಲಿಸಿ ಪೊಲೀಸ್‌ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಇನ್ನೂ ಕೆಲವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಜೈಲಿಗೆ ಕಳಿ ಸ ಲಾಗಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತ ಯಾರೇ ಆದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಯುವ ಸಮೂಹ ಸೆಳೆಯಲು ವಿಶೇಷ ಅಭಿಯಾನ: ಹಿರಿಯ ನಾಗರಿಕರು, ವಯಸ್ಕರು ಮತದಾನಕ್ಕೆ ತೋರುವ ಅಸಕ್ತಿಯನ್ನು ವಿದ್ಯಾವಂತ ಯುವ ಸಮೂಹ ತೋರುತ್ತಿಲ್ಲ. ಹೀಗಾಗಿ ವಿದ್ಯಾವಂತರ ಮತದಾನ ಹೆಚ್ಚಳಕ್ಕಾಗಿ ವಿಶೇಷ ಅಭಿಯಾನ ಕೈಗೊಳ್ಳಲಾಗಿದೆ. ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಮೂರು ವಿಧಾನಸಭೆ ಕ್ಷೇತ್ರಗಳಲ್ಲಿ ಮತ್ತು ಕಡಿಮೆ ಮತದಾನವಾಗಿದೆ. ಇದರ ಜೊತೆಗೆ ವಿದ್ಯಾವಂತ ಯುವ ಸಮೂಹ ಮತದಾನದಿಂದ ದೂರ ಉಳಿಯುತ್ತಿದ್ದು, ಇದನ್ನು ತಡೆಗಟ್ಟುವ ಉದ್ದೇಶದಿಂದ ಜಿಲ್ಲಾಡಳಿತದಿಂದ ಎರಡು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನಿಮ್ಮ ಮತಗಟ್ಟೆಯ ಬಗ್ಗೆ ತಿಳಿದುಕೊಳ್ಳಿ, “ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ ಎಂಬ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಗೊಂದಲಗಳನ್ನು ಪರಿಶೀಲಿಸಿಕೊಳ್ಳಬಹುದು: ಜಿಲ್ಲೆಯಲ್ಲಿ 1.20 ಲಕ್ಷ ಜನರ ಹೆಸರು ಡಿಲಿಟ್‌ ಆಗಿದ್ದು, ಎರಡು ಕಡೆ ದಾಖಲಾಗಿರುವ 80,000 ಮಂದಿಯ ಹೆಸರುಗಳು ಡಿಲಿಟ್‌ ಮಾಡಲಾಗಿದೆ. ಈ ಸಂದರ್ಭದಲ್ಲಿ ಕೆಲವರ ಹೆಸರು ಡಿಲಿಟ್‌ ಆಗಿದೆ. ಇದನ್ನು ಮತಗಟ್ಟೆಯ ಅಧಿಕಾರಿಗಳ ಬಳಿಗೆ ತೆರಳಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ತಮ್ಮ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಳ್ಳಲು ಪ್ರತಿಯೊಬ್ಬರು “ವೋಟರ್‌ ಹೆಲ್ಪ್ಲೈನ್‌ ಆ್ಯಪ್‌’ ಅನ್ನು ಡೌನ್ಲೋಡ್‌ ಮಾಡಿಕೊಳ್ಳಬೇಕು. ಇದರ ಮೂಲಕ ಪ್ರತಿಯೊಂದು ಮತಗಟ್ಟೆಯಲ್ಲಿಯೂ ಮತಗಟ್ಟೆ ಅಧಿ ಕಾರಿ ಹೆಸರು ಹಾಗೂ ಮೊಬೈಲ್‌ ನಂಬರ್‌ ಎಲ್ಲವನ್ನು ನೀಡಲಿದೆ. ಆ ಮೂಲಕ ನಿಮ್ಮ ಗೊಂದಲಗಳನ್ನು ಪರಿಶೀಲಿಸಿಕೊಳ್ಳಬಹುದು ಎಂದು ಸಲಹೆ ನೀಡಿದರು.

ಹಿರಿಯರಿಗೆ, ವಿಶೇಷಚೇತರಿಗೆ ಅಂಚೆ ಮತದಾನ: 80 ವರ್ಷ ತುಂಬಿದವರು, ಹಾಸಿಗೆ ಹಿಡಿದಿರುವವರು, ವಿಶೇಷ ಚೇತನರ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಅಂದಾಜು 80 ಸಾವಿ ರಕ್ಕೂ ಹೆಚ್ಚು ಮಂದಿ 80 ವರ್ಷ ಪೂರೈಸಿದವರು ಹಾಗೂ 30 ಸಾವಿರ ವಿಶೇಷ ಚೇತನರಿದ್ದಾರೆ. ಇವರೆಲ್ಲರಿಗೂ ಅಂಚೆ ಮತದಾನಕ್ಕೆ ಅವ ಕಾಶ ಮಾಡಿಕೊಡಲಾಗುವುದು ಎಂದು ತಿಳಿಸಿದರು.

ವಿವಿ ಪ್ಯಾಟ್‌ ಬಗ್ಗೆ ಅನುಮಾನಬೇಡ: ವಿವಿ ಪ್ಯಾಟ್‌ ಮತ್ತು ಇವಿಎಂ ಬಗ್ಗೆ ಜನರಿಗೆ ಉಂಟು ಮಾಡಿರುವ ಅನುಮಾನವನ್ನು ನಿವಾರಣೆ ಮತ್ತು ಜಾಗೃತಿಗಾಗಿ ಈಗಾಗಲೇ 250 ಸೆಕ್ಟರ್‌ ಅಧಿಕಾರಿಗಳ ಮೂಲಕ ಬ್ಯಾಲೆಟ್‌ ಯೂನಿಟ್‌ ಹೇಗೆ ಕೆಲಸ ನಿರ್ವಹಿಸುತ್ತಿವೆ ಎಂದು ಪ್ರಾತ್ಯಕ್ಷಿಕತೆ ಮಾಡಲಾಗುತ್ತಿದೆ. ವಿವಿಪ್ಯಾಟ್‌ ನಿಜಕ್ಕೂ ಪಾರದರ್ಶಕವಾಗಿ ಕೆಲಸ ಮಾಡುವುದರಲ್ಲಿ ಯಾವುದೇ ಅನುಮಾನ ಬೇಡ ಎಂದರು.

ಈ ಸಂದರ್ಭ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ರವಿಕುಮಾರ್‌, ಪದಾಧಿಕಾರಿಗಳಾದ ಸುಬ್ಬಣ್ಣ, ರಂಗಸ್ವಾಮಿ ಇದ್ದರು. ದರು. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ರವಿಕುಮಾರ್‌ ಇದ್ದರು.

ಖಾತೆ-ಕಂದಾಯಗಳನ್ನು ಮಾಡಿಕೊಡಲು ಅಧಿಕಾರಿಗಳು ಸಾರ್ವಜನಿಕರನ್ನು ಅಲೆಸಬಾರದು. ಈಗಾಗಲೇ ಇಂತಹ ವಿಚಾರಗಳು ಗಮನಕ್ಕೆ ಬಂದಿವೆ. ಪುರಸಭೆ, ನಗರಸಭೆ ಆಯುಕ್ತರು, ತಹಸೀಲ್ದಾರ್‌ ಅವರಿಗೆ ಖಡನ್‌ ಸೂಚನೆ ನೀಡಲಾಗಿದೆ. ಒಂದು ವೇಳೆ ಖಾತೆ-ಕಂದಾಯಗಳನ್ನು ಮಾಡಿಕೊಡಲು ಸತಾಯಿಸುವ ಅಧಿಕಾರಿ ವಿರುದ್ಧ ದೂರು ಬಂದರೆ ಅಂತಹವರನ್ನು ಅಮಾನತು ಮಾಡಲಾಗುವುದು. – ಡಾ.ಕೆ.ವಿ.ರಾಜೇಂದ್ರ, ಜಿಲ್ಲಾಧಿಕಾರಿ ಮೈಸೂರು

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.