ಬೊಗಳಿದ ನಾಯಿಗೆ ಇರಿದ ನೆರೆಮನೆಯಾತ


Team Udayavani, Jun 28, 2017, 12:14 PM IST

mys3.jpg

ಮೈಸೂರು: ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ತಮ್ಮನ್ನು ಕಂಡು ನಾಯಿ ಬೊಗಳಿದ್ದರಿಂದ ಕುಪಿತಗೊಂಡ ಯುವಕನೊಬ್ಬ ಚಾಕುವಿನಿಂದ ಇರಿದು ನಾಯಿಯನ್ನು ಸಾಯಿಸಲು ಯತ್ನಿಸಿದ ವಿಚಿತ್ರ ಘಟನೆ ನಡೆದಿದೆ. ಮೈಸೂರಿನ ಎನ್‌.ಆರ್‌ ಮೊಹಲ್ಲಾದ ಎ.ಜೆ. ಬ್ಲಾಕ್‌ನಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ನಿವಾಸಿ ಜುಲ್ಫಿಕರ್‌(26) ಎಂಬಾತ ಚಾಕುವಿನಿಂದ ಇರಿದು ನಾಯಿಯನ್ನು ಸಾಯಿಸಲು ಯತ್ನಿಸಿದವನು. ಘಟನೆಯಿಂದ ಗಾಯಗೊಂಡಿರುವ ಆರೋಕ್ಯ ಮೇರಿ ಅವರ ಸಾಕು ನಾಯಿಗೆ ದಟ್ಟಗಳ್ಳಿಯಲ್ಲಿ ದಿ ವೂಪ್‌ ವ್ಯಾಗನ್‌ ವೆಟರ್ನರಿ ಕ್ಲಿನಿಕ್‌ ಮತ್ತು ಪೆಟ್‌ ಕ್ಲಿನಿಕ್‌ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಏನಿದು ಘಟನೆ: ಎ.ಜೆ. ಬ್ಲಾಕ್‌ ನಿವಾಸಿ ಆರೋಕ್ಯ ಮೇರಿ ಅವರ ಸಾಕು ನಾಯಿ ಭಾನುವಾರ ಸಂಜೆ 5 ಗಂಟೆ ಸುಮಾರಿನಲ್ಲಿ ಮೇರಿ ಅವರ ಪುತ್ರಿ ಆಸಿಯಾ ಭಾನು ಮಕ್ಕಳೊಂದಿಗೆ ಮನೆಗೆ ಬಂದ ಸಂದರ್ಭದಲ್ಲಿ ಅವರನ್ನು ಕಂಡು ಮುತ್ತಿಕೊಂಡಿದೆ. ಈ ವೇಳೆ ಇದೇ ಮಾರ್ಗವಾಗಿ ಬೈಕಿನಲ್ಲಿ ಬಂದ ನೆರೆ ಮನೆಯ ನಿವಾಸಿ ಜುಲ್ಫಿಕರ್‌ನನ್ನು ಕಂಡ ನಾಯಿ ಸಹಜವಾಗಿ ಬೊಗಳ ತೊಡಗಿದೆ.

ಇಷ್ಟಕ್ಕೇ ಕುಪಿತಗೊಂಡ ಜುಲ್ಫಿಕರ್‌ ಬೈಕ್‌ನಿಂದ ಇಳಿದು, ನಾಯಿಯ ಮಾಲೀಕರನ್ನು ನಿಂದಿಸಿದರಲ್ಲದೇ, ಕಲ್ಲಿನಿಂದ ಹೊಡೆದಿದ್ದಾರೆ. ಅಷ್ಟರಲ್ಲೇ ಹೊರಬಂದ ಆಸಿಯಾ ಭಾನು, ನಾಯಿಯನ್ನು ಮನೆಯ ಮಹಡಿಯ ಮೇಲೆ ಕಟ್ಟಿ ಹಾಕಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಜುಲ್ಫಿಕರ್‌ ಕೆಲ ಹೊತ್ತಿನ ಬಳಿಕ ತನ್ನ ಸ್ನೇಹಿತರೊಂದಿಗೆ ಮನೆಗೆ ಬಂದು, ಮಹಡಿ ಮೇಲೆ ಮಲಗಿದ್ದ ನಾಯಿಯ ತಲೆ, ಕುತ್ತಿಗೆ ಹಾಗೂ ದವಡೆ ಭಾಗಕ್ಕೆ ಚಾಕುವಿನಿಂದ ಮನಬಂದಂತೆ ಇರಿದಿದ್ದಾನೆ.

ಈ ವೇಳೆ ನಾಯಿ ಕೂಗಾಟವನ್ನು ಗಮನಿಸಿ ಮೇರಿ ಹಾಗೂ ಅವರ ಮನೆಯವರು ಹೊರಬಂದಾಗ  ಅವರಿಗೂ ಚಾಕು ತೋರಿಸಿದ ಜುಲ್ಫಿಕರ್‌ ಹತ್ತಿರ ಬಂದರೆ ಕೊಲೆ ಮಾಡುವುದಾಗಿ ಬೆದರಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ನಾಯಿಯ ಮಾಲೀಕರಾದ ಆರೋಕ್ಯ ಮೇರಿ ಎನ್‌.ಆರ್‌.ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಜುಲ್ಫಿàಕರ್‌ನ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.