ಕೆಟ್ಟವರನ್ನೂ ಒಳ್ಳೆಯ ದಾರಿಗೆ ತರುವ ಜನಸ್ನೇಹಿ ಪೊಲೀಸ್‌


Team Udayavani, Dec 15, 2019, 3:00 AM IST

kettavarannu

ಮೈಸೂರು: ಪೊಲೀಸರು ಒಳ್ಳೆಯವರ ಜೊತೆ ಒಳ್ಳೆಯವರಾಗಿ ಹಾಗೂ ಕೆಟ್ಟವರ ಜೊತೆ ಕೂಡ ಒಳ್ಳೆಯವರಾಗಿ ಅವರನ್ನು ಸರಿಯಾದ ದಾರಿಗೆ ತರುವಂತೆ ಮಾಡುವುದು ಜನಸ್ನೇಹಿ ಪೊಲೀಸ್‌ ಎಂದು ದಕ್ಷಿಣ ವಲಯ ಪೊಲೀಸ್‌ ಮಹಾ ನಿರ್ದೇಶಕ ವಿಪುಲ್‌ ಕುಮಾರ್‌ ಹೇಳಿದರು.

ಮೈಸೂರಿನ ಪೊಲೀಸ್‌ ಅಧೀಕ್ಷಕರ ಕಚೇರಿ ಸಭಾಂಗಣದಲ್ಲಿ ಶನಿವಾರ ಜನಸ್ನೇಹಿ ಪೊಲೀಸ್‌ ಕುರಿತು ವಲಯದ ಎಲ್ಲಾ ಪೊಲೀಸ್‌ ಅಧೀಕ್ಷಕರಿಗೆ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಭಾರತ ಸರ್ಕಾರ, ಕರ್ನಾಟಕ ಸರ್ಕಾರ, ಪೊಲೀಸ್‌ ಇಲಾಖೆಯ ನಮೆಲ್ಲರ ಕನಸು ಪೊಲೀಸರು ಜನಸ್ನೇಹಿಯಾಗುವುದು ಎಂದು ಹೇಳಿದರು.

ಜನರ ಧ್ವನಿಯಾಗುವುದು: ಪೊಲೀಸರು ಜನಸ್ನೇಹಿಯಾಗಲು ಪ್ರಮುಖವಾಗಿ ಗೌರವಯುತ ನಡತೆ, ವಿಶ್ವಾಸಾರ್ಹರಾಗುವುದು ಹಾಗೂ ಜನರ ಧ್ವನಿಯಾಗುವುದು. ಈ ಮೂರು ಅಂಶಗಳನ್ನು ಅಳವಡಿಸಿಕೊಳ್ಳಬೇಕು. ಜನ ಸಾಮಾನ್ಯರು ನಮ್ಮ ಬಳಿ ಬಂದಾಗ ನಮ್ಮ ಮೊದಲ ನೋಟ ಹೇಗಿರಬೇಕು ಎಂಬುದರ ಮೇಲೆ ವಿಶ್ವಾಸಾರ್ಹತೆ ನಿಂತಿದೆ. ಸಾರ್ವಜನಿಕರನ್ನು ನಾವು ಹೇಗೆ ಘನತೆ, ಗೌರವದಿಂದ ನೋಡುತ್ತೇವೆ ಎನ್ನುವುದು ಮುಖ್ಯ ಎಂದರು.

ಆತ್ಮಸ್ಥೈರ್ಯ ತುಂಬಿ: ನೊಂದವರು ದೂರು ನೀಡಲು ಠಾಣೆಗೆ ಬಂದಾಗ ಅವರ ನೈತಿಕ ಬಲವನ್ನು ಕುಗ್ಗಿಸುವ ಕೆಲಸವನ್ನು ಪೊಲೀಸರು ಮಾಡಬಾರದು. ಅವರಲ್ಲಿ ಆತ್ಮಸ್ಥೈರ್ಯ ತುಂಬಿ ಠಾಣೆ ಬಂದ ದೂರುದಾರರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು. ದಿನದಿಂದ ದಿನಕ್ಕೆ ಪೊಲೀಸ್‌ ಠಾಣೆಗಳು ಕೂಡ ಆಧುನೀಕತೆ ಮೈಗೂಡಿಸಿಕೊಂಡು ಮೇಲ್ದರ್ಜೆಗೇರುತ್ತಿವೆ. ಮೊದಲೆಲ್ಲಾ ಠಾಣೆಗಳಲ್ಲಿ ಸ್ವಾಗತಕಾರರು ಇರಲಿಲ್ಲ. ಈಗ ಸ್ವಾಗತಕಾರರನ್ನು ನೇಮಿಸಲಾಗಿದ್ದು, ಅವರು ದೂರು ನೀಡಲು ಬಂದವರಿಗೆ ಸೂಕ್ತ ಮಾಹಿತಿ ನೀಡಲಿದ್ದಾರೆ ಎಂದು ಹೇಳಿದರು.

ಸಾರ್ವಜನಿಕರ ಸಹಕಾರ ಮುಖ್ಯ: ಸಾರ್ವಜನಿಕರ ಸಹಕಾರವಿದ್ದರೆ ಮಾತ್ರ ಅಪರಾಧ ತಡೆಗಟ್ಟಲು ಸಾಧ್ಯ. ಈ ನಿಟ್ಟಿನಲ್ಲಿ ನಾವು ಸಾಮಾನ್ಯ ಜನರನ್ನು ಮಾನವೀಯತೆ ದೃಷ್ಟಿಯಿಂದ ನೋಡಿ, ಅವರಿಗೆ ಗೌರವ ನೀಡಬೇಕು. ಪೊಲೀಸರು ನಂಬಿಕಸ್ಥರಾಗಿರಬೇಕು. ಜಗತ್ತಿನಲ್ಲಿ ಬಹಳಷ್ಟು ಜನ ನಮ್ಮ ಮೇಲೆ ನಂಬಿಕೆಯನ್ನು ಇಟ್ಟುಕೊಂಡಿರುವುದಿಲ್ಲ. ಜನರು ನಮ್ಮ ಮೇಲೆ ವಿಶ್ವಾಸ ಹೊಂದುವಷ್ಟರ ಮಟ್ಟಿಗೆ ನಾವಿನ್ನು ಬೆಳೆದಿಲ್ಲ. ಆ ನಂಬಿಕೆಯ ಹಂತವನ್ನು ನಾವು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ಹೇಳಿದರು.

ಪೊಲೀಸರು ಜನರ ಧ್ವನಿಯಾಗಬೇಕು. ಜನರ ಮಾತನ್ನು ಕೇಳಿಸಿಕೊಳ್ಳಬೇಕು. ಒಳ್ಳೆಯವರನ್ನು ರಕ್ಷಿಸಬೇಕು. ಕಾನೂನು ಉಲ್ಲಂ ಸುವವರಿಗೆ ಕಾನೂನಿನ ಬಿಸಿ ಮುಟ್ಟಿಸಬೇಕು ಎಂದರು. ತಪ್ಪಿತಸ್ಥರಿಗೆ ಶಿಕ್ಷೆ ಕೊಡುವುದು ನ್ಯಾಯಾಲಯದ ಕೆಲಸ. ಶಿಕ್ಷೆ ಕೊಡಲು ನ್ಯಾಯಾಲಯಕ್ಕೆ ಬೇಕಾದ ಪ್ರಕ್ರಿಯೆಗಳಿಗೆ ನ್ಯಾಯ ಕೊಡುವುದು ಪೊಲೀಸರ ಕೆಲಸ ಎಂದು ಹೇಳಿದರು. ಮೈಸೂರು ಎಸ್‌.ಪಿ. ಸಿ.ಬಿ.ರಿಷ್ಯಂತ್‌, ಹಾಸನ ಎಸ್‌.ಪಿ.ರಾಮ್‌ ನಿವಾಸ್‌ ಸಪಟ್‌, ಕೊಡಗು ಎಸ್‌.ಪಿ.ಸುಮನ್‌ ಡಿ. ಪನ್ನೇಕರ್‌, ಮಂಡ್ಯ ಎಸ್‌.ಪಿ. ಪರಶುರಾಮ, ಚಾಮರಾಜನಗರ ಎ.ಎಸ್‌.ಪಿ.ಅನಿತಾ ಸೇರಿದಂತೆ ದಕ್ಷಿಣ ವಲಯದ ಎಲ್ಲಾ ಪೊಲೀಸ್‌ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.