Missing ಕೆರೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆ
ಪುತ್ರನ ಸಾವಿನ ಬಗ್ಗೆ ಅನುಮಾನ ಪೊಲೀಸರಿಗೆ ತಾಯಿ ದೂರು
Team Udayavani, Oct 25, 2023, 6:16 PM IST
ಹುಣಸೂರು:ತಾಲೂಕಿನ ಹನಗೋಡು ಹೋಬಳಿಯ ತಿಪ್ಪಲಾಪುರದಲ್ಲಿ ಯುವಕನೊರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಶವ ಕೆರೆಯಲ್ಲಿ ಪತ್ತೆಯಾಗಿದೆ.
ಗ್ರಾಮದ ಲೇ.ಕೆಂಚೇಗೌಡ ಜಯಂತಿಯವರ ಏಕೈಕ ಪುತ್ರ ಮಧು(28) ಮೃತ ಯುವಕ.
ಈತ ಕೆಳೆದ ಅ.23ರ ಸೋಮವಾರ ರಾತ್ರಿಯಿಂದ ಕಾಣೆಯಾಗಿದ್ದ, ಎಲ್ಲೆಡೆ ಹುಡುಕಾಟ ನಡೆಸಿ ಸಿಗದಿದ್ದಾಗ ಹುಣಸೂರು ಗ್ರಾಮಾಂತರ ಠಾಣೆಗೆ ಪುತ್ರ ಕಾಣೆಯಾಗಿದ್ದಾನೆಂದು ದೂರು ನೀಡಿದ್ದರು.
ಬುಧವಾರದಂದು ಸಮೀಪದ ನಾಗನಹಳ್ಳಿ ಕೆರೆಯಲ್ಲಿ ಪುರುಷನ ಶವವೊಂದು ತೇಲುತ್ತಿರುವುದನ್ನು ಕಂಡ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶವ ಹೊರತೆಗೆದು ಪರಿಶೀಲಿಸಲಾಗಿ ಕಾಣೆಯಾಗಿದ್ದ ಮಧು ಎಂಬುದು ತಿಳಿದು ಬಂದ ಮೇರೆಗೆ ಕಾಣೆಯಾದ ರಾತ್ರಿ ಗ್ರಾಮದ ನಾಲ್ವರು ಆತನ ಜೊತೆಗಿದ್ದರು. ರಾತ್ರಿ 9ರ ನಂತರ ಮೊಬೈಲ್ ಸಹ ಸ್ವಿಚ್ ಆಫ್ ಆಗಿತ್ತು. ಮಗನೊಂದಿಗಿದ್ದವರ ಮೇಲೆ ಅನುಮಾನವಿದ್ದು, ಇದೊಂದು ಕೊಲೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಪ್ರಕರಣವನ್ನು ಇನ್ಸ್ಪೆಕ್ಟರ್ ಸಿ.ವಿ.ರವಿ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ತನಿಖೆಯಿಂದಷ್ಟೇ ಸತ್ಯಾಂಶ ಹೊರಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!