ಅಭಿಮನ್ಯು ನೇತೃತ್ವದ ಗಜಪಡೆ ತವರಿಗೆ


Team Udayavani, Oct 18, 2021, 5:45 AM IST

ಅಭಿಮನ್ಯು ನೇತೃತ್ವದ ಗಜಪಡೆ ತವರಿಗೆ

ಮೈಸೂರು: ಕೋವಿಡ್‌ ಆತಂಕದ ನಡುವೆಯೂ ಯಶಸ್ವಿಯಾಗಿ ಜಂಬೂ ಸವಾರಿಯಲ್ಲಿ ಪಾಲ್ಗೊಂಡ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ಗಜಪಡೆ ತವರಿಗೆ ಮರಳಿದವು.

ದಸರಾ ಮಹೋತ್ಸವ ಅಂಗವಾಗಿ ವಿವಿಧ ಆನೆ ಶಿಬಿರಗಳಿಂದ ಅಂಬಾರಿ ಆನೆ ಅಭಿಮನ್ಯು ನೇತೃತ್ವದಲ್ಲಿ ಸೆ.13ರಂದು 8 ಆನೆಗಳು ಮೈಸೂರಿಗೆ ಆಗಮಿಸಿದ್ದವು. ಅವು ಒಂದು ತಿಂಗಳಿನಿಂದ ಅರಮನೆ ಆವರಣದಲ್ಲಿ ವಿಶೇಷ ಆರೈಕೆಯಲ್ಲಿದ್ದು, ನಿತ್ಯ ತಾಲೀಮು ನಡೆಸಿ, ಶುಕ್ರವಾರ ನಡೆದ ಜಂಬೂ ಸವಾರಿಯಲ್ಲಿ ಪಾಲ್ಗೊಂಡು ದಸರಾ ಮಹೋತ್ಸವವನ್ನು ಯಶಸ್ವಿಗೊಳಿ ಸಿದ್ದವು. ಬಳಿಕ ಶನಿವಾರ ಪೂರ್ಣದಿನ ವಿಶ್ರಾಂತಿಯಲ್ಲಿದ್ದ ಆನೆಗಳಿಗೆ ರವಿವಾರ ಬೆಳಗ್ಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಬೀಳ್ಕೊಡಲಾಯಿತು.

ರವಿವಾರ ಮಧ್ಯಾಹ್ನ 1.30ಕ್ಕೆ ಅರಮನೆ ಆವರಣದಿಂದ ವಿಶೇಷ ಟ್ರಕ್‌ ಮೂಲಕ ಮತ್ತಿಗೋಡು ಆನೆ ಶಿಬಿರಕ್ಕೆ ಅಭಿಮನ್ಯು ಮತ್ತು ಗೋಪಾಲಸ್ವಾಮಿ ತೆರಳಿದವು. ಅಶ್ವತ್ಥಾಮನನ್ನು ದೊಡ್ಡ ಹರವೆ ಆನೆ ಶಿಬಿರಕ್ಕೆ ರವಾನಿಸಲಾಯಿತು. ವಿಕ್ರಮ, ಧನಂಜಯ, ಕಾವೇರಿ ಆನೆಗಳನ್ನು ದುಬಾರೆ ಶಿಬಿರಕ್ಕೆ ಕಳುಹಿಸಿದರೆ, ಚೈತ್ರಾ, ಲಕ್ಷ್ಮೀ ಆನೆಗಳನ್ನು ಬಂಡೀಪುರದ ರಾಂಪುರ ಶಿಬಿರಕ್ಕೆ ರವಾನಿಸಲಾಯಿತು. 8 ಆನೆಗಳ ಮಾವುತ ಮತ್ತು ಕಾವಾಡಿಗಳು ಸಹಿಕ 50 ಮಂದಿಗೆ ಅರಮನೆ ಆಡಳಿತ ಮಂಡಳಿ ವತಿಯಿಂದ ತಲಾ 10 ಸಾವಿರ ರೂ. ನೀಡಿ ಅಭಿನಂದಿಸಲಾಯಿತು.

ಇದನ್ನೂ ಓದಿ:ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ಲಾರಿ ಏರಲು ಅಶ್ವತ್ಥಾಮ ಹಿಂದೇಟು
ಇದೇ ಮೊದಲ ಬಾರಿಗೆ ದಸರಾಕ್ಕೆ ಆಗಮಿಸಿದ್ದ ದೊಡ್ಡಹರವೆ ಶಿಬಿರದ ಅಶ್ವತ್ಥಾಮ ಆನೆಯು ಲಾರಿ ಏರಲು ಹಿಂದೇಟು ಹಾಕಿತು. ಎಲ್ಲ ಆನೆಗಳೂ ವಾಹನ ಏರಿದರೂ ಅಶ್ವತ್ಥಾಮ 40 ನಿಮಿಷಕ್ಕೂ ಹೆಚ್ಚು ಕಾಲ ಲಾರಿ ಏರದೆ ರಚ್ಚೆ ಹಿಡಿದು, ನೆಲದಲ್ಲಿ ಉರುಳಾಡಿತು. ಈ ವೇಳೆ ಪಕ್ಕದಲ್ಲೇ ಇದ್ದ ಗೋಪಾಲಸ್ವಾಮಿ ಮತ್ತು ಧನಂಜಯ ಆನೆಗಳ ಮೂಲಕ ಲಾರಿ ಏರಿಸುವ ಪ್ರಯತ್ನವೂ ಕೈಗೂಡಲಿಲ್ಲ. 30 ನಿಮಿಷದ ಬಳಿಕ ಕೂಬಿಂಗ್‌ ಸ್ಪೆಷಲಿಸ್ಟ್‌ ಅಭಿಮನ್ಯು ಆಗಮಿಸಿ, ಇತರ ಆನೆಗಳ ಸಹಾಯದಲ್ಲಿ ಅಶ್ವತ್ಥಾಮನನ್ನು ಲಾರಿ ಏರಿಸಲು ಪ್ರಯತ್ನಿಸಿದ. ಸುಲಭದಲ್ಲಿ ಅಶ್ವತ್ಥಾಮ ಜಗ್ಗಲಿಲ್ಲ. ಬಳಿಕ ಕೋಪಗೊಂಡ ಅಭಿಮನ್ಯು, ತನ್ನ ದಂತಗಳಿಂದ ಜೋರಾಗಿ ಗುದ್ದಿದ ಬಳಿಕ ಅಶ್ವತ್ಥಾಮ ಲಾರಿ ಏರಿದ.

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಚತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Mysore; ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಛತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

Congress ಲೂಟಿ ತಪ್ಪಿಸಲು ಬಿಜೆಪಿ ಜತೆ ಮೈತ್ರಿ: ಎಚ್‌.ಡಿ. ದೇವೇಗೌಡ

Congress ಲೂಟಿ ತಪ್ಪಿಸಲು ಬಿಜೆಪಿ ಜತೆ ಮೈತ್ರಿ: ಎಚ್‌.ಡಿ. ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.