ಅರಣ್ಯ ಇಲಾಖೆ ಎಸಿಎಫ್ ಮನೆಗೆ ಎಸಿಬಿ ದಾಳಿ: ಏಕಕಾಲದಲ್ಲಿ ಐದು ಕಡೆ ಶೋಧ
Team Udayavani, Dec 18, 2020, 12:25 PM IST
ಮೈಸೂರು: ಇಲ್ಲಿನ ಅರಣ್ಯ ಇಲಾಖೆಯ ಎಸಿಎಫ್ ಶಿವಶಂಕರ್ ಮನೆಗೆ ಇಂದು ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳ ತಂಡದ ದಾಳಿ ನಡೆಸಿದ್ದು, ಶೋಧ ಕಾರ್ಯಾಚರಣೆ ನಡೆಸುತ್ತಿದೆ.
ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿರುವ ಆರೋಪದಡಿಯಲ್ಲಿ ಶಿವಶಂಕರ್ ಮನೆಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಎಫ್ ಶಿವಶಂಕರ್ ಮನೆ ಸೇರಿದಂತೆ ಐದು ಕಡೆಗಳಲ್ಲಿ ತೀವ್ರ ಶೋಧ ನಡೆಸಲಾಗುತ್ತಿದೆ.
ಮೈಸೂರಿನ ನಜರ್ಬಾದ್, ಸರಸ್ವತಿಪುರಂ, ಜೆ ಸಿ ಬಡಾವಣೆ ಹಾಗೂ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಇದನ್ನೂ ಓದಿ:ರೈತರ ಪ್ರತಿಭಟನೆ: 11 ದಿನ ಒಂದು ಸಾವಿರ ಕಿಲೋ ಮೀಟರ್ ಸೈಕಲ್ ಪ್ರಯಾಣ-ಬಿಹಾರ ಟು ದೆಹಲಿ
ಮೈಸೂರಿನ ಅರಣ್ಯ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿವಶಂಕರ್ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿದ್ದಾರೆ.
ಎಸಿಬಿ ಎಸ್ ಪಿ ಡಾ ಸುಮನ್ ಡಿ ಪನೆಕರ್ ಮಾರ್ಗದರ್ಶನದಲ್ಲಿ, ಎಸಿಬಿ ಡಿ ಎಸ್ ಪಿ., ಎಚ್ ಪರಶುರಾಮಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ.