ಆಬ್ಬಾ…ರಂಗನಾಥನ ಆಸ್ತಿ, ಪಾಸ್ತಿ ಲೆಕ್ಕ ಹಾಕಿದಷ್ಟು ಮುಗಿಯುತ್ತಿಲ್ಲ!
Team Udayavani, Mar 3, 2017, 3:26 PM IST
ಮೈಸೂರು: ಲೋಕೋಪಯೋಗಿ ಅಧೀಕ್ಷಕ ಅಭಿಯಂತರ ರಂಗನಾಥ ನಾಯಕ್ ಮನೆ ಮೇಲೆ ಶುಕ್ರವಾರ ಬೆಳ್ಳಂಬೆಳಗ್ಗೆ ಎಸಿಬಿ(ಭ್ರಷ್ಟಾಚಾರ ನಿಗ್ರಹ ದಳ) ಅಧಿಕಾರಿಗಳು ದಾಳಿ ನಡೆಸಿದ ವೇಳೆ, ಅಧಿಕಾರಿ ಮನೆಯಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ, ಆಸ್ತಿ, ಪಾಸ್ತಿ ಪತ್ತೆಯಾಗಿರುವುದನ್ನು ಕಂಡು ಎಸಿಬಿ ಅಧಿಕಾರಿಗಳೇ ದಂಗಾಗಿ ಹೋಗಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ರಂಗನಾಥ ಮನೆಯಲ್ಲಿ ಚಿನ್ನದ ಉಂಗುರ, ನೆಕ್ಲೆಸ್, ಒಡವೆಗಳು, ಡೈಮಂಡ್ ಆಭರಣ, ವಜ್ರ, ಬೆಳ್ಳಿ ಪಾತ್ರೆಗಳು ಪತ್ತೆಯಾಗಿವೆ ಎಂದು ಹೇಳಿವೆ. ಅಂದಾಜು 20 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ ಎಂದು ವರದಿ ಹೇಳಿದೆ.
2.30ಕೆಜಿ ಚಿನ್ನ, 8 ಕೆಜಿ ಬೆಳ್ಳಿಯ ವಸ್ತುಗಳು, 14ಎಕರೆ ಜಮೀನು, ಮಾನ್ಯತಾ ಟೆಕ್ ಪಾರ್ಕ್ ಬಳಿ ನಿರ್ಮಾಣ ಹಂತದ 6 ಮಹಡಿಯ ಅಪಾರ್ಟ್ ಮೆಂಟ್, ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಒಂದು ಫಾರ್ಮ್ ಹೌಸ್, 1 ಕೆಟಿಎಂ ಬೈಕ್, ಬೆಂಗಳೂರಿನ ಬ್ಯಾಂಕ್ ಆಫ್ ಬರೋಡಾದಲ್ಲಿ ಲಾಕರ್ ಪತ್ತೆಯಾಗಿದೆ. ಬ್ಯಾಂಕ್ ಗಳಲ್ಲಿ ಅಪಾರ ಪ್ರಮಾಣದ ನಗದು, ಉಳಿತಾಯ ಖಾತೆ ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ
Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ