ಅಪಮಾನ, ಅಪಹಾಸ್ಯವನ್ನು ಸವಾಲಾಗಿ ಸ್ವೀಕರಿಸಿ


Team Udayavani, Mar 11, 2020, 3:00 AM IST

apamana-apa

ಮೈಸೂರು: ಪುರುಷರು ಮಹಿಳೆಯರಿಗೆ ಸಮಾನ ಅವಕಾಶ ದೊರಕಿಸಿಕೊಡಲು ಧ್ವನಿ ಎತ್ತಬೇಕು ಎಂದು ಜಿಪಂ ಯೋಜನಾ ನಿರ್ದೇಶಕಿ ಕೆ.ಸುಶೀಲಾ ಹೇಳಿದರು. ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಕಾವೇರಿ ಸಭಾಂಗಣದಲ್ಲಿ ಮುಕ್ತ ವಿವಿಯ ಅಕ್ಕಮಹಾದೇವಿ ಪೀಠದ ವತಿಯಿಂದ ಆಯೋಜಿಸಿದ್ದ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದರು.

ಬಡ ಕುಟುಂಬಗಳಿಗಿಂತ ಶ್ರೀಮಂತ ಹಾಗೂ ಸುಶಿಕ್ಷಿತರ ಕುಟುಂಬದಲ್ಲೇ ಮಹಿಳೆಯರ ಮೇಲೆ ಹೆಚ್ಚಾಗಿ ದೌರ್ಜನ್ಯ ನಡೆಯುತ್ತಿವೆ. ನಾವು ಮಹಿಳಾ ಸಮಾನತೆಯ ಬಗ್ಗೆ ಮಾತನಾಡುತ್ತೇವೆ. ಜನಸಂಖ್ಯೆಯಲ್ಲಿ ಪುರುಷರಷ್ಟೇ ಸರಿಸಮಾನವಾಗಿ ಮಹಿಳೆಯರು ಇದ್ದಾರೆ. ಇದರಿಂದ ಈಗಾಗಲೇ ಮಹಿಳೆಯರಿಗೆ ಸಮಾನತೆ ಸಿಕ್ಕಂತಾಗಿದೆ. ಆದರೆ ಸರಿಸಮಾನವಾದ ಅವಕಾಶ ಸಿಕ್ಕಿಲ್ಲ ಎಂದರು.

ಈ ಹಿಂದೆ ಮಹಿಳಾ ಆಯೋಗದ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತದ್ದ ವೇಳೆ ದಿನಕ್ಕೆ ದಾಖಲಾಗುತ್ತಿದ್ದ ನೂರಾರು ಪ್ರಕರಣಗಳನ್ನು ನೋಡಿದ್ದೇನೆ. ಅವುಗಳಲ್ಲಿ ಬಡ ಕುಟುಂಬದ ದೌರ್ಜನ್ಯ ಪ್ರಕರಣ ಹಾಗೂ ಶ್ರೀಮಂತ ಕುಟುಂಬದ ಹಾಗೂ ಸುಶಿಕ್ಷಿತರ ಕುಟುಂಬ ಪ್ರಕರಣಗಳನ್ನೂ ಗಮನಿಸಿದ್ದೇನೆ. ಅದರಲ್ಲೂ ವಿಚಾರಣೆ ವೇಳೆ ಕಾಲಿಗೆ ಬಿದ್ದು, ಅತಿ ವಿನಯವಾಗಿ ಮಾತನಾಡುವ ನಾಟಕವಾಡಿ ನಾನೇನು ತಪ್ಪು ಮಾಡಿಲ್ಲ.

ಎಲ್ಲಾ ಹೆಂಡತಿಯದ್ದೇ ತಪ್ಪೆಂದು ಹೇಳಿರುವ ಶ್ರೀಮಂತರನ್ನು ಕಂಡಿದ್ದೇನೆ. ತನ್ನಷ್ಟೇ ಸರಿಸಮಾನವಾಗಿ ದುಡಿದರೂ ಮನೆಯಲ್ಲಿ ನಿರಂತರ ಕಿರುಕುಳ ನೀಡಿ, ತಾನು ಮುಗ್ಧ ಎಂದು ನಂಬಿಸಲು ಪ್ರಯತ್ನಿಸಿದ್ದವರನ್ನು ನೋಡಿದ್ದೇನೆ. ಸಿಗರೇಟಿನಿಂದ ಸುಟ್ಟಿರುವ ಪ್ರಕರಣವನ್ನೂ ಕಂಡಿದ್ದೇನೆ. ಸಮಾಜದಲ್ಲಿ ಎಷ್ಟೇ ಬದಲಾವಣೆಗಳಾªರೂ ಉತ್ತಮ ಶಿಕ್ಷಣ ಪಡೆದವರ ಕುಟುಂಬಗಳಲ್ಲೇ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿರುವುದು ತಲೆ ತಗ್ಗಿಸುವ ಸಂಗತಿ ಎಂದರು.

ಶಿಕ್ಷಣವೊಂದೆ ಮಹಿಳೆಯರ ಬದುಕನ್ನು ಹಸನು ಮಾಡುತ್ತದೆ ಎಂಬುದನ್ನು ಅರಿತಿದ್ದ ಸಾವಿತ್ರಿಬಾಪುಲೆ ಮಹಿಳೆಯರಿಗೆ ಶಿಕ್ಷಣ ನೀಡಲು ಶಾಲೆಯೊಂದನ್ನು ಆರಂಭಿಸಿದರು. ಇದರಿಂದ ಸಮಾಜದ ಕೆಂಗಣ್ಣಿಗೆ, ಅಪಮಾನಕ್ಕೆ ಗುರಿಯಾಗಿದ್ದರು. ಸಗಣಿ ನೀರನ್ನು ಎರಚಿ ಅಪಮಾನಿಸಿದ್ದರು. ಆದರೂ ಛಲ ಬಿಡದೆ ಮಹಿಳೆಯರಿಗೂ ಶಿಕ್ಷಣ ಪಡೆಯಬೇಕು ಎಂಬ ಯಶಸ್ವಿ ಹೋರಾಟ ಮಾಡಿ ಗಮನ ಸೆಳೆದರು.

ಸಾವಿತ್ರಿ ಬಾಪುಲೆ ಅವರಂತೆ ಮಹಿಳೆಯರು ತಮಗಾದ ಅಪಮಾನ, ಅಪಹಾಸ್ಯವನ್ನೇ ಸವಾಲಾಗಿ ಸ್ವೀಕರಿಸಿ ಸಾಧನೆ ಮಾಡುವತ್ತ ಗಮನ ಕೇಂದ್ರೀಕರಿಸಬೇಕು ಎಂದು ಸಲಹೆ ನೀಡಿದರು. ಮಹಿಳೆಯರ ರಕ್ಷಣೆಗಾಗಿ ಹಲವಾರು ಕಾನೂನುಗಳಿವೆ. ಅವುಗಳನ್ನು ಸಮರ್ಥವಾಗಿ ಜಾರಿಗೆ ತಂದರೆ ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಬಹುದು. ಹೊಸ ಕಾನೂನುಗಳ ಅವಶ್ಯಕತೆ ಇರುವುದೇ ಇಲ್ಲ ಎಂದರು.

ಮುಕ್ತ ವಿವಿ ಪರೀಕ್ಷಾಂಗ ಕುಲಸಚಿವೆ ಡಾ.ಕವಿತಾ ರೈ ಅವರ “ವಚನ-ನಿರ್ವಚನ ವಚನಗಳ ವಿಮರ್ಶೆಗಳ ಆಯ್ದ ಸಂಕಲನ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮುಕ್ತ ವಿವಿ ಕುಲಪತಿ ಪ್ರೊ.ಎಸ್‌.ವಿದ್ಯಾಶಂಕರ್‌, ಸಾಹಿತಿ ಪ್ರೊ. ಮೊರಬದ ಮಲ್ಲಿಕಾರ್ಜುನ, ಕುಲಸಚಿವ ಪ್ರೊ.ಲಿಂಗರಾಜ ಗಾಂಧಿ, ಡೀನ್‌ ಡಾ.ತೇಜಸ್ವಿ ನವಿಲೂರು, ಅಕ್ಕಮಹಾದೇವಿ ಪೀಠದ ಸಂಚಾಲಕಿ ಡಾ.ಎಚ್‌.ರಾಜೇಶ್ವರಿ ಇತರರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.