ಎತ್ತರಕ್ಕೆ ಏರುವ ಕನಸು ಕಂಡಾಗ ಸಾಧನೆ


Team Udayavani, May 12, 2019, 3:00 AM IST

yettarakke

ಮೈಸೂರು: ಮನುಷ್ಯನಿಗೆ ಜೀವನದಲ್ಲಿ ತನ್ನ ಕನಸಿನ ಎತ್ತರವನ್ನು ಏರಿಯೇ ತೀರಬೇಕೆಂಬ ಛಲವಿರಬೇಕು ಎಂದು ವಿಜಯಪುರ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ಹೇಳಿದರು.

ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತಕುಮಾರ್‌ ಅಭಿನಂದನಾ ಸಮಿತಿ ಶನಿವಾರ ಮಾನಸಗಂಗೋತ್ರಿಯ ವಿಜ್ಞಾನಭವನದಲ್ಲಿ ಏರ್ಪಡಿಸಿದ್ದ ವಿವಿ ಕುಲಪತಿ ಪ್ರೊ.ಜಿ.ಹೇಮಂತಕುಮಾರ್‌ ಅವರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಎತ್ತರ..ಎತ್ತರ ಏರುವ ಕನಸು ಕಾಣಬೇಕು. ಜೊತೆಗೆ ಆ ಎತ್ತರವನ್ನು ಏರುವ ಸಾಮರ್ಥ್ಯ ನಮ್ಮಲ್ಲಿದೆ ಎಂಬ ಆತ್ಮ ವಿಶ್ವಾಸವೂ ನಮಗಿರಬೇಕು. ಕನಸಿನ ಎತ್ತರವನ್ನು ಏರುವ ನಿಟ್ಟಿನಲ್ಲಿ ಅತ್ಯಂತ ಉತ್ಸಾಹದಿಂದ ನಿರಂತರವಾಗಿ ದೈಹಿಕವಾಗಿ ಮಾತ್ರವಲ್ಲ, ಮಾನಸಿಕವಾಗಿ, ಬೌದ್ಧಿಕವಾಗಿ, ಧಾರ್ಮಿಕವಾಗಿಯೂ ಪರಿಶ್ರಮಪಟ್ಟಾಗ ಸಾಧನೆ ಮಾಡಲು ಸಾಧ್ಯವಾಗಲಿದೆ. ಬೀಳುವುದು ಮಹತ್ವವಲ್ಲ. ಎತ್ತರ ಏರಿಯೇ ತೀರಬೇಕೆಂಬ ಛಲವಿರಬೇಕು ಎಂದರು.

ಮೈಸೂರು ವಿವಿಗೆ ಕುಲಪತಿಯಾಗಿರುವ ಪ್ರೊ.ಜಿ.ಹೇಮಂತಕುಮಾರ್‌, ಎಷ್ಟು ಎತ್ತರ ಏರಿದ್ದೇನೆ ಎಂಬ ಭಾವನೆಯೇ ಇಲ್ಲದೆ ಮೊದಲಿದ್ದಂತೆಯೇ ಇದ್ದಾರೆ. ಗುರು-ಶಿಷ್ಯ ಸಂಬಂಧ ಚೆನ್ನಾಗಿದ್ದರೆ ಜ್ಞಾನ ಹರವುತ್ತೆ. ಹೇಮಂತಕುಮಾರ್‌ ಸಜ್ಜನಿಕೆಯೇ ಅವರ ಸಂಪತ್ತು. ಕುಲಪತಿ ಅವಧಿಯ ನಾಲ್ಕು ವರ್ಷಗಳಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಕೀರ್ತಿಯನ್ನು ಎಲ್ಲಾ ಕಡೆಹರಡುವ ಅವರ ಕನಸು ನನಸಾಗಲಿ. ದೇಹಕ್ಕೆ ವಯಸ್ಸಾದರೂ ಮಾನಸಿಕವಾಗಿ ಕುಮಾರರಾಗಿಯೇ ಇರಲಿ ಎಂದು ಹಾರೈಸಿದರು.

ಸಿಪಿಸಿ ಪಾಲಿಟೆಕ್ನಿಕ್‌: ದಿವ್ಯಸಾನ್ನಿಧ್ಯ ವಹಿಸಿದ್ದ ಸುತ್ತೂರು ಶ್ರೀಕ್ಷೇತ್ರದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ದೇಶದ ಪ್ರತಿಷ್ಠಿತ ಶೈಕ್ಷಣಿಕ ಸಂಸ್ಥೆಗಳಲ್ಲಿ ಒಂದಾಗಿರುವ ಮೈಸೂರು ವಿಶ್ವವಿದ್ಯಾಲಯದ ಕುಲಪತಿಯಾಗಿರುವ ಪ್ರೊ.ಜಿ.ಹೇಮಂತಕುಮಾರ್‌ ಅವರ ಕುಟುಂಬ ಮೈಸೂರಿಗೆ ಸಿಪಿಸಿ ಪಾಲಿಟೆಕ್ನಿಕ್‌ ಕಾಲೇಜಿನಂತಹ ಬಹುದೊಡ್ಡ ಕೊಡುಗೆ ನೀಡಿದೆ.

ಈ ಭಾಗದಲ್ಲಿ ಪಾಲಿಟೆಕ್ನಿಕ್‌ ಅಂದರೆ ಸಿಪಿಸಿ ಎನ್ನುವಷ್ಟರಮಟ್ಟಿಗೆ ಅದರ ಖ್ಯಾತಿ ಇದೆ. ಅಂತಹ ಕುಟುಂಬದಿಂದ ಬಂದಿರುವ ಹೇಮಂತಕುಮಾರ್‌ ಅವರು ಕುಲಪತಿಯಾಗಿ ವಿಶ್ವವಿದ್ಯಾನಿಲಯಕ್ಕೆ ಪೂರ್ಣಾವಧಿ ಕಾರ್ಯಕರ್ತರು ಸಿಕ್ಕಂತಾಗಿದ್ದು, ಅವರು ವಿಶ್ವವಿದ್ಯಾನಿಲಯವನ್ನು ಸಮರ್ಥವಾಗಿ ಮುನ್ನಡೆಸುತ್ತಾರೆ ಎಂದು ಆಶಿಸಿದರು.

ಅಭಿನಂದನಾ ಭಾಷಣ ಮಾಡಿದ ತಮಿಳುನಾಡಿನ ಎಸ್‌ಆರ್‌ಎಂ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕ ಡಾ.ಆರ್‌.ಶ್ರೀನಿವಾಸನ್‌, ಮೈಸೂರಿನಲ್ಲೇ ಹುಟ್ಟಿ-ಬೆಳೆದು, ಇಲ್ಲಿಯೇ ಕಲಿತು, ಕಲಿತ ವಿಶ್ವವಿದ್ಯಾನಿಲಯದ ಕುಲಪತಿಯಾಗಿರುವ ಪ್ರೊ.ಹೇಮಂತಕುಮಾರ್‌, ಮೈಸೂರಿನ ಮಣ್ಣಿನ ಮಗ. ನಾಲ್ವಡಿ ಕೃಷ್ಣರಾಜ ಒಡೆಯರ್‌, ಕುವೆಂಪು ಅವರಂತಹ ಮಹನೀಯರು ಕಟ್ಟಿದ ಪ್ರತಿಷ್ಠಿತ ಮೈಸೂರು ವಿವಿಗೆ ಪ್ರೊ.ಹೇಮಂತಕುಮಾರ್‌ 25ನೇ ಕುಲಪತಿಯಾಗಿರುವುದು ಹೆಮ್ಮೆಯ ವಿಚಾರ ಎಂದು ಹರ್ಷ ವ್ಯಕ್ತಪಡಿಸಿದರು.

ಅಧ್ಯಕ್ಷತೆವಹಿಸಿದ್ದ ಹುಬ್ಬಳ್ಳಿಯ ಕೆಎಲ್‌ಇ ತಾಂತ್ರಿಕ ಶಿಕ್ಷಣ ಸಂಸ್ಥೆ ಪ್ರಾಂಶುಪಾಲ ಪ್ರೊ.ಬಸವರಾಜ್‌ ಎಸ್‌.ಅನಾಮಿ ಮಾತನಾಡಿ, ವಿಶ್ವವಿದ್ಯಾನಿಲಯಗಳಲ್ಲಿ ಸಮಸ್ಯೆಗಳು ಸಾಮಾನ್ಯ. ಅವುಗಳನ್ನು ಸರಳವಾಗಿ ಮತ್ತು ಸಮರ್ಪಕವಾಗಿ ನಿಭಾಯಿಸಿ ಮೈಸೂರು ವಿವಿಯನ್ನು ಜಾಗತಿಕ ಮಟ್ಟದಲ್ಲಿ ಬೆಳೆಸಿ ಎಂದು ಹೇಳಿದರು.

ಆರು ತಿಂಗಳಲ್ಲಿ ಶೇ.40ರಷ್ಟು ಕೆಲಸ: ಅಭಿನಂದನೆ ಸ್ವೀಕರಿಸಿ ಮಾತನಾಡಿದ ಪ್ರೊ.ಜಿ.ಹೇಮಂತಕುಮಾರ್‌, ಕುಲಪತಿಯಾಗಿ ಆರು ತಿಂಗಳು ಕಳೆದಿದೆ. ಈ ಅವಧಿಯಲ್ಲಿ ಏನು ಮಾಡಬೇಕು ಅಂದುಕೊಂಡಿದ್ದೇನೋ ಅದರಲ್ಲಿ ಶೇ.40ರಷ್ಟು ಕೆಲಸ ಮಾಡಿದ್ದೇನೆ. ಮಾಡಬೇಕಾದ್ದು ಇನ್ನೂ ಬಹಳ ಇದೆ. ವಿಶ್ವವಿದ್ಯಾನಿಲಯ ಗೊತ್ತಿತ್ತು.

ಆದರೆ, ಕುಲಪತಿ ಏನು ಎಂಬುದು ಗೊತ್ತಿರಲಿಲ್ಲ. ಕುಲಪತಿ ಹುದ್ದೆ ಎಂದು ತಿಳಿದುಕೊಳ್ಳದೆ ಜವಾಬ್ದಾರಿ ಎಂದು ತಿಳಿದುಕೊಂಡಿದ್ದೇನೆ. ನ್ಯಾಕ್‌ ಪರೀಕ್ಷೆಯ ಜೊತೆಗೆ ವಿಶ್ವವಿದ್ಯಾನಿಲಯವನ್ನು ಉತ್ತಮ ಸ್ಥಿತಿಗೆ ಕೊಂಡೊಯ್ಯಲು ಶ್ರಮಿಸುತ್ತೇನೆ. ವಿದ್ಯಾರ್ಥಿಗಳು ಮತ್ತು ಬೋಧಕರಿಗೆ ಎಲ್ಲ ರೀತಿಯ ಸೌಲಭ್ಯ ಒದಗಿಸಲು ಕ್ರಮವಹಿಸುವ ಮೂಲಕ ಎಲ್ಲರ ಸಹಕಾರದಿಂದ ವಿಶ್ವವಿದ್ಯಾನಿಲಯವನ್ನು ಕಟ್ಟುವುದಾಗಿ ಹೇಳಿದರು.

ಟಾಪ್ ನ್ಯೂಸ್

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.