ನರೇಗಾ ನಿರ್ಲಕ್ಷಿಸುವ ಅಧಿಕಾರಿಗಳ ವಿರುದ್ಧ ಕ್ರಮ


Team Udayavani, Feb 12, 2020, 3:00 AM IST

arega-nir

ಮೈಸೂರು: ನರೇಗಾ ಯೋಜನೆ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರುವ ತಾಪಂ ಕಾರ್ಯನಿರ್ವಾಹಕ ಅಧಿಕಾರಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಜಿಪಂ ಕೆಡಿಪಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಜಿಪಂ ಅಧ್ಯಕ್ಷೆ ಬಿ.ಸಿ.ಪರಿಮಳಾ ಶ್ಯಾಂ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಕೆಡಿಪಿ ಸಭೆಯಲ್ಲಿ ನರೇಗಾ ಯೋಜನೆ ಸಂಬಂಧ ಅನುಪಾಲನಾ ವರದಿ ಮೇಲೆ ವಿಸ್ತೃತ ಚರ್ಚೆ ನಡೆಯಿತು.

2019-20ನೇ ಸಾಲಿಗೆ ನರೇಗಾ ಯೋಜನೆಯಡಿ ಮಾನವ ದಿನಗಳ ಸೃಜನೆಯಲ್ಲಿ ಜಿಲ್ಲೆಯ ಏಳು ತಾಲೂಕುಗಳ ಪೈಕಿ ತಿ.ನರಸೀಪುರ ತಾಲೂಕಿನಲ್ಲಿ 4,78,923 ಮಾನವ ದಿನಗಳ ಸೃಜನೆಯ ಗುರಿಗೆ 3,42,956 ಮಾನವದಿನಗಳ ಸೃಜನೆ ಮಾಡುವುದರೊಂದಿಗೆ ಶೇ.71.61 ಸಾಧನೆ ಮಾಡಿದ್ದರೆ, ಕೆ.ಆರ್‌.ನಗರ ತಾಲೂಕಿನಲ್ಲಿ 3,82,871 ಮಾನವ ದಿನಗಳ ಸೃಜನೆಯ ಗುರಿಗೆ

2,67,965 ಮಾನವ ದಿನಗಳ ಸೃಜನೆ ಮಾಡುವುದರೊಂದಿಗೆ ಶೇ.69.99 ಸಾಧನೆ ಮಾಡಿದ್ದರೆ, ಮೈಸೂರು ತಾಲೂಕಿನಲ್ಲಿ 2,65,502 ಮಾನವ ದಿನಗಳ ಸೃಜನೆಯ ಗುರಿಗೆ 1,78,785 ಮಾನವ ದಿನಗಳ ಸೃಜನೆ ಮಾಡುವುದರೊಂದಿಗೆ ಶೇ.67.34 ಸಾಧನೆ ಮಾಡಿದ್ದರೆ, ಹುಣಸೂರು ತಾಲೂಕಿನಲ್ಲಿ 4,59,402 ಮಾನವ ದಿನಗಳ ಸೃಜನೆಯ ಗುರಿಗೆ 2,96,281 ಮಾನವ ದಿನಗಳ ಸೃಜನೆ ಮಾಡುವುದರೊಂದಿಗೆ ಶೇ.64.49 ಸಾಧನೆ ಮಾಡಲಾಗಿದೆ.

ಕಳಪೆ ಸಾಧನೆ: ನಂಜನಗೂಡು ತಾಲೂಕಿನಲ್ಲಿ 7,45,736 ಮಾನವ ದಿನಗಳ ಸೃಜನೆಯ ಗುರಿಗೆ 3,03,577 ಮಾನವ ದಿನಗಳ ಸೃಜನೆ ಮಾಡುವುದರೊಂದಿಗೆ ಕೇವಲ ಶೇ.40.71 ಸಾಧನೆ ಮಾಡಿದ್ದರೆ, ಎಚ್‌.ಡಿ.ಕೋಟೆ ತಾಲೂಕಿನಲ್ಲಿ 7,46,564 ಮಾನವ ದಿನಗಳ ಸೃಜನೆಯ ಗುರಿಗೆ 3,14,932 ಮಾನವ ದಿನಗಳ ಸೃಜನೆ ಮಾಡುವುದರೊಂದಿಗೆ ಶೇ.42.18 ಸಾಧನೆ ಮಾಡಿದ್ದರೆ, ಪಿರಿಯಾಪಟ್ಟಣ ತಾಲೂಕಿನಲ್ಲಿ 4,71,002 ಮಾನವ ದಿನಗಳ ಸೃಜನೆಯ ಗುರಿಗೆ 2,08,576 ಮಾನವ ದಿನಗಳ ಸೃಜನೆ ಮಾಡುವುದರೊಂದಿಗೆ ಶೇ.44.28 ಸಾಧನೆ ಮಾಡಲಾಗಿದೆ.

ಜಿಲ್ಲೆಯ ಏಳು ತಾಲೂಕುಗಳಲ್ಲಿ ಒಟ್ಟಾರೆ 35,50,000 ಮಾನವ ದಿನಗಳ ಸೃಜನೆ ಗುರಿಗೆ 19,13,072 ಮಾನವ ದಿನಗಳ ಸೃಜನೆ ಮಾಡಿ, ಶೇ.53.89 ಸಾಧನೆ ಮಾಡಲಾಗಿದೆ. ನರೇಗಾ ಯೋಜನೆಯಡಿ ಕಾಮಗಾರಿಯನ್ನು ಕೈಗೆತ್ತಿಕೊಂಡು ಜನರಿಗೆ ಉದ್ಯೋಗ ಒದಗಿಸಿಕೊಡಲು ಯಾವುದೇ ಮಿತಿ ಇಲ್ಲದಿದ್ದರೂ ಅಧಿಕಾರಿಗಳು ಯೋಜನೆಯ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರಿರುವುದಕ್ಕೆ ಸ್ಥಾಯಿಸಮಿತಿ ಅಧ್ಯಕ್ಷರುಗಳಾದ ವೆಂಕಟಸ್ವಾಮಿ, ಅಚ್ಯುತಾನಂದ, ಸಾ.ರಾ.ನಂದೀಶ್‌ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ನೋಟಿಸ್‌ ಬಳಿಕ ಕ್ರಮ: ಈ ಬಗ್ಗೆ ಮಾತನಾಡಿದ ಜಿಪಂ ಸಿಇಒ ಕೆ.ಜ್ಯೋತಿ ಅವರು, ಮುಂದಿನವಾರ ತಾಲೂಕುವಾರು ನರೇಗಾ ಯೋಜನೆಯ ಪ್ರಗತಿಪರಿಶೀಲನೆ ಮಾಡಿ, ನಿರ್ಲಕ್ಷ್ಯತೋರುವ ಇಒ, ಪಿಡಿಒ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳಿಗೆ 3 ಬಾರಿ ನೋಟಿಸ್‌ ಕೊಟ್ಟ ಮೇಲೂ ಸರಿಪಡಿಸಿಕೊಳ್ಳದಿದ್ದರೆ ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕೊರೊನಾ ವೈರಸ್‌ ಪ್ರತಿಧ್ವನಿ: ಚೀನಾದಲ್ಲಿ ತಲ್ಲಣ ಮೂಡಿಸಿರುವ ಕೊರೊನಾ ವೈರಸ್‌ ಸೋಂಕು ಕೇರಳದವರಿಗೂ ತಗುಲಿದೆ ಎಂಬ ಆತಂಕದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಈ ಬಗ್ಗೆ ಹೆಚ್ಚಿನ ನಿಗಾವಹಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗೆ ತಿಳಿಸಲಾಯಿತು. ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಆರ್‌.ವೆಂಕಟೇಶ್‌, ಕೊರೊನಾ ವೈರಸ್‌ ಬಗ್ಗೆ ನಮ್ಮಲ್ಲಿ ಯಾವುದೇ ಆತಂಕವಿಲ್ಲ.

ಮೈಸೂರಿನ ಪ್ರವಾಸಿ ತಾಣಗಳು ಹಾಗೂ ಜನನಿಬಿಡ ಸ್ಥಳಗಳಲ್ಲಿ ಆರೋಗ್ಯ ಇಲಾಖೆಯ ತಂಡದ ಮೂಲಕ ಅರಿವು ಮೂಡಿಸಲಾಗುತ್ತಿದೆ. ಕೇರಳಕ್ಕೆ ಸಂಪರ್ಕ ಕಲ್ಪಿಸುವ ಎಚ್‌.ಡಿ.ಕೋಟೆ ತಾಲೂಕಿನ ಬಾವಲಿ ಗೇಟ್‌ನಲ್ಲಿ ತಪಾಸಣೆಗಾಗಿ ತಂಡವನ್ನು ನಿಯೋಜಿಸಲಾಗಿದೆ. ಜ್ವರ, ಕೆಮ್ಮು ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿರುವವರನ್ನು ತಪಾಸಣೆ ಮಾಡಲಾಗುತ್ತಿದೆ ಎಂದರು.

ಮೈಸೂರು ವಿವಿ ಜತೆಗೂ ಸಭೆ ನಡೆಸಿದ್ದು, ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಚೀನಾದ 200 ವಿದ್ಯಾರ್ಥಿಗಳ ಪೈಕಿ 18 ವಿದ್ಯಾರ್ಥಿಗಳು ಚೀನಾಗೆ ತೆರಳಿದ್ದು, ಸದ್ಯಕ್ಕೆ ಅವರನ್ನು ವಾಪಸ್‌ ಬರದಂತೆ ತಿಳಿಸಲಾಗಿದೆ ಎಂದು ವಿವರಿಸಿದರು. ಜಿಪಂ ಸಿಇಒ ಮಾತನಾಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪಶುಪಾಲನಾ ಇಲಾಖೆಯವರು ಜಂಟಿಯಾಗಿ ನಾಳೆಯೇ ಕೊರೊನಾ ವೈರಸ್‌ ಹೇಗೆ ಹರುಡುತ್ತದೆ ?

ಮುನ್ನೆಚ್ಚರಿಕೆ ಕ್ರಮ ಏನು ತೆಗೆದುಕೊಳ್ಳಬೇಕು? ಎಂಬ ಮಾಹಿತಿಯನ್ನು ಕೊಡಿ ಎಲ್ಲ ಪಂಚಾಯಿತಿಗೂ ಕಳಿಸೋಣ ಎಂದು ಸೂಚಿಸಿದರು. ಜಿಪಂ ಉಪಾಧ್ಯಕ್ಷೆ ಗೌರಮ್ಮ ಸೋಮಶೇಖರ್‌, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ವೆಂಕಟಸ್ವಾಮಿ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಅಚ್ಯುತಾನಂದ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಾ.ರಾ.ನಂದೀಶ್‌, ಜಿಪಂ ಸಿಇಒ ಕೆ.ಜ್ಯೋತಿ, ಮುಖ್ಯಯೋಜನಾಧಿಕಾರಿ ಪದ್ಮಶೇಖರ ಪಾಂಡೆ ಉಪಸ್ಥಿತರಿದ್ದರು.

ಮಾಂಸದ ಅಂಗಡಿಗಳ ಮೇಲೆ ದಾಳಿ ನಡೆಸಿ: ಮಾಂಸದ ಅಂಗಡಿಗಳಲ್ಲಿ ಕಡಿಯುವ ಪ್ರತಿ ಕುರಿ-ಕೋಳಿಯನ್ನು ಆರೋಗ್ಯಾಧಿಕಾರಿಗಳು ತಿನ್ನಲು ಯೋಗ್ಯವಾಗಿದೆಯೇ ಎಂದು ಪರಿಶೀಲಿಸಿ ಸೀಲ್‌ ಹಾಕಿ ದೃಢೀಕರಿಸಿದ ನಂತರ ಮಾರಾಟ ಮಾಡಲಾಗುತ್ತಿತ್ತು. ಆದರೆ, ಈಗ ಆ ಪದ್ಧತಿ ಕಾಟಾಚಾರಕ್ಕೆ ಎಂಬಂತಾಗಿಬಿಟ್ಟಿದೆ.

4-5 ಕುರಿಗಳಿಗೆ ಸೀಲ್‌ ಹಾಕಿಸಿಕೊಂಡು 20-25 ಕುರಿ ಕಡಿದು ಮಾರುತ್ತಾರೆ. ಜತೆಗೆ ರಸ್ತೆ ಬದಿಗಳಲ್ಲಿ ಎಲ್ಲೆಂದರಲ್ಲಿ ಮಾಂಸದ ಅಂಗಡಿಗಳು ತಲೆ ಎತ್ತುತ್ತಿವೆ. ಕೋಳಿ ಮಾಂಸದ ಅಂಗಡಿಗಳವರು ಗಲೀಜನ್ನೆಲ್ಲ ರಸ್ತೆ ಬದಿಯಲ್ಲೇ ಸುರಿಯುತ್ತಾರೆ. ರಸ್ತೆ ಬದಿಯಲ್ಲಿ ಹಣ್ಣು ಮಾರುವ ರೀತಿಯಲ್ಲಿ ಮಾಂಸ ಮಾರಲಾಗುತ್ತಿದೆ.

ಆರೋಗ್ಯದ ದೃಷ್ಟಿಯಿಂದ ಇದು ಒಳ್ಳೆಯದಲ್ಲ. ಕತ್ತರಿಸಿದ ಮಾಂಸವನ್ನು ಧೂಳು, ನೊಣಗಳಿಂದ ರಕ್ಷಿಸಲು ಗಾಜಿನ ಪೆಟ್ಟಿಗೆಯಲ್ಲಿಟ್ಟು ಮಾರಾಟ ಮಾಡುವಂತೆ ಸೂಚಿಸಿ, ಈ ಬಗ್ಗೆ ಗ್ರಾಪಂಗಳಿಗೆ ಪತ್ರ ಬರೆದು ತಿಳಿಸಬೇಕಲ್ಲದೆ, ಪಶುಪಾಲನಾ ಇಲಾಖೆಯವರು ದಾಳಿ ಮಾಡಿ ತಪಾಸಣೆ ಮಾಡಿ ಎಂದು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಾ.ರಾ.ಮಹೇಶ್‌ ಆಗ್ರಹಿಸಿದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.