ವಾಹನ ಸಂಚಾರ ತಡೆಗೆ ಕ್ರಮ
Team Udayavani, Apr 15, 2020, 5:36 PM IST
ಎಚ್.ಡಿ.ಕೋಟೆ : ತಾಲೂಕಿನ ಕೇರಳ ಗಡಿಭಾಗದ ಬಾವಲಿ ಚೆಕ್ಪೋಸ್ಟ್ನಿಂದ ಅಧಿಕ ಪ್ರಮಾಣದ ಕೇರಳ ವಾಹನಗಳು ಸಂಚರಿಸುತ್ತಿವೆ. ಇವುಗಳ ತಡೆಗೆ ಪೊಲೀಸ್ ಇಲಾಖೆ ಮತ್ತು ಅಧಿಕಾರಿಗಳ ಜತೆ ಚರ್ಚಿಸಿ, ಸರ್ಕಾರದೊಡನೆ ಸಮಾ ಲೋಚನಾ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಎಸ್. ಟಿ.ಸೋಮಶೇಖರ್ ತಿಳಿಸಿದರು.
ತಾಲೂಕಿನ ಗಡಿಭಾಗಕ್ಕೆ ಭೇಟಿ ನೀಡಿ ಪರಿಶೀಲಿಸಿ, ಬಾವಲಿ ಚೆಕ್ಪೋಸ್ಟ್ ಮಾರ್ಗವಾಗಿ ಅನಗತ್ಯವಾಗಿ ತಾಲೂಕಿನಗೆ ಆಗಮಿಸುತ್ತಿದ್ದ ಕೇರಳ ವಾಹನಗಳ ಸಮಗ್ರ ಮಾಹಿತಿ ಪಡೆದುಕೊಂಡರು. ಈ ವೇಳೆ ಮಾತನಾಡಿ, ಮೈಸೂರು ಜಿಲ್ಲೆ ಕೋವಿಡ್ 19 ಸೋಂಕಿತರ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ನಿಯಂತ್ರಣಕ್ಕೆ ಸೋಂಕಿತ ಜಿಲ್ಲೆಗಳಿಂದ ಆಗಮಿಸುವ ನಿರ್ಗಮಿಸುವ ಜನರ ಕಡೆ ನಿಗಾವಹಿಸಬೇಕಿದೆ ಎಂದರು.
ಈ ವೇಳೆ ಶಾಸಕ ಅನಿಲ್ ಚಿಕ್ಕಮಾದು, ಮೈಸೂರು ಡೀಸಿ ಅಭಿರಾಮ್ ಜಿ ಶಂಕರ್, ಪೊಲೀಸ್ ವರಿಷ್ಠಾಧಿಕಾರಿ ರಿಶ್ವಂತ್, ಹುಣಸೂರು ಉಪವಿಭಾಗಾಧಿಕಾರಿ ವೀಣಾ, ಜಿಪಂ ಸದಸ್ಯೆ ಪರಿಮಳ ಶ್ಯಾಂ ಸುಂದರ್, ತಾಪಂ ಅಧ್ಯಕ್ಷೆ ಮಂಜುಳ, ತಹಶೀಲ್ದಾರ್ ಆರ್.ಮಂಜುನಾಥ್, ತಾಪಂ ಇಒ ರಾಮಲಿಂಗಯ್ಯ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೋಟೆ ಶಿವಣ್ಣ, ಡಿವೈಎಸ್ಪಿ ಸುಂದರ್ರಾಜ್, ಡಾ.ರವಿಕುಮಾರ್, ಪುಟ್ಟಸ್ವಾಮಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ