ಸಹಕಾರ ಸಂಘಗಳು ತಪ್ಪು ತಿದ್ದಿಕೊಳ್ಳದಿದ್ದರೆ ಕ್ರಮ


Team Udayavani, Feb 27, 2020, 3:00 AM IST

sahakara

ಕೆ.ಆರ್‌.ನಗರ: ತಾಲೂಕಿನ ವ್ಯಾಪ್ತಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಅವುಗಳ ಉಸ್ತುವಾರಿ ವಹಿಸುವ ಜಿಲ್ಲಾ ಬ್ಯಾಂಕಿನ ಪ್ರತಿನಿಧಿಗಳು ಹೊಸಬರಿಗೆ ಸಾಲ ನೀಡುವತ್ತ ಗಮನ ಹರಿಸಬೇಕು ಎಂದು ಶಾಸಕ ಸಾ.ರಾ.ಮಹೇಶ್‌ ಹೇಳಿದರು.

ಪಟ್ಟಣದ ನವನಗರ ಅರ್ಬನ್‌ ಬ್ಯಾಂಕಿನ ಸಭಾಂಗಣದಲ್ಲಿ ನಡೆದ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಬ್ಯಾಂಕಿನ ಪ್ರತಿನಿಧಿಗಳು ಮತ್ತು ಸಹಕಾರ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ತಾಲೂಕಿನ ಬ್ಯಾಡರಹಳ್ಳಿ ಸಹಕಾರ ಸಂಘದಲ್ಲಿ ಅವ್ಯವಹಾರ ನಡೆದು 6 ವರ್ಷ ಕಳೆದರೂ ತನಿಖೆ ಕೈಗೊಂಡಿಲ್ಲ ಎಂದು ಸಹಾಯಕ ಉಪನಿಬಂಧಕ ಗೋಪಾಲಯ್ಯ ಅವರನ್ನು ತರಾಟೆಗೆ ತೆಗೆದುಕೊಂಡ ಶಾಸಕರು, ಕೂಡಲೇ ವರದಿ ನೀಡಬೇಕು ಎಂದು ಸೂಚಿಸಿದರು.

ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಸಾಲ ನೀಡಲು ಎಂಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರು ಮತ್ತು ನಿರ್ದೇಶಕರು ಸ್ವಂತ ಸಾಲ ಮಾಡಿ ಹಣ ನೀಡುವುದಿಲ್ಲ. ಸರ್ಕಾರ ಮತ್ತು ಅಪೆಕ್ಸ್‌ ಬ್ಯಾಂಕುಗಳು ನೀಡಿದ ಹಣವನ್ನು ಅವರು ರೈತರಿಗೆ ನೀಡುತ್ತಾರೆ. ಸಂಘಗಳಲ್ಲಿ ರಾಜಕೀಯ ಮಾಡಿದರೆ ಅಮಾನತುಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

ಕಳೆದ 11 ವರ್ಷಗಳಿಂದ ನಾನು ಸಹಕಾರ ಇಲಾಖೆಗೆ ಸಂಬಂಧಿಸಿದಂತೆ ಯಾವುದೇ ಅಧಿಕಾರಿಗಳು ಮತ್ತು ಸಹಕಾರ ಸಂಘದವರ ಸಭೆ ಕರೆದಿರಲಿಲ್ಲ. ಆದರೆ, ಇತ್ತೀಚೆಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸಭೆ ಕರೆಯಲಾಗಿದ್ದು, ಮುಂದಿನ ದಿನಗಳಲ್ಲಿ ತಪ್ಪುಗಳು ಪುನರಾವರ್ತನೆಯಾದರೆ ಸಹಿಸುವುದಿಲ್ಲ ಎಂದರು.

ತಿಪ್ಪೂರು ಸಹಕಾರ ಸಂಘದಲ್ಲೂ ಗೊಬ್ಬರ ಮಾರಾಟದಲ್ಲಿ ಅಕ್ರಮ ನಡೆದಿರುವುದು ವರದಿಯಾಗಿದ್ದು, ಅದನ್ನು ಸರಿಪಡಿಸಬೇಕು ಎಂದು ತಾಕೀತು ಮಾಡಿದರು.
ನವನಗರ ಅರ್ಬನ್‌ ಬ್ಯಾಂಕಿನ ಅಧ್ಯಕ್ಷ ಕೆ.ಎನ್‌.ಬಸಂತ್‌, ನಿರ್ದೇಶಕರಾದ ಎಂ.ಕೆ.ಮಹದೇವ್‌, ಕೇಶವ, ಪಿಕಾರ್ಡ ಬ್ಯಾಂಕಿನ ನಿರ್ದೇಶಕ ಎಂ.ಎಸ್‌.ಹರಿಚಿದಂಬರ,

ಸಹಕಾರ ಅಭಿವೃದ್ಧಿ ಅಧಿಕಾರಿ ಎನ್‌.ಮಂಜುನಾಥ್‌, ಎಂಸಿಡಿಸಿಸಿ ಬ್ಯಾಂಕಿನ ಅಭಿವೃದ್ಧಿ ಅಧಿಕಾರಿಗಳಾದ ಪ್ರಕಾಶ್‌, ದಿನೇಶ್‌, ಸುಧೀರ್‌, ಮುಖಂಡರಾದ ಕೃಷ್ಣೇಗೌಡ, ನಾರಾಯಣಗೌಡ, ಬಾಬು, ಆಪ್ತ ಸಹಾಯಕ ಹೆಚ್‌.ಆರ್‌.ಅರುಣ್‌ಕುಮಾರ್‌ ಇತರರಿದ್ದರು.

ಅಧ್ಯಕ್ಷರು, ನಿರ್ದೇಶಕರ ಆಣತಿಯಂತೆ ಕೆಲಸ: ಕೆ.ಆರ್‌.ನಗರ ತಾಲೂಕಿನ 23 ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ರೈತರ ಒಟ್ಟು 70 ಕೋಟಿ ರೂ. ಸಾಲಮನ್ನಾ ಆಗಿದ್ದು, ಮತ್ತೆ 10 ಕೋಟಿ ಮನ್ನಾ ಆಗಲಿದೆ. ಕೆಲವು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಎಂಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರು ಮತ್ತು ನಿರ್ದೇಶಕರ ಆಣತಿಯಂತೆ ನಡೆದುಕೊಳ್ಳುತ್ತಿರುವ ಬಗ್ಗೆ ದೂರುಗಳಿದ್ದು, ಆ ವರ್ತನೆಯನ್ನು ತಿದ್ದಿಕೊಳ್ಳಬೇಕು ಎಂದು ಶಾಸಕ ಸಾ.ರಾ.ಮಹೇಶ್‌ ತಿಳಿಸಿದರು.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.