ಕರ್ತವ್ಯದ ಅವಧಿಯಲ್ಲಿ ಖಾಸಗಿ ಸೇವೆ ಸಲ್ಲಿಸಿದರೆ ಕ್ರಮ: ಸುಧಾಕರ
ಎಲ್ಲ ವೈದ್ಯರಿಗೂ ಪ್ರತಿನಿತ್ಯ ಮೂರು ಬಾರಿ ಬಯೋಮೆಟ್ರಿಕ್ ಹಾಜರಿ ಕಡ್ಡಾಯ
Team Udayavani, Oct 28, 2022, 8:20 PM IST
ಮೈಸೂರು: ರಾಜ್ಯದ ಸರಕಾರಿ ವೈದ್ಯಕೀಯ ಕಾಲೇಜುಗಳ ವೈದ್ಯರು ತಮ್ಮ ಕರ್ತವ್ಯದ ಅವಧಿಯಲ್ಲಿ ಖಾಸಗಿ ಆಸ್ಪತ್ರೆ ಅಥವಾ ಕ್ಲಿನಿಕ್ಗಳಲ್ಲಿ ಕಾರ್ಯನಿರತರಾಗಿದ್ದರೆ, ಅಂಥವರ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ| ಕೆ. ಸುಧಾಕರ್ ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುರುವಾರ ಮೈಸೂರು ವಿಭಾಗೀಯ ಮಟ್ಟದ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಒಳಪಟ್ಟ ಅಧಿಕಾರಿಗಳ ಸಭೆ ನಡೆಸಿದ್ದು, ಈ ವೇಳೆ ಕೆಲವು ವೈದ್ಯರು ಕರ್ತವ್ಯದ ಅವಧಿಯಲ್ಲಿ ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಇದಕ್ಕೆ ಕಡಿವಾಣ ಹಾಕಲು ಸರಕಾರ ನಿರ್ಧರಿಸಿದ್ದು, ಎಲ್ಲ ವೈದ್ಯರೂ ಪ್ರತಿದಿನ ಮೂರು ಬಾರಿ ಬಯೋಮೆಟ್ರಿಕ್ ಹಾಜರಿ ಹಾಕುವಂತೆ ಕಡ್ಡಾಯಗೊಳಿಸಲಾಗುವುದು.
ವೈದ್ಯರು ನಿಯಮಗಳನ್ನು ಉಲ್ಲಂಘಿಸದಂತೆ ಜಿಯೊ ಟ್ಯಾಗ್ ಅಳವಡಿಸುವ ಹಾಗೂ ಕಚೇರಿ ಅವಧಿ ಮುಗಿದ ಬಳಿಕ ಕಾಲೇಜಿನಲ್ಲಿಯೇ ಖಾಸಗಿಯಾಗಿ ಚಿಕಿತ್ಸೆ ನೀಡುವ ಅವಕಾಶವನ್ನು ವೈದ್ಯರಿಗೆ ನೀಡುವ ಚಿಂತನೆ ಸರಕಾರದ ಮುಂದಿದೆ ಎಂದು ತಿಳಿಸಿದರು.
ನ.8ರೊಳಗೆ ರಾಜ್ಯದ ಪಾಲಿಕೆ, ನಗರಸಭೆ ವ್ಯಾಪ್ತಿಯ ಕೊಳಗೇರಿಯಲ್ಲಿ 438 ನಮ್ಮ ಕ್ಲಿನಿಕ್ ಆರಂಭಿಸಲು ಕ್ರಮ ಕೈಗೊಳ್ಳಲಾಗಿದ್ದು, ಮುಂದಿನ ವಾರದಲ್ಲಿಯೇ ಚಾಲನೆ ನೀಡಲಾಗುತ್ತಿದೆ. ಹಾಗೆಯೇ ಮಹಿಳೆಯರಿಗೆ ಗುಣಮಟ್ಟದ ಚಿಕಿತ್ಸೆ ನೀಡುವ ಸಲುವಾಗಿ 128 ಮಹಿಳಾ ಸ್ವಾಸ್ಥ್ಯ ಕ್ಲಿನಿಕ್ಗಳನ್ನು ಆರಂಭಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ