ನಟ ಲೋಕೇಶ್‌ ನೆನಪು ಕಾರ್ಯಕ್ರಮ ನಾಳೆ


Team Udayavani, May 18, 2019, 3:00 AM IST

nata-loki

ಮೈಸೂರು: ನಟ ದಿ.ಲೋಕೇಶ್‌ ಅವರ ಜನ್ಮದಿನವನ್ನು ಲೋಕೇಶ್‌ ನೆನಪು ಹೆಸರಿನಲ್ಲಿ ಕಲಾರಂಗಕ್ಕೆ ಸೇವೆ ಸಲ್ಲಿಸಿದ ಸಾಧಕರನ್ನು ಗೌರವಿಸುವ ಮೂಲಕ ಆಚರಿಸಲಾಗುತ್ತಿದೆ ಎಂದು ನಟಿ ಗಿರಿಜಾ ಲೋಕೇಶ್‌ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 19 ಲೋಕೇಶ್‌ ಅವರ 73ನೇ ಜನ್ಮದಿನ. ಈ ಬಾರಿ ಲೋಕೇಶ್‌ ನೆನಪು ಕಾರ್ಯಕ್ರಮವನ್ನು ಮೈಸೂರಿನ ನಟನ ರಂಗಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ಕನ್ನಡದ ಮೊದಲ ವಾಕಿcತ್ರದ ನಾಯಕನಟ, ಕನ್ನಡ ರಂಗಭೂಮಿಯ ಅಧ್ವರ್ಯುಗಳಲ್ಲಿ ಒಬ್ಬರಾದ ಸುಬ್ಬಯ್ಯನಾಯ್ಡು ಅವರ ನಾಟಕ ಸಂಸ್ಥೆ ಶ್ರೀ ಸಾಹಿತ್ಯ ಸಾಮ್ರಾಜ್ಯ ನಾಟಕ ಮಂಡಳಿ. ತಂದೆಯಂತೆಯೇ ಅವರ ಮಗ ಲೋಕೇಶ್‌ ಕೂಡ ರಂಗಭೂಮಿ ಮತ್ತು ಚಲನಚಿತ್ರ ರಂಗಗಳಲ್ಲಿ ನಟ, ನಿರ್ದೇಶಕ, ನಿರ್ಮಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

ಸುಬ್ಬಯ್ಯನಾಯ್ಡು ಅವರ ಇಡೀ ಕುಟುಂಬ ಕಲಾರಂಗದಲ್ಲಿ ಸೇವೆ ಸಲ್ಲಿಸುತ್ತಿದೆ. 2004ರಲ್ಲಿ ಲೋಕೇಶ್‌ ನಿಧನರಾದ ನಂತರ ಪ್ರತಿ ವರ್ಷ ಬೇರೆ ಬೇರೆ ನಗರಗಳಲ್ಲಿ ಲೋಕೇಶ್‌ ನೆನಪು ಕಾರ್ಯಕ್ರಮ ಹಮ್ಮಿಕೊಂಡು ವೃತ್ತಿರಂಗಭೂಮಿಯಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ಸುಬ್ಬಯ್ಯನಾಯ್ಡು ಹೆಸರಲ್ಲಿ, ಅವರ ತಾರಾಪತ್ನಿ ಲಕ್ಷ್ಮೀಬಾಯಿ ಸೇರಿನಲ್ಲಿ ಹಿರಿಯ ಕಲಾವಿದರೊಬ್ಬರಿಗೆ ಹಾಗೂ ಲೋಕೇಶ್‌ ಹೆಸರಲ್ಲಿ ರಂಗಭೂಮಿ ಮತ್ತು ಚಲನಚಿತ್ರ ರಂಗದ ಸಾಧಕರೊಬ್ಬರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಾ ಬರಲಾಗುತ್ತಿದೆ.

ಹಿರಿಯ ರಂಗತಜ್ಞ, ವೃತ್ತಿ ರಂಗಭೂಮಿಯ ಚಿಂದೋಡಿ ಬಂಗಾರೇಶ್‌ ಅವರಿಗೆ ಸುಬ್ಬಯ್ಯನಾಯ್ಡು ಪ್ರಶಸ್ತಿ, ಹಿರಿಯ ರಂಗಭೂಮಿ ಮತ್ತು ಚಲನಚಿತ್ರ ಕಲಾವಿದೆ ಶೈಲಶ್ರೀ ಅವರಿಗೆ ಲಕ್ಷ್ಮೀಬಾಯಿ ಪ್ರಶಸ್ತಿ ಹಾಗೂ ರಂಗಕರ್ಮಿ, ಚಿತ್ರನಟ ರಮೇಶ್‌ ಭಟ್‌ ಅವರಿಗೆ ಲೋಕೇಶ್‌ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.

ಈ ಬಾರಿ 16ನೇ ವರ್ಷದ ಲೋಕೇಶ್‌ ನೆನಪು ಕಾರ್ಯಕ್ರಮ ಮೈಸೂರಿನ ನಟನ ರಂಗಶಾಲೆಯಲ್ಲಿ ಮೇ 19ರಂದು ಸಂಜೆ 5ಗಂಟೆಗೆ ನಡೆಯಲಿದ್ದು, ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷ ಶ್ರೀನಿವಾಸ್‌ ಜಿ.ಕಪ್ಪಣ್ಣ ಸಮಾರಂಭದ ಅಧ್ಯಕ್ಷತೆವಹಿಸಲಿದ್ದು, ಮೈಸೂರಿನ ಸುರುಚಿ ರಂಗಮನೆಯ ವಿಜಯ ಸಿಂಧುವಳ್ಳಿ ಮತ್ತು ನಟನ ರಂಗಶಾಲೆಯ ಮಂಡ್ಯ ರಮೇಶ್‌ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಮೈಸೂರಿನ ಕಲಾವಿದರಾದ ರಾಜಶೇಖರ ಕದಂಬ ಮತ್ತು ಶಂಕರ್‌ ಅಶ್ವಥ್‌ ಅವರನ್ನು ಇದೇ ಸಮಾರಂಭದಲ್ಲಿ ಗೌರವಿಸಲಾಗುವುದು. ಕಾರ್ಯಕ್ರಮದ ನಂತರ ಸಂಜೆ 7 ಗಂಟೆಗೆ ಮಂಡ್ಯ ರಮೇಶ್‌ ನಿರ್ದೇಶನದ ನಟನ ರಂಗಶಾಲೆ ತಂಡ ಅಭಿನಯಿಸುವ ಶೂದ್ರಕನ ಮೃತ್ಛಕಟಿಕ ನಾಟಕ ಪ್ರದರ್ಶನವಿದೆ ಎಂದು ತಿಳಿಸಿದರು.

ಕಲಾವಿದರಾದ ಶಂಕರ್‌ ಅಶ್ವಥ್‌, ರಾಜಶೇಖರ ಕದಂಬ, ನಟನ ರಂಗಸಂಸ್ಥೆಯ ಪ್ರಭಾಕರ್‌ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.