ಶಕ್ತಿಧಾಮ ಸಂಬಂಧ ಯಾವುದೇ ಸಹಾಯಕ್ಕೂ ಸಿದ್ಧ: ನಟ ವಿಶಾಲ್
Team Udayavani, Dec 15, 2022, 7:55 PM IST
ಮೈಸೂರು: ನಾನು ಎಂದೆಂದಿಗೂ ಡಾ.ರಾಜ್ಕುಮಾರ್ ಅವರ ಕುಟುಂಬಕ್ಕೆ ಜೊತೆಯಾಗಿ ನಿಲ್ಲುತ್ತೇನೆ. ಶಕ್ತಿಧಾಮಕ್ಕೆ ಸಂಬಂಧಿಸಿದಂತೆ ಅವರು ಯಾವ ಸಹಾಯ ಕೇಳಿದರೂ ಮಾಡಲು ನಾನು ಸಿದ್ಧ ಎಂದು ತಮಿಳು ನಟ ವಿಶಾಲ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಕ್ತಿಧಾಮದ ಮಕ್ಕಳಿಗೆ ಉಪಯೋಗವಾಗಲೆಂದು ಸಹಾಯ ಮಾಡಲು ಒಪ್ಪಿಕೊಂಡಿದ್ದೆ. ಈಗಲೂ ಮಕ್ಕಳಿಗೆ ಶಿಕ್ಷಣ ನೀಡಲು, ಪುನೀತ್ ರಾಜ್ಕು ಮಾರ್ ಅವರ ಆಶಯಗಳನ್ನು ನೆರವೇರಿಸಲು ನಾನು ಬದ್ಧನಾಗಿದ್ದೇನೆ. ರಾಜ್ಕುಮಾರ್ ಅವರ ಕುಟುಂಬದವರು ಯಾವ ಸಮಯದಲ್ಲಿ ಯಾವ ಸಹಕಾರ ಕೇಳಿದರೂ ನೀಡಲು ನಾನು ಸಿದ್ಧ ಎಂದರು.
ಇತ್ತೀಚೆಗಷ್ಟೇ ನಟ ಪ್ರಕಾಶ್ ರಾಜ್ ಅವರು ಅಪ್ಪು ಅವರ ಹೆಸರಿನಲ್ಲಿ ಆಂಬ್ಯುಲೆನ್ಸ್ ದಾನ ನೀಡಿದ್ದರ ಸಂಬಂಧ ಮಾತನಾಡಿದ ಅವರು, ಪುನೀತ್ ಅವರ ಹೆಸರಿನಲ್ಲಿ ಪ್ರಕಾಶ್ ರಾಜ್ ಅವರು ಉತ್ತಮ ಕೆಲಸ ಮಾಡಿದ್ದಾರೆ. ಆ ಸಮಯದಲ್ಲಿ ಅವರು ನನಗೂ ಕರೆ ಮಾಡಿದ್ದರು. ಆಂಬ್ಯುಲೆನ್ಸ್ ಸೇವೆಗೆ ನನ್ನ ಕೈಲಾದ ಸಹಾಯವನ್ನು ನಾನು ಮಾಡುತ್ತೇನೆ ಎಂದು ಅವರಿಗೆ ತಿಳಿಸಿದ್ದೇನೆ. ನಟರಾಗಿ ನಾವು ಸಮಾಜಕ್ಕೆ ಒಳ್ಳೆಯ ಕೆಲಸಗಳನ್ನು ಮಾಡುತ್ತಿರಬೇಕು. ಅದು ನಮ್ಮ ಆದ್ಯ ಕರ್ತವ್ಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ