![court](https://www.udayavani.com/wp-content/uploads/2024/07/court-7-415x231.jpg)
ರಾಮಕೃಷ್ಣ ತತ್ವಾದರ್ಶ ಅಳವಡಿಸಿಕೊಳ್ಳಿ
Team Udayavani, Aug 18, 2018, 12:22 PM IST
![m6-ramakrishna.jpg](https://www.udayavani.com/wp-content/uploads/2018/08/18/m6-ramakrishna.jpg)
ಮೈಸೂರು: ವಿದ್ಯಾರ್ಥಿಗಳು ಹಾಗೂ ಯುವಜನರಿಗೆ ಹಲವು ಮಹನೀಯರುಗಳು ತತ್ವ, ಆದರ್ಶವನ್ನು ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡಬೇಕಿದೆ ಎಂದು ಸಮಾಜ ಸೇವಕ ಕೆ.ರಘುರಾಂ ಹೇಳಿದರು.
ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಹಾಗೂ ರಾಮಕೃಷ್ಣ ನಗರ ನಿವಾಸಿಗಳ ಬಳಗದಿಂದ ರಾಮಕೃಷ್ಣ ವೃತ್ತ(ಆಂದೋಲನ ವೃತ್ತ)ದಲ್ಲಿ ಆಯೋಜಿಸಿದ್ದ ಶ್ರೀ ರಾಮಕೃಷ್ಣ ಪರಮಹಂಸರ 132ನೇ ಪುಣ್ಯಸ್ಮರಣೆ ಕಾರ್ಯಕ್ರಮದ ಅಂಗವಾಗಿ ರಾಮಕೃಷ್ಣ ಪರಮಹಂಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಸಾಂಸ್ಕೃತಿಕ ರಾಜಧಾನಿ ಮೈಸೂರು ಪಾರಂಪರಿಕ ಇತಿಹಾಸ ಹೊಂದಿದ್ದು ಸ್ವತ್ಛತೆಯ ಪರಿಸರವನ್ನು ಹೊಂದಿದೆ.
ನಗರದಲ್ಲಿ ಶ್ರೀ ರಾಮಕೃಷ್ಣ ಪರಮಹಂಸರ ಪ್ರತಿಮೆ ಸ್ಥಾಪಿಸಬೇಕೆಂಬ ಬೇಡಿಕೆ ಇತ್ತು. ಅದರಂತೆ ಆರು ತಿಂಗಳುಗಳ ಹಿಂದೆ ರಾಮಕೃಷ್ಣ ಪರಮಹಂಸರ ಅದ್ಭುತ ಪ್ರತಿಮೆಯನ್ನು ಸ್ಥಾಪಿಸಿರುವುದು ಸಂತಸದ ಸಂಗತಿಯಾಗಿದೆ. ರಾಮಕೃಷ್ಣ ಮಠದ ನೇತೃತ್ವದಲ್ಲಿ ಪ್ರತಿಮೆ ಸ್ಥಾಪಿಸಿ, ಸಂಗೀತ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಲು ಯೋಜನೆ ರೂಪಿಸಲಾಗಿದೆ ಎಂದರು.
ಅಲ್ಲದೆ ನಗರದ ವಿವೇಕಾನಂದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆ, ರಾಮಕೃಷ್ಣ ನಗರ ವೃತ್ತದಲ್ಲಿ ಶ್ರೀ ರಾಮಕೃಷ್ಣ ಪರಮಹಂಸರ ಪ್ರತಿಮೆ ಸ್ಥಾಪಿಸಲಾಗಿದೆ. ಅದೇ ರೀತಿ ಶಾರದಾದೇವಿ ನಗರದ ವೃತ್ತದಲ್ಲಿ ಶ್ರೀ ಶಾರದಾದೇವಿ ಪ್ರತಿಮೆ ಸ್ಥಾಪಿಸಿ ಜನರಲ್ಲಿ ವಿದ್ಯಾರ್ಥಿಗಳಲ್ಲಿ ಯುವ ಪೀಳಿಗೆಯಲ್ಲಿ ಅನೇಕ ಮಹನೀಯರುಗಳ ತತ್ವ, ಆದರ್ಶವನ್ನು ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಖೀಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿ ನಂ. ಶ್ರೀಕಂಠಕುಮಾರ್, ನಗರಪಾಲಿಕೆ ಸದಸ್ಯ ಎಂ.ಕೆ.ಶಂಕರ್, ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಅಧ್ಯಕ್ಷ ಶ್ರೀಧರ್ಮೂರ್ತಿ, ಉಪಾಧ್ಯಕ್ಷ ಮುಳ್ಳೂರು ಗುರುಪ್ರಸಾದ್, ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ಸಂಘಟನಾ ಕಾರ್ಯದರ್ಶಿ ಅಜಯ್ ಶಾಸಿ, ಜಯಸಿಂಹ, ರಂಗನಾಥ್, ಸ್ಥಳೀಯ ನಿವಾಸಿಗಳಾದ ಫಣೀಶ್, ಮಂಜುನಾಥ್, ರವೀಂದ್ರ , ರಂಗನಾಥ್ ಕಶ್ಯಪ್ ಮತ್ತಿತರರಿದ್ದರು.
ಟಾಪ್ ನ್ಯೂಸ್
![court](https://www.udayavani.com/wp-content/uploads/2024/07/court-7-415x231.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ](https://www.udayavani.com/wp-content/uploads/2024/07/Suraj-Revanna-150x90.jpg)
Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ
![Untitled-1](https://www.udayavani.com/wp-content/uploads/2024/07/Untitled-1-21-150x90.jpg)
BJP-JDS 19 ಸಂಸದರಿದ್ರೂ ಬಜೆಟ್ನಲ್ಲಿ ರಾಜ್ಯಕ್ಕೆ ನಾಮ: ಎಂ.ಲಕ್ಷ್ಮಣ್
![Army Air Defence: ಸಿಯಾಚಿನ್ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ](https://www.udayavani.com/wp-content/uploads/2024/07/Mysore1-150x84.jpg)
Army Air Defence: ಸಿಯಾಚಿನ್ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ
![Mysore: ಕೆಆರ್ ಎಸ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ](https://www.udayavani.com/wp-content/uploads/2024/07/DKS1-150x84.jpg)
Mysore: ಕೆಆರ್ ಎಸ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ
![Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್ ಜಖಂ](https://www.udayavani.com/wp-content/uploads/2024/07/mane-10-150x80.jpg)
Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್ ಜಖಂ
MUST WATCH
ಹೊಸ ಸೇರ್ಪಡೆ
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
![Kohli IPL 2024](https://www.udayavani.com/wp-content/uploads/2024/07/Kohli-IPL-2024-150x103.jpg)
Champions Trophy; ಕೊಹ್ಲಿ ಪಾಕ್ನಲ್ಲಿ ಆಡಲಿ: ಯೂನಿಸ್ ಖಾನ್
![1-tatoo](https://www.udayavani.com/wp-content/uploads/2024/07/1-tatoo-150x84.jpg)
Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!
![1-wewqewq](https://www.udayavani.com/wp-content/uploads/2024/07/1-wewqewq-2-150x98.jpg)
Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.