ಇಂದು ಅರಮನೆಗೆ ಗಜಪಡೆ ಪ್ರವೇಶ


Team Udayavani, Sep 5, 2018, 11:28 AM IST

m3-indu.jpg

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರೆಯ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮೆರವಣಿಗೆ. ಇದರಲ್ಲಿ ಭಾಗವಹಿಸಲಿರುವ ಗಜಪಡೆ ಈಗಾಗಲೇ ಕಾಡಿನಿಂದ ನಾಡಿಗೆ ಆಗಮಿಸಿದ್ದು, ಸಂಪ್ರದಾಯದಂತೆ ಬುಧವಾರ ಅರಮನೆ ಪ್ರವೇಶಿಸಲಿವೆ. 

ನಾಡಹಬ್ಬ ದಸರಾ ಮಹೋತ್ಸವದ ರಂಗು ಹೆಚ್ಚುವುದೇ ಪ್ರತಿವರ್ಷ ನಗರಕ್ಕಾಗಮಿಸುವ ಗಜಪಡೆಯಿಂದ. ಇದೀಗ ದಸರೆಯಲ್ಲಿ ಪಾಲ್ಗೊಳ್ಳಲು ಕಾಡಿನಿಂದ ನಾಡಿಗೆ ಗಜಪಡೆ ಬಂದಿರುವ ದಸರಾ ಆನೆಗಳು ಅರಮನೆ ಪ್ರವೇಶಿಸಲು ಸಜ್ಜಾಗಿವೆ. ಬುಧವಾರ ಅರಮನೆ ಜಯಮಾರ್ತಾಂಡ ದ್ವಾರದ ಮೂಲಕ ಅರ್ಜುನ ನೇತೃತ್ವದ ಗಜಪಡೆ ವಿಶ್ವವಿಖ್ಯಾತ ಅರಮನೆ ಪ್ರವೇಶಿಸಲಿವೆ. 

ಸಂಜೆ 4.30ಕ್ಕೆ ನಡೆಯುವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್‌, ಶಾಸಕ ಎಸ್‌.ಎ.ರಾಮದಾಸ್‌ ಸೇರಿದಂತೆ ಇನ್ನಿತರರು ಮೊದಲ ತಂಡದಲ್ಲಿ ಬಂದಿರುವ ದಸರಾ ಆನೆಗಳಿಗೆ ಸಾಂಪ್ರದಾಯಕ ಸ್ವಾಗತ ನೀಡಲಿದ್ದಾರೆ. ಇದರೊಂದಿಗೆ ನಗರದಲ್ಲಿ ದಸರಾ ಹಬ್ಬದ ಸಂಭ್ರಮಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. 

ವಿಶ್ರಾಂತಿ ಪಡೆದವು: ಹುಣಸೂರಿನ ವೀರನಹೊಸಳ್ಳಿಯಿಂದ ಮೈಸೂರಿಗೆ ಬಂದಿರುವ ಗಜಪಡೆ ಅಶೋಕಪುರಂನ ಅರಣ್ಯ ಭವನದಲ್ಲಿ ರಿಲ್ಯಾಕ್ಸ್‌ ಮೂಡ್‌ನ‌ಲ್ಲಿ ಕಾಲ ಕಳೆದವು. ಗಜಪಡೆ ಸಾರಥಿ ಅರ್ಜುನ ಸ್ನಾನ ಮಾಡಿಸಿಕೊಂಡು ಸಂಭ್ರಮಿಸಿದರೆ, ಉಳಿದ ಆನೆಗಳು ಆಹಾರ ಸೇವಿಸುತ್ತಾ ವಿಶ್ರಾಂತಿ ಪಡೆದವು. 

ಅರಣ್ಯ ಭವನದಲ್ಲಿರುವ ಹಸಿರು ವಾತವರಣದಲ್ಲಿರುವ ಆನೆಗಳಾದ ಅರ್ಜುನ, ಚೈತ್ರ, ವಿಕ್ರಮ, ಧನಂಜಯ, ವರಲಕ್ಷ್ಮೀ, ಗೋಪಿ ಆನೆಗಳಿಗೆ ಕಾಯಿ, ಬೆಲ್ಲ, ಹಸಿ ಹುಲ್ಲ, ಒಣ ಹುಲ್ಲು, ಭತ್ತ ನೀಡಿ ಆರೈಕೆ ಮಾಡಲಾಯಿತು. ಸದ್ಯ ಎಲ್ಲಾ ಆನೆಗಳು ಆರೋಗ್ಯವಾಗಿದ್ದು, ಅರಮನೆ ಪ್ರವೇಶಕ್ಕೆ ಸಜ್ಜಾಗುತ್ತಿವೆ. 

ಸ್ಥಳೀಯರ ಸಂಭ್ರಮ: ಇನ್ನು ಅರಣ್ಯ ಇಲಾಖೆ ಅಧಿಕಾರಿಗಳು ಆನೆಗಳ ಬಗ್ಗೆ ನಿಗಾವಹಿಸಿಕೊಂಡು ಗಜಪಡೆಯ ಆರೋಗ್ಯ ವಿಚಾರಸಿ, ಅವುಗಳಿಗೆ ಬೆಲ್ಲ, ಕಾಯಿ ನೀಡಿ ಪೋಷಣೆ ಮಾಡಿದರು. ಮತ್ತೂಂದೆಡೆ ದಸರಾ ಆನೆಗಳು ಅರಣ್ಯ ಭವನದಲ್ಲಿರುವ ವಿಚಾರ ತಿಳಿದ ಅನೇಕ ಸ್ಥಳಿಯರು ಅರಣ್ಯ ಭವನಕ್ಕೆ ಬಂದು ಆನೆಗಳನ್ನು ಕಂಡು ಖುಷಿಪಟ್ಟರು. ಆನೆಗಳ ಆಟ, ಲಾಲನೆ-ಪಾಲನೆಗಳನ್ನು ಕಂಡು ಸಂತಸಗೊಂಡ ಸಾರ್ವಜನಿಕರು ಅವುಗಳೊಂದಿಗೆ ಫೋಟೋ ಕ್ಲಿಕ್ಕಿಸಿಕೊಳ್ಳುತ್ತಾ ಸಂಭ್ರಮಿಸಿದರು. 

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.