ಪ್ರವಾಸೋದ್ಯಮ ಉತ್ತೇಜನಕ್ಕೆ ಭರಪೂರ ಸಲಹೆ


Team Udayavani, Feb 15, 2017, 12:33 PM IST

mys2.jpg

ಮೈಸೂರು: ಪ್ರವಾಸಿಗರ ನೆಚ್ಚಿನ ತಾಣ ಅರಮನೆಗಳ ನಗರಿ ಮೈಸೂರಿಗೆ ಬರುವ ಪ್ರವಾಸಿಗರನ್ನು ಇನ್ನಷ್ಟು ಆಕರ್ಷಿಸಲು ವರ್ಷ ಪೂರ್ತಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಜಿಲ್ಲಾಧಿಕಾರಿ ಡಿ.ರಂದೀಪ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಲಹೆ ಕೇಳಿಬಂತು.

ಮೈಸೂರು ಪ್ರವಾಸಿಗರ ನೆಚ್ಚಿನ ತಾಣವಾದರೂ ದಸರಾ ಸಂದರ್ಭದ ಸೆಪ್ಟೆಂಬರ್‌, ಅಕ್ಟೋಬರ್‌ ತಿಂಗಳಲ್ಲೇ ಎಲ್ಲ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಇನ್ನುಳಿದ ಹತ್ತು ತಿಂಗಳು ಯಾವುದೇ ಕಾರ್ಯಕ್ರಮ ಇರುವುದಿಲ್ಲ. ಹೀಗಾಗಿ ಮೈಸೂರಿಗೆ ಬರುವ ಬಹುತೇಕ ಪ್ರವಾಸಿಗರು ಅರಮನೆ, ಮೃಗಾಲಯ ನೋಡಿಕೊಂಡು ಮೈಸೂರಿನಿಂದ ತೆರಳುತ್ತಿರುವುದರಿಂದ ಇಲ್ಲಿ ಪ್ರವಾಸೋದ್ಯಮ ಲಾಭದಾಯಕವಾಗುತ್ತಿಲ್ಲ ಎಂದು ಮೈಸೂರು ಟೂರಿಸ್ಟ್‌ ಅಸೋಸಿಯೇಷನ್‌ನ ಪ್ರಶಾಂತ್‌, ಮೈಸೂರು ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ ಗೌಡ ಮತ್ತಿತರರು ಸಭೆಯ ಗಮನ ಸೆಳೆದರು.

ಪೊಲೀಸ್‌ ಬ್ಯಾಂಡ್‌: ಪ್ರಶಾಂತ್‌ ಮಾತನಾಡಿ, ಮೈಸೂರಿಗೆ ಬಂದ ಪ್ರವಾಸಿಗರು ಸಂಜೆ ನಂತರ ನಾಗರಹೊಳೆ, ಬಂಡೀಪುರಗಳತ್ತ ಹೊರಟು ಬಿಡುತ್ತಾರೆ. ಹೀಗಾಗಿ ಪ್ರವಾಸಿಗರು ಒಂದು ದಿನ ಮೈಸೂರಿನಲ್ಲೇ ಉಳಿಯುವಂತಾಗಲು ಕೆಲವೇ ಕೆಲವು ಸಂದರ್ಭಗಳಲ್ಲಿ ಬಳಸಿಕೊಳ್ಳಲಾಗುವ ಪೊಲೀಸ್‌ ಬ್ಯಾಂಡ್‌ ಅನ್ನು ಅರಮನೆ ವೀಕ್ಷಣೆ ಸಮಯ 
ಮುಗಿದ ಬಳಿಕ ಪ್ರವಾಸಿಗರು ಹೊರ ಹೋಗುವ ದ್ವಾರದ ಬಳಿ ಆಯೋಜಿಸಿದರೆ ಪ್ರವಾಸಿಗರನ್ನು ಮೈಸೂರಿನಲ್ಲೇ ಹಿಡಿದಿಡಲು ಅನುಕೂಲ ವಾಗುತ್ತದೆ.

ಇದರಿಂದ ಹೋಟೆಲ್‌, ಲಾಡ್ಜ್ ಗಳಿಗೆ ಆದಾಯ ಬರುತ್ತದೆ. ಜತೆಗೆ ನಿತ್ಯ ಸಂಜೆ 6 ರಿಂದ 8ರವರೆಗೆ ಫಾಸ್ಟ್‌ ಮ್ಯೂಸಿಕ್‌ ಅಥವಾ ಪಾರಂಪರಿಕ ಸಂಗೀತ ಕಾರ್ಯಕ್ರಮಗಳನ್ನು ಪುರಭವನದಲ್ಲಿ ಆಯೋಜಿಸಬಹುದಾಗಿದೆ ಎಂದು ಸಲಹೆ ನೀಡಿದರು. ಕೆ.ಎಸ್‌. ನಾಗಪತಿ ಮಾತನಾಡಿ, ಯೋಗ, ಆರ್ಯುವೇದ, ಸಂಗೀತ, ನೃತ್ಯ, ಶಿಕ್ಷಣದ ಉದ್ದೇಶಕ್ಕಾಗಿ ಹೆಚ್ಚು ಜನರು ಮೈಸೂರಿಗೆ ಬರುತ್ತಾರೆ. ಆದರೆ, ಅಡ್ವೆಂಚರ್‌ ಟೂರಿಸಂಗೆ ಮೈಸೂರಿನಲ್ಲಿ ಉತ್ತೇಜನ ಸಿಕ್ಕಿಲ್ಲ. ದಸರಾ ನಂತರದ ದಿನಗಳಲ್ಲೂ ಮೈಸೂರಿನಲ್ಲಿ ಸುಸ್ಥಿರ ಟೂರಿಸಂ ಮಾಡಬಹುದು. ಇದಕ್ಕಾಗಿ 8-10 ಜನರ ಒಂದು ತಂಡ ರಚಿಸುವಂತೆ ಹೇಳಿದರು.

ದಿನೇಶ್‌ ಮಾತನಾಡಿ, ನಗರದ ಪ್ರಮುಖ ವೃತ್ತ, ಜಂಕ್ಷನ್‌ಗಳನ್ನು ಟ್ರಾಫಿಕ್‌ ಮುಕ್ತಗೊಳಿಸಿ. ಪ್ರವಾಸಿಗರು ನಡೆದುಕೊಂಡು ಮೈಸೂರನ್ನು ನೋಡುವ ವಾತಾವರಣ ನಿರ್ಮಿಸಿ, ನಾಗರಹೊಳೆ, ಬಂಡೀಪುರ, ಬಿ.ಆರ್‌. ಹಿಲ್ಸ್‌ಗಳಿಗೆ ಒಂದು ದಿನದ ಪ್ಯಾಕೇಜ್‌ ಟೂರ್‌ ಮಾಡಿ, ಗಿರಿಜನರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪರಿಚಯಿಸಿ ಎಂದರು.

ರಾತ್ರಿ 10ರವರೆಗೆ ಜೂ ತೆರೆಯಿರಿ: ಮೈಸೂರು ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ ಗೌಡ ಮಾತನಾಡಿ, ಚಾಮುಂಡಿಬೆಟ್ಟದಲ್ಲಿ ಶನಿವಾರ ಮತ್ತು ಭಾನುವಾರಗಳಂದು ರಾತ್ರಿ ವೇಳೆ ಹೆಚ್ಚಿನ ಸಂಚಾರ ದಟ್ಟಣೆ ಇರುತ್ತದೆ. ಇದರಿಂದ ಅಪಘಾತ ಗಳಾಗುವ ಸಂಭವ ಹೆಚ್ಚಿದೆ. ಹೀಗಾಗಿ ಬೆಟ್ಟಕ್ಕೆ ಏಕಮುಖ ಸಂಚಾರ ವ್ಯವಸ್ಥೆ ಮಾಡಿ, ರಾತ್ರಿ 10ರವರೆಗೆ ಮೃಗಾಲಯ ವೀಕ್ಷಣೆ ಅವಕಾಶ ಕಲ್ಪಿಸುವ ಜತೆಗೆ ಅರಮನೆ ಹಿಂಭಾಗದಲ್ಲಿ ಸಾಕಷ್ಟು ಖಾಲಿ ಜಾಗ ಇದ್ದು, ಇಲ್ಲಿ ಉದ್ಯಾನ ನಿರ್ಮಿಸುವಂತೆ ಸಲಹೆ ನೀಡಿದರು.

ಔಟ್‌ಬ್ಯಾಕ್‌ ಅಡ್ವೆಂಚರ್‌ ಕಂಪನಿಯ ಅಲೀಂ ಮಾತನಾಡಿ, ವರುಣ ಕೆರೆಯಲ್ಲಿ ಜಲಕ್ರೀಡೆಗೆ ಸಾಕಷ್ಟು ಅವಕಾಶಗಳಿವೆ. ಆದರೆ, ಹೆಚ್ಚು ಹೂಡಿಕೆ ಮಾಡಬೇಕಿರುವುದರಿಂದ ಒಂದು ವರ್ಷದಲ್ಲಿ ಆಗುವುದಿಲ್ಲ. ಹೀಗಾಗಿ ಐದು ವರ್ಷದ ಯೋಜನೆ ರೂಪಿಸಿ ಎಂದು ಹೇಳಿದರು.

ಮಹಾಜನ ಕಾಲೇಜು ಪ್ರವಾಸೋದ್ಯಮ ವಿಭಾಗದ ಮುಖ್ಯಸ್ಥೆ ಉಷಾರಾಣಿ ಮಾತನಾಡಿ, ಮೈಸೂರು ಅರಸರ ಹಿಂದಿನ ರಾಜಧಾನಿ ಶ್ರೀರಂಗಪಟ್ಟಣದಲ್ಲೂ ಪ್ರವಾಸೋದ್ಯಮಕ್ಕೆ ಸಾಕಷ್ಟು ಅವಕಾಶಗಳಿವೆ. ಆದರೆ, ಶ್ರೀರಂಗಪಟ್ಟಣವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಹೀಗಾಗಿ ಮೈಸೂರು ಹೆರಿಟೇಜ್‌ ಅಥವಾ ರಾಯಲ್‌ ಹೆರಿಟೇಜ್‌ ರೈಲು ಸೇವೆ ಒದಗಿಸಿ ಮೈಸೂರಿನ ಜತೆಗೆ ಶ್ರೀರಂಗಪಟ್ಟಣವನ್ನೂ ಪರಿಚಯಿಸುವ ಕೆಲಸ ಮಾಡಿ ಎಂದರು. ಶ್ರೀಹರಿ ಮಾತನಾಡಿ, ಯೋಗದಿನಕ್ಕೆ ಜಿಲ್ಲಾಡಳಿತದ ವತಿಯಿಂದ ಈಗಿನಿಂದಲೇ ಸಿದ್ಧತೆ ಆರಂಭಿಸಿ, ಕನಿಷ್ಠ 25 ಸಾವಿರ ಜನರು ಸೇರುವಂತೆ ಕಾರ್ಯಕ್ರಮ ರೂಪಿಸುವಂತೆ ಮನವಿ ಮಾಡಿದರು.

ಉಳಿದಂತೆ ಪ್ರವಾಸೋದ್ಯಮ ಚಟುವಟಿಕೆಗೆ ಡಿಜಿಟಲ್‌ ವೇದಿಕೆ ಒದಗಿಸುವಿಕೆ, ಕುಕ್ಕರಹಳ್ಳಿ ಕೆರೆ ಆವರಣದಲ್ಲಿ ಕುವೆಂಪು ಅವರ ಪ್ರತಿಮೆ ನಿರ್ಮಾಣ, ಹೆರಿಟೇಜ್‌ ಹೋಂ ಸ್ಟೇ, ಹೆರಿಟೇಜ್‌ ಶೋ ಆಯೋಜಿಸುವ ಬಗ್ಗೆಯೂ ಹಲವರು ಸಭೆಯಲ್ಲಿ ಸಲಹೆ ನೀಡಿದರು. ಮೈಸೂರು ಮಹಾ ನಗರಪಾಲಿಕೆ ಆಯುಕ್ತ ಜಗದೀಶ್‌, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಜನಾರ್ದನ್‌, ಪ್ರೊಬೆಷನರಿ ಐಪಿಎಸ್‌ ಅಧಿಕಾರಿ ಅರುಣಾಂಶು ಗಿರಿ ಸೇರಿದಂತೆ ಹಲವರು ಸಭೆಯಲ್ಲಿ ಉಪಸ್ಥಿತರಿದ್ದರು.

“ಪ್ರವಾಸೋದ್ಯಮ ಕ್ಯಾಲೆಂಡರ್‌’
ಮೈಸೂರು:
ಪ್ರವಾಸೋದ್ಯಮಕ್ಕೆ ಇನ್ನಷ್ಟು ಉತ್ತೇಜನ ನೀಡುವ ಮೂಲಕ ಮೈಸೂರು ನಗರ ಮತ್ತು ಜಿಲ್ಲೆಯನ್ನು ವಿಶ್ವ ಹಾಗೂ ದೇಶಕ್ಕೆ ಪರಿಚಯಿಸುವ ದೃಷ್ಟಿಯಿಂದ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅವಕಾಶವಿದೆ. ಸೆಪ್ಟೆಂಬರ್‌-ಅಕ್ಟೋಬರ್‌ ತಿಂಗಳಲ್ಲಿ ದಸರಾ ಬಿಟ್ಟು ಉಳಿದ ತಿಂಗಳುಗಳಲ್ಲಿ ನಿಗದಿತ ಕಾರ್ಯಕ್ರಮಗಳಿಲ್ಲ. ಹೀಗಾಗಿ ಮೈಸೂರಿಗೆ ಪ್ರವಾಸೋದ್ಯಮ ಕ್ಯಾಲೆಂಡರ್‌ ರೂಪಿಸ ಬಹುದು ಎಂದು ಡೀಸಿ ರಂದೀಪ್‌ ತಿಳಿಸಿದರು.

ಅರಮನೆಯಲ್ಲಿ ಧ್ವನಿ-ಬೆಳಕು ಕಾರ್ಯಕ್ರಮದ ಕನ್ನಡ ಅವತರಣಿಕೆಯನ್ನು ಹಿಂದಿ ಮತ್ತು ಇಂಗ್ಲೀಷ್‌ಗೆ ಅನುವಾದಿಸುವ ಪ್ರಸ್ತಾವ ಇದೆ. ಜತೆಗೆ ಕುಪ್ಪಣ್ಣ ಉದ್ಯಾನದಲ್ಲಿ ಪ್ರತಿ ನಿತ್ಯ ಸಂಗೀತ ಕಾರಂಜಿ ವ್ಯವಸ್ಥೆ, ಅರಮನೆಯಲ್ಲಿ ಹಿಂದೆ ನಡೆಯುತ್ತಿದ್ದು, ಸದ್ಯ ಸ್ಥಗಿತಗೊಂಡಿರುವ ಯುಗಾದಿ ಉತ್ಸವವನ್ನು ಮಾರ್ಚ್‌, ಎಪ್ರಿಲ್‌ ತಿಂಗಳಲ್ಲಿ ಪುನಾರಂಭಿಸುವ ಉದ್ದೇಶವಿದೆ. 

ನಗರದ 400 ಹೆಚ್ಚು ಉದ್ಯಾನಗಳನ್ನು ನಿರ್ವಹಣೆಗಾಗಿ ದತ್ತು ನೀಡಲು ಸಿದ್ಧವಿದ್ದು, ಪುರಭವನ ಸೇರಿದಂತೆ ನಗರದ ಪಾರಂಪರಿಕ ಕಟ್ಟಡಗಳಲ್ಲಿ ಶಾಶ್ವತವಾಗಿ 3ಡಿ ಪ್ರೊಜೆಕ್ಷನ್‌ ಮಾಡಬಹುದು ಎಂದ ಅವರು, ಕೇವಲ ಹಣದಿಂದಲೇ ಪ್ರವಾಸೋದ್ಯಮ ಉತ್ತೇಜನ ಸಾಧ್ಯವಾಗದು, ಬೇರೆ ಬೇರೆ ದೇಶ, ರಾಜ್ಯಗಳಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ಏನೇನು ಮಾಡ ಲಾಗಿದೆ ಎಂದು ತಿಳಿದುಕೊಂಡು ಇಲ್ಲಿಯೂ ಅಳವಡಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.