ವನವಾಸದ ಬಳಿಕ ಮತ್ತೆ ಬಿಜೆಪಿಗೆ


Team Udayavani, Apr 16, 2018, 1:01 PM IST

m3-vanava.jpg

ಬನ್ನೂರು: ಬನ್ನೂರು ವಿಧಾನಸಭಾ ಕ್ಷೇತ್ರವಿದ್ದ ಸಂದರ್ಭದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದೆ, ನಂತರದ ರಾಜಕೀಯ ಬೆಳವಣಿಗೆಯಲ್ಲಿ ಅನ್ಯಪಕ್ಷ ಸೇರಿ 14 ವರ್ಷ ವನವಾಸ ಅನುಭವಿಸಿದ ಬಳಿಕ ಮತ್ತೆ ತವರು ಪಕ್ಷ ಸೇರಿ ನನ್ನ ಪಕ್ಷದ ಅಭ್ಯರ್ಥಿ ಎಸ್‌.ಶಂಕರ್‌ ಗೆಲುವಿಗೆ ಶ್ರಮಿಸುತ್ತಿರುವುದಾಗಿ ಮಾಜಿ ಶಾಸಕಿ ಜೆ.ಸುನೀತಾ ತಿಳಿಸಿದರು.

ಸಮೀಪದ ಕೇತುಪುರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಅಭ್ಯರ್ಥಿ ಎಸ್‌.ಶಂಕರ್‌ ಪರ ಪ್ರಚಾರ ಮಾಡಿ ಮಾತನಾಡಿದ ಅವರು, ರಾಜಕೀಯದಲ್ಲಿ ಆದ ಬೆಳವಣಿಗೆಗಳು ತಮ್ಮ ಆಡಳಿತದ ಅವಧಿಯನ್ನು ಮೊಟಕುಗೊಳಿಸಿ ತಮಗೆ ಕೇವಲ 30 ತಿಂಗಳು ಮಾತ್ರ ಶಾಸಕ ಸ್ಥಾನ ದೊರೆತಿದ್ದು, ಅದರಲ್ಲಿಯೇ ಬನ್ನೂರಿನ ಅಭಿವೃದ್ಧಿಗೆ ಹೆಚ್ಚಿನ ಆದ್ಯೆತೆ ನೀಡಿದ್ದೇನೆ ಎಂದು ತಿಳಿಸಿದರು.

ತಾವು ಕಾಂಗ್ರೆಸ್‌ ಪಕ್ಷ ಸೇರಿದ್ದರೂ ಎಲ್ಲಿಯೂ ಬಹಿರಂಗವಾಗಿ ಕಾಣಸಿಗದೇ ರಾಜಕೀಯದಿಂದ ದೂರ ಉಳಿದಿದ್ದೆ. ಅಲ್ಲಿದ್ದರೂ ತಮ್ಮನ್ನು ಬಿಜೆಪಿ ಪಕ್ಷ  ಸೆಳೆಯುತ್ತಿತ್ತು. ಎಸ್‌.ಶಂಕರ್‌ ಬಿಜೆಪಿಗೆ ಸೇರ್ಪಡೆಯಾದ ವಿಷಯ ತಿಳಿಯುತ್ತಿದ್ದಂತೆ ತಮ್ಮ ಕ್ಷೇತ್ರಕ್ಕೆ ಸೂಕ್ತ ವ್ಯಕ್ತಿ ದೊರೆತರೆಂದು ಅರಿತು ತಾವೂ ಬಿಜೆಪಿ ಸೇರಿದ್ದಾಗಿ ತಿಳಿಸಿದರು.

ಕಾಂಗ್ರೆಸ್‌-ಜೆಡಿಎಸ್‌ ಒಳ ಒಪ್ಪಂದ: ಜೆಡಿಎಸ್‌ ಅಭ್ಯರ್ಥಿ ಅಶ್ವಿ‌ನ್‌ ಕುಮಾರ್‌ ವಿರುದ್ಧ 11 ಮಂದಿ ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿಗಳು, ಪಕ್ಷದ ಮುಖಂಡರಲ್ಲಿ ಅಶ್ವಿ‌ನ್‌ಗೆ ಟಿಕೆಟ್‌ ನೀಡದಂತೆ ಮನವಿ ಮಾಡಿಕೊಂಡರೂ ಯಾರ ಮಾತನ್ನು ಲೆಕ್ಕಿಸದೇ ಅಶ್ವಿ‌ನ್‌ಕುಮಾರ್‌ರನ್ನೇ ಅಭ್ಯರ್ಥಿ ಮಾಡಿದ್ದರಲ್ಲಿಯೇ ಎಷ್ಟರ ಮಟ್ಟಿಗೆ ಒಳ ಒಪ್ಪಂದವಾಗಿದೆ ಎನ್ನುವುದು ಸ್ಪಷ್ಟವಾಗುತ್ತ¤ದೆ. ತಾವೇನೂ ಅದರ ಬಗ್ಗೆ ಹೇಳಬೇಕಾಗಿಲ್ಲ ಎಂದು ಅಶ್ವಿ‌ನ್‌ ಕುಮಾರ್‌ಗೆ ಟಾಂಗ್‌ ನೀಡಿದರು.

ಬಿಜೆಪಿ ಅಭ್ಯರ್ಥಿ ಎಸ್‌.ಶಂಕರ್‌ ಮಾತನಾಡಿ, ಇದೀಗ ಕ್ಷೇತ್ರಾದ್ಯಂತ ಬಿಜೆಪಿ ಅಲೆ ಹೆಚ್ಚುತ್ತಿದೆ. ಅದರಲ್ಲಿ ಒಳ ಒಪ್ಪಂದವಾಗಿರುವ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು ತರಗೆಲೆಯಂತೆ ಕೊಚ್ಚಿ ಹೋಗುವುದು ಖಚಿತ. ಕ್ಷೇತ್ರದ ಜನರು ಯೋಚಿಸಿ, ಹಣಕಾಸಿಗೆ ಬಲಿಯಾಗದಂತೆ ಮತವನ್ನು ಚಲಾಯಿಸಿ ತಮ್ಮನ್ನು ವಿಜಯಶಾಲಿಯನ್ನಾಗಿ ಮಾಡಬೇಕೆಂದು ತಿಳಿಸಿದರು.

ಕಾಂಗ್ರೆಸ್‌ನಲ್ಲಿ ಅತೀ ಜವಾಬ್ದಾರಿಯುತ ಸಚಿವ ಸ್ಥಾನ ಲೋಕೋಪಯೋಗಿ ಇಲಾಖೆ ಮಹದೇವಪ್ಪನವರಿಗೆ ನೀಡಿದ್ದರೂ ತವರು ಕ್ಷೇತ್ರದ ಅಭಿವೃದ್ಧಿಗೆ ಗಮನಹರಿಸಿಲ್ಲ. ಮಾಜಿ ಶಾಸಕಿ ಸುನೀತಾ ಮಹಿಳೆಯರಿಗೆ ಉದ್ಯೋಗ ಒದಗಿಸಿಕೊಡಬೇಕೆನ್ನುವ ಮಹದಾಸೆಯಲ್ಲಿ ಹೆಗ್ಗೂರಿನ ಬಳಿಯಿರುವ ಸರ್ಕಾರಿ ಭೂಮಿಯಲ್ಲಿ ಗಾರ್ಮೆಂಟ್ಸ್‌ ತೆರೆಯುವಂತೆ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ ಎಂದು ಲೇವಡಿ ಮಾಡಿದರು.

ಕಾರ್ಯಕ್ರಮದಲ್ಲಿ ನೂರಾರು ಮಹಿಳೆಯರು, ವಿವಿಧ ಪಕ್ಷಗಳ ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಮಾಕನಹಳ್ಳಿ ಬಿಜೆಪಿ ಮುಖಂಡ ಅಶೋಕ್‌, ಮೂಗೂರು ಸಿದ್ದರಾಜು, ಪುರಸಭಾ ಸದಸ್ಯರಾದ ರಾಜುಗೌಡ, ಸಿದ್ದೇಗೌಡ, ಶಿವನಂಜೇಗೌಡ, ಕಾಳೇಗೌಡ, ಶಂಕರಯ್ಯ, ರವಿ, ಮಹದೇವು, ಹೇಮಂತ್‌, ರಮೇಶ್‌, ನಂಜೇಗೌಡ, ಬೀಡನಹಳ್ಳಿ ವೆಂಕಟೇಗೌಡ, ಶಿವಕುಮಾರ್‌, ಅನಿಲ್‌ ಮತ್ತಿತರರಿದ್ದರು. 

ಟಾಪ್ ನ್ಯೂಸ್

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

3-hunsur

Hunsur: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಯುವಕ ಸಾವು

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Untitled-1

BJP-JDS 19 ಸಂಸದರಿದ್ರೂ ಬಜೆಟ್‌ನಲ್ಲಿ ರಾಜ್ಯಕ್ಕೆ ನಾಮ: ಎಂ.ಲಕ್ಷ್ಮಣ್‌

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.