ಏ.1ರ ಬಳಿಕ ಉಪಚುನಾವಣೆ ಖದರ್ ನೋಡಿ
Team Udayavani, Mar 26, 2017, 12:42 PM IST
ನಂಜನಗೂಡು: ನಂಜನಗೂಡು ವಿಧಾನ ಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ. ಏಪ್ರಿಲ್ 1ರ ನಂತರ ಇಲ್ಲಿನ ಚುನಾವಣೆಯ ಖದರ್ ನೋಡಿ ಎಂದು ಕಾಂಗ್ರೆಸ್ ನಾಯಕ, ಕೆಪಿಸಿಸಿ ಮಾಜಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ ತಿಳಿಸಿದರು.
ನಂಜನಗೂಡು ಉಪಚುನಾವಣೆಯ ಉಸ್ತುವಾರಿ ಹೊತ್ತಿರುವ ಅವರು, ನಗರದಲ್ಲಿ ಕಾಂಗ್ರೆಸ್ ಪ್ರಚಾರ ಕಾರ್ಯಾಲಯಕ್ಕೆ ಶನಿವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ನಂಜನಗೂಡಿನಲ್ಲಿ ಸಾಕಷ್ಟು ಬಾರಿ ಕಾಂಗ್ರೆಸ್ ಗೆದ್ದಿದೆ. ಈಗಲೂ ಗೆಲುವಿಗೆ ಕಷ್ಟ ಪಡಬೇಕಿಲ್ಲ. ಇಲ್ಲಿ ಅಭ್ಯರ್ಥಿ ಬದಲಾಗಿದ್ದಾರೆ ಹೊರತು ಮತದಾರರು ಬದಲಾಗಿಲ್ಲ.
ಇದನ್ನೇ ಮತದಾರರಿಗೆ ತಿಳಿಸಿ ಮತ ಯಾಚಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಇದು ವ್ಯಕ್ತ ಆಧಾರಿತ ಚುನಾವಣೆ ಅಲ್ಲ. ಚುನಾವಣೆಗಳಲ್ಲಿ ವ್ಯಕ್ತಿ ಶೇ. 20 ಭಾಗವಾದರೆ, ಶೇ. 80 ಭಾಗ ಪಕ್ಷದ ಮೇಲೆ ನಡೆಯುತ್ತದೆ. ಕಳಲೆ ಕೇಶವಮೂರ್ತಿ ಬಗ್ಗೆ ಕ್ಷೇತ್ರದಲ್ಲಿ ಒಳ್ಳೆಯ ಹೆಸರಿದೆ. ಅದನ್ನು ಬಳಸಿಕೊಂಡು ಮತದಾರರ ಮನವೊಲಿಸಬೇಕು ಎಂದರು.
ಬಿಜೆಪಿ ಅಭ್ಯರ್ಥಿ ಶ್ರೀನಿವಾಸಪ್ರಸಾದ್ ಒಳ್ಳೆಯವರಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪ್ರಸಾದ್ ಅತ್ಯಂತ ಹಿರಿಯ ಅನುಭವಿ ನಾಯಕರು. ಅವರ ಬಗ್ಗೆ ತಾನು ಏನನ್ನೂ ಹೇಳುವುದಿಲ್ಲ ಎಂದರು.
ಉಪಚುನಾವಣೆಯಲ್ಲಿ ಶ್ರೀನಿವಾಸ್ ಪ್ರಸಾದ್ ಗೆದ್ದರೆ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಯಡಿಯೂರಪ್ಪ ಮುಖ್ಯ ಮಂತ್ರಿಯೂ ಆಗುವುದಿಲ್ಲ. ಕಳಲೆ ಕೇಶವಮೂರ್ತಿ ಸೋತರೆ ಕಾಂಗ್ರೆಸ್ ಅಧಿಕಾರಕ್ಕೆ ಯಾವುದೇ ಚ್ಯುತಿ ಬರುವುದಿಲ್ಲ. ಕಾಂಗ್ರೆಸ್ ಗೆಲುವು ಸಾಧಿಸಿದರೆ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿ ಪಡಿಸಬಹುದು ಎಂದು ತಿಳಿಸಿದರು.
ಪಕ್ಷದ ಕಾರ್ಯಾಲಯಕ್ಕೆ ಆಗಮಿಸಿದ ಅಲ್ಲಂ ವೀರಭದ್ರಪ್ಪಅವರನ್ನು ಅಭ್ಯರ್ಥಿ ಕೇಶವಮೂರ್ತಿ ಬರಮಾಡಿಕೊಂಡರು. ಈ ವೇಳೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಬಿ. ಸ್ವಾಮಿ, ನಂದಿನಿ ಚಂದ್ರಶೇಖರ್, ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷ ಶಿವಕುಮಾರ್, ರೇಹನಾ , ದಿನೇಶ, ಗಂಗಾಧರ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ