ಮತ್ತೆ ಹುಲಿ ಕಾಟ: ಸೆರೆಗೆ ಕಾರ್ಯಾಚರಣೆ


Team Udayavani, Dec 15, 2018, 11:36 AM IST

m5-mathe-hu.jpg

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಂಚಿನ ಕೆ.ಜಿ.ಹಬ್ಬನಕುಪ್ಪೆಯ ತರಗನ್‌ ಎಸ್ಟೇಟ್‌ನಲ್ಲಿ ಹುಲಿ ಹಾವಳಿ ಮುಂದುವರಿದಿದ್ದು, ಶುಕ್ರವಾರ ಒಂದು ಕುರಿಯನ್ನು ಕೊಂದು ಹಾಕಿದ್ದರೆ, ಮೂರು ಕುರಿಗಳು ನಾಪತ್ತೆಯಾಗಿರುವ ಘಟನೆ ಸಂಭವಿಸಿದೆ.

ಉದ್ಯಾನವನದಂಚಿನಲ್ಲಿರುವ ಎಸ್ಟೇಟ್‌ನಲ್ಲಿ ಗೋಟ್‌ಫಾರಂ ಇದ್ದು, ಕುರಿಗಳನ್ನು ಎಸ್ಟೇಟ್‌ನೊಳಗಿರುವ ಮುತ್ತಣ್ಣ ಬ್ಲಾಕ್‌ 22ರಲ್ಲಿ ಮೇಯಲು ಬಿಟ್ಟಿದ್ದ ವೇಳೆ, ಕುರಿಗಳ ಮೇಲೆ ದಾಳಿ ನಡೆಸಿರುವ ಹುಲಿಯು ಒಂದು ಕುರಿಯನ್ನು ಕೊಂದು ಹಾಕಿದ್ದು, ಶವ ಪತ್ತೆಯಾಗಿದೆ. ಮೇಯಲು ಬಿಟ್ಟಿದ್ದ ಮಂದೆಯಲ್ಲಿ ಮೂರು ಕುರಿಗಳನ್ನು ಹೊತ್ತೂಯ್ದಿದೆ.

ಕುರಿ ಮಂದೆಯೊಂದಿಗೆ ತೆರಳಿದ್ದ ಮಣಿಯಮ್ಮ ಹಾಗೂ ರಮೇಶ್‌ ತಮ್ಮ ಕಣ್ಮುಂದೆಯೇ ಹುಲಿ ಕುರಿ ಮಂದೆ ಮೇಲೆ ದಾಳಿ ನಡೆಸಿದ್ದು, ನಾವುಗಳು ಹೆದರಿ ಸ್ಥಳದಿಂದ ಪ್ರಾಣ ಉಳಿಸಿಕೊಂಡು ಹಿಂತಿರುಗಿದ್ದೇವೆಂದು ಮಾಲಿಕರಿಗೆ ತಿಳಿಸಿದ ಮೇರೆಗೆ, ಫಾರಂ ಮಾಲಿಕರು ನೀಡಿದ ದೂರಿನ ಮೇರೆಗೆ ಅರಣ್ಯ ಇಲಾಖೆ ಡಿಆರ್‌ಎಫ್‌ಓ ವೀರಭದ್ರಯ್ಯ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನಾ ಸ್ಥಳದಲ್ಲಿ ಹುಲಿಯ ಮಲ ಪತ್ತೆಯಾಗಿದೆ. 

ಮರಿ ಸೆರೆ ಬಳಿಕ ತಾಯಿ ಹುಲಿ ಪ್ರತ್ಯಕ್ಷ: ಕಳೆದ ಮೂರ್‍ನಾಲ್ಕು ತಿಂಗಳಿನಿಂದ ಇದೇ ಎಸ್ಟೇಟ್‌ನಲ್ಲಿ ಆಗಾಗ್ಗೆ ಮೂರು ಮರಿಗಳೊಂದಿಗೆ ಹುಲಿ ಕಾಣಿಸಿಕೊಂಡು ಹತ್ತಾರು ಜಾನುವಾರು, ಕುರಿಗಳನ್ನು ಕೊಂದು ಹಾಕಿತ್ತು. ಒಂದು ಕಾಡುಹಂದಿಯನ್ನು ಕೊಂದು ತಿಂದು ಹಾಕಿತ್ತು.

ಅರಣ್ಯ ಇಲಾಖೆ ಕೂಂಬಿಂಗ್‌ ಕಾರ್ಯಾಚರಣೆ ನಡೆಸಿದ್ದರೂ ಫಲಪ್ರಧವಾಗಿರಲಿಲ್ಲ, ಆದರೆ, ವಾರದ ಹಿಂದೆ ಎಸ್ಟೇಟ್‌ ಪಕ್ಕದ ಶೆಟ್ಟಹಳ್ಳಿ ಲಕ್ಕಪಟ್ಟಣದಲ್ಲಿ ಉರುಳಿಗೆ ಸಿಲುಕಿ, ನಿತ್ರಾನಗೊಂಡಿದ್ದ ಎರಡೂವರೆ ವರ್ಷದ ಹುಲಿಯನ್ನು ರಕ್ಷಿಸಲಾಗಿತ್ತು.  ಇತ್ತ ಗ್ರಾಮಸ್ಥರು ಆತಂಕದಲ್ಲಿದ್ದು, ಹುಲಿಯನ್ನು ಸೆರೆ ಹಿಡಿಯಬೇಕೆಂದು ಆಗ್ರಹಿಸಿದ್ದಾರೆ. 

ಕೂಂಬಿಂಗ್‌ ಮುಂದುವರಿಕೆ: ಈ ಎಸ್ಟೇಟ್‌ ಉದ್ಯಾನದಂಚಿನಲ್ಲಿದ್ದು, ವಾರದ ಹಿಂದೆ ಸೆರೆಯಾದ ಹುಲಿ ಮರಿಯನ್ನು ಹುಡುಕಿಕೊಂಡು ತಾಯಿ ಹುಲಿ ಬಂದಿರಬಹುದು. ಹುಲಿಯನ್ನು ಪತ್ತೆ ಹಚ್ಚಲು ಸಾಕಾನೆಗಳ ಸಹಾಯದಿಂದ ಕೂಂಬಿಂಗ್‌ ನಡೆಸಲಾಗುವುದೆಂದು ಹುಲಿ ಯೋಜನೆ ಕ್ಷೇತ್ರ ನಿರ್ದೇಶಕ ನಾರಾಯಣಸ್ವಾಮಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.