ರೈತರಿಗೆ ಕೃಷಿ ಮಾಹಿತಿ, ವಸ್ತು ಪ್ರದರ್ಶನ


Team Udayavani, Jun 11, 2019, 3:00 AM IST

raitarige

ಎಚ್‌.ಡಿ.ಕೋಟೆ: ಪಟ್ಟಣದ ಅಂಬೇಡ್ಕರ್‌ ಸಮುದಾಯ ಭವನದ ಆವರಣದಲ್ಲಿ ಕೃಷಿ ಇಲಾಖೆ ಹಾಗೂ ಕೃಷಿಯೇತರ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಸೋಮವಾರ ನಡೆದ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮನ್ನು ಹಿರಿಯ ಸಾಹಿತಿ ಗಿರೀಶ್‌ ಕಾರ್ನಾಡ್‌ ನಿಧನದ ಹಿನ್ನಲೆಯಲ್ಲಿ ಅರ್ಧಕ್ಕೆ ಮೊಟಕು ಗೊಳಿಸಿ ಎರಡು ನಿಮಿಷಗಳ ಕಾಲ ಶ್ರದ್ಧಾಂಜಲಿ ಸಲ್ಲಿಸಿ ವೇದಿಕೆ ಕಾರ್ಯಕ್ರಮವನ್ನು ರದ್ದು ಪಡಿಸಲಾಯಿತು. ಬಳಿಕ ರೈತರಿಗೆ ಕೃಷಿ ಮಾಹಿತಿ ನೀಡಲಾಯಿತು.

ವಸ್ತು ಪ್ರದರ್ಶನ: ಪ್ರತಿ ವರ್ಷದಂತೆ ಈ ವರ್ಷ ಕೃಷಿ ಅಭಿಯಾನ ವೇದಿಕೆ ಕಾರ್ಯಕ್ರಮ ಹಿನ್ನಲೆಯಲ್ಲಿ ಕೃಷಿ ಮತ್ತು ಕೃಷಿಯೇತರ ಇಲಾಖೆಗಳು ಕೃಷಿ ಸಂಬಂಧಿಸಿದ ಹಾಗೂ ಇಲಾಖೆಯಿಂದ ಸಿಗುವ ಸೌಲಭ್ಯಗಳ ಕುರಿತ ಏರ್ಪಡಿಸಿದ್ದ ವಸ್ತು ಪ್ರದರ್ಶನವನ್ನು ಶಾಸಕ ಅನಿಲ್‌ ಚಿಕ್ಕಮಾದು ಉದ್ಘಾಟಿಸಿದರು.

ಯೋಜನೆ ತಲುಪಿಸಿ: ಬಳಿಕ ಮಾತನಾಡಿದ ಶಾಸಕ‌ರು, 2019-20 ಸಾಲಿನ ಸರ್ಕಾರದ ಯೋಜನೆಗಳ ಬಗ್ಗೆ ರೈತರಿಗೆ ತಿಳಿಸಿ ಮಾರ್ಗದರ್ಶನ ನೀಡಿ ಸರ್ಕಾರದ ಯೋಜನೆಗಳ ಯಶಸ್ಸಿಗೆ ಅಧಿಕಾರಿಗಳು ಶ್ರಮಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕರಿಗೆ ಸೂಚಿಸಿದರು.

ಮಾತಿನ ಚಕಮಕಿ: ಶಾಸಕರು ಫಲಾನುಭವಿಯೊಬ್ಬರಿಗೆ ಕೃಷಿ ಪರಿಕರ ವಿತರಣೆ ವೇಳೆ ಇತರ ಜನಪ್ರತಿನಿಧಿಗಳನ್ನು ಕಡೆಗಣಿಸಿದ್ದರಿಂದ ಸಿಟ್ಟಾದ ತಾಲೂಕು ಪಂಚಾಯ್ತಿ ಸದಸ್ಯ ಟಿ.ವೆಂಕಟೇಶ್‌ ಅವರು ಶಾಸಕರ ಎದುರೇ ಸಹಾಯಕ ಕೃಷಿ ನಿರ್ದೇಶಕ ಜಯರಾಮಯ್ಯ ಅವರನ್ನು ತರಾಟೆ ತಗೆದುಕೊಂಡರು.

ಶಾಸಕರಿಗಾದರೂ ತಿಳಿಯದಿರಬಹುದು ನಿಮಗೆ ಗೊತ್ತಿಲ್ವಾ ಎಂದು ಅಧಿಕಾರಿಯನ್ನು ಪ್ರಶ್ನಿಸಿದರು ಈ ವೇಳೆ ಮಧ್ಯ ಪ್ರವೇಶಿಸಿದ ಶಾಸಕ ಅನಿಲ್‌ ಚಿಕ್ಕಮಾದು, ನನಗೆ ನಿಮ್ಮ ಅವಶ್ಯಕತೆ ಇಲ್ಲ, ನಾನೇಕೆ ಕರೆಯಬೇಕು ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ತಾಪಂ ಸದಸ್ಯ ಟಿ.ವೆಂಕಟೇಶ್‌ ಕೂಡ ನಿಮ್ಮ ಅವಶ್ಯಕತೆನೂ ನನಗಿಲ್ಲ. ನಾನು ಕೂಡ ನಿಮ್ಮ ಹಾಗೆ ಓರ್ವ ಜನಪ್ರತಿನಿಧಿ ಎಂಬುದನ್ನು ಮರೆತು ಮಾತನಾಡುತ್ತಿದ್ದೀರಾ ಎಂದರು.

ರೈತರ ತರಾಟೆ: ಹಿರಿಯ ಸಾಹಿತಿ ಗಿರೀಶ್‌ ಕಾರ್ನಾಡ್‌ ನಿಧನ ಹಿನ್ನಲೆಯಲ್ಲಿ ಕಾರ್ಯಕ್ರಮ ಮೊಟಕುಗೊಳಿಸಿ ಶಾಸಕರು ಅತ್ತ ಹೊರಡುತ್ತಿದ್ದಂತೆ ಇತ್ತ ರೈತ ಸಂಘದ ಪದಾಧಿಕಾರಿಗಳು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಜಯರಾಮಯ್ಯ ಅವರನ್ನು ಹಿಗ್ಗಾಮುಗ್ಗಾ ತರಾಟೆ ತಗೆದುಕೊಂಡರು.

ನಮ್ಮನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡಿ ಕರೆದ ಮೇಲೆ ಗೌರವವಾಗಿ ನಡೆಸಿಕೊಳ್ಳಬೇಕು, ಇಂತಹ ಕಾರ್ಯಕ್ರಮಕ್ಕೆ ನಮ್ಮನ್ನು ಏಕೆ ಕರೆಯುತ್ತೀರಿ, ಶಾಸಕರೊಬ್ಬರನ್ನೇ ಕರೆಸಿಕೊಂಡು ಕಾರ್ಯಕ್ರಮ ಮಾಡಿಕೊಳ್ಳಬಹುದಿತ್ತಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಪಂ ಅಧ್ಯಕ್ಷೆ ಪರಿಮಳಾ ಶ್ಯಾಮ್‌, ತಾಪಂ ಸದಸ್ಯ ಟಿ.ವೆಂಕಟೇಶ್‌, ಪ್ರಗತಿಪರ ರೈತ ಮಲಾರ ಪುಟ್ಟಯ್ಯ, ಹಿರಿಯ ಮುಖಂಡ ಚಾ.ನಂಜುಂಡಮೂರ್ತಿ, ಪುರಸಭಾ ಸದಸ್ಯ ನರಸಿಂಹಮೂರ್ತಿ, ಟಿಎಪಿಸಿಎಂಎಸ್‌ ಅಧ್ಯಕ್ಷ ಕೃಷ್ಣ, ಪುರಸಭೆ ಮಾಜಿ ಸದಸ್ಯ ಅನಿಲ್‌,

ಮುಖಂಡರಾದ ವನಸಿರಿ ಶಂಕರ್‌, ಆದಿವಾಸಿ ಮುಖಂಡ ಕಾವೇರ, ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಮಹದೇವನಾಯ್ಕ, ತಾಲೂಕು ಅಧ್ಯಕ್ಷ ರವಿಕುಮಾರ್‌, ದೇವಲಾಪುರ ಶಿವಣ್ಣ, ಕೃಷಿ ಅಧಿಕಾರಿಗಳಾದ ಪ್ರದೀಪ್‌, ಗಂಗಾಧರ್‌, ಗುರುಪ್ರಸಾದ್‌, ಹರೀಶ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.