ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಐಡಿಎಸ್ಒ ಬೃಹತ್ ರ್ಯಾಲಿ
Team Udayavani, Aug 9, 2019, 3:55 PM IST
ಎಐಡಿಎಸ್ಒ ವತಿಯಿಂದ ನಗರದ ರಾಮಸ್ವಾಮಿ ವೃತದಿಂದ ಸಾವಿರಾರು ವಿದ್ಯಾರ್ಥಿ ಗಳನ್ನೊಳಗೊಂಡ ಬೃಹತ್ ರ್ಯಾಲಿ ನಡೆಯಿತು.
ಮೈಸೂರು: ಶಿಕ್ಷಣದ ವ್ಯಾಪಾರೀಕರಣ ನಿಲ್ಲಿಸಿ, ಸಂಗೀತ ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್ಒ) 5ನೇ ಮೈಸೂರು ಜಿಲ್ಲಾ ಮಟ್ಟದ ವಿದ್ಯಾರ್ಥಿ ಸಮ್ಮೇಳನ ನಡೆಸಿತು.
ನಗರದ ರಾಮಸ್ವಾಮಿ ವೃತದಿಂದ ಸಾವಿರಾರು ವಿದ್ಯಾರ್ಥಿಗಳನ್ನೊಳಗೊಂಡ ಬೃಹತ್ ರ್ಯಾಲಿ, ಸಮಾವೇಶ ನಡೆಯುವ ಸ್ಥಳವಾದ ಸ್ವಾತಂತ್ರ್ಯ ಹೋರಾಟಗಾರ ಉದ್ಯಾನ ವನಕ್ಕೆ ತಲುಪಿತು.
ಈ ಸಂದರ್ಭ ಮಾತನಾಡಿದ ಎಐಡಿಎಸ್ಒ ಸದಸ್ಯರು, ಸರ್ಕಾರಿ ಶಾಲಾ ಕಾಲೇಜು ಗಳನ್ನು ಮುಚ್ಚುವುದನ್ನು ನಿಲ್ಲಿಸಿ, ಅವಶ್ಯಕತೆಗೆ ತಕ್ಕಂತೆ ಸರ್ಕಾರಿ ಶಾಲೆ ಪ್ರಾರಂಭಿಸಬೇಕು. ಸರ್ಕಾರಿ ಶಾಲಾ ಕಾಲೇಜುಗಳಿಗೆ ಮೂಲ ಸೌಕರ್ಯ, ಅಗತ್ಯ ಖಾಯಂ ಸಿಬ್ಬಂದಿ ಒದಗಿಸಿ, ವಿದ್ಯಾರ್ಥಿಗಳಿಗೆ ಭದ್ರತೆ ಖಾತ್ರಿ ಪಡಿಸಬೇಕು, ಜಿಲ್ಲೆಯಲ್ಲಿ ಸರ್ಕಾರಿ ಎಂಜಿನಿಯರಿಂಗ್ ಮತ್ತು ಕಾನೂನು ಕಾಲೇಜು ಪ್ರಾರಂಭಿಸಬೇಕು ಎಂದು ಆಗ್ರಹಿಸಿದರು.
ರ್ಯಾಲಿಯಲ್ಲಿ ರಾಜ್ಯ ಕಾರ್ಯದರ್ಶಿ ಕೆ.ಎಸ್. ಅಶ್ವಿನಿ, ಜಿಲ್ಲಾ ಕಾರ್ಯದರ್ಶಿ ಬಿ. ರವಿ , ರಾಜ್ಯ ಸೆಕ್ರೆಟೇರಿಯೇಟ್ ಸದಸ್ಯರು, ಜಿಲ್ಲಾಧ್ಯಕ್ಷ ಆಕಾಶ್ ಕುಮಾರ್ ಸೇರಿದಂತೆ ಸಾವಿರಾರು ವಿಧ್ಯಾರ್ಥಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು