ಅಕ್ಕ ಮಹಾದೇವಿ ವಿವಾಹ ನಿರಾಕರಣೆ ಮಾಡಿದವರಲ್ಲ


Team Udayavani, Sep 10, 2019, 3:00 AM IST

akkamahadevi

ಮೈಸೂರು: ಅಕ್ಕ ಮಹಾದೇವಿ ವಿವಾಹ ನಿರಾಕರಣೆ ಮಾಡಿದವರಲ್ಲ. ಬದಲಿಗೆ ದಾಂಪತ್ಯದ ಒಳಗಡೆಯಿರುವ ಅಧಿಕಾರದ ಸಂಬಂಧದ ಬಗ್ಗೆ ವಿರೋಧ ವ್ಯಕ್ತಮಾಡಿ, ಆರೋಗ್ಯಕಾರಿ ಸಂಬಂಧದ ಬಗ್ಗೆ ಧ್ವನಿಯೆತ್ತಿದ್ದರು. ಸಮಾಜ ಇದನ್ನು ಮರೆಮಾಚಿದೆ ಎಂದು ವಿಜಯಪುರದ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಸಬೀಹಾ ಭೂಮಿಗೌಡ ಹೇಳಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಅಕ್ಕ ಮಹಾದೇವಿ ಅಧ್ಯಯನ ಮತ್ತು ಸಂಶೋಧನಾ ಪೀಠ ಆಯೋಜಿಸಿದ್ದ ವರ್ತಮಾನಕ್ಕೂ ಸಲ್ಲುವ ಅಕ್ಕನ ವಚನಗಳು ವಿಷಯ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಭಕ್ತಿಪಂಥ: ವಿವಾಹವೇ ಹೆಣ್ಣು ಮಕ್ಕಳ ಅಂತಿಮ ಗುರಿಯಲ್ಲ ಎಂದು ಪ್ರತಿಪಾದಿಸಿದ್ದ ಅಕ್ಕ ಮಹಾದೇವಿಗೆ ಈ ಸಮಾಜ ವಿರಾಗಿಣಿಯ ಚಿತ್ರಣ ನೀಡಿದೆ. ಭಕ್ತಿಪಂಥದಲ್ಲಿ ಸಾಗಿದ ಅಕ್ಕ ಮಹಾದೇವಿ ವಿವಾಹ ನಿರಾಕರಣೆ ಮಾಡಿದವರಲ್ಲ. ದಾಂಪತ್ಯದಲ್ಲಿ ಸಖ-ಸಖೀಯ ಸಂಬಂಧ ಮುಖ್ಯವಾಯಿತು. ಅಕ್ಕನ ಬದುಕು ಜೀವನ ಧೋರಣೆ ಇಟ್ಟುಕೊಂಡು ವರ್ತಮಾನದ ಬದುಕಿಗೆ ಅನ್ವಯವಾಗಲಿದೆ ಎಂದು ತಿಳಿಸಿದರು. ಅಕ್ಕ ಮಹಾದೇವಿಯ ವಚನಗಳಿಗೆ ಮುಖಾಮುಖೀಯಾದಾಗ ಬೇರೆ ಬೇರೆ ಪ್ರದೇಶಗಳಲ್ಲಿ ಬೇರೆ ಬೇರೆ ಅರ್ಥಗಳು, ಬೇರೆ ಬೇರೆ ಸಾಧ್ಯತೆಗಳನ್ನು ತೆರೆದಿಡುತ್ತಿದೆ ಎಂದು ಹೇಳಿದರು.

ವಚನ: ಅಕ್ಕನ ವಚನಗಳು ಜನ ಸಾಮಾನ್ಯರಿಗೆ ಅರ್ಥವಾಗುವಂತಿದ್ದು, ವಚನಗಳೊಳಗಿನ ಅರ್ಥದ ಮಗ್ಗಲುಗಳನ್ನು ಗಮನಿಸಿದಾಗ ಕೇವಲ ಮಾತುಗಳ ಒಳಗಡೆ ತುಂಬಿರುವ ಅರ್ಥದ ಪರಂಪರೆಯನ್ನು ತೆರೆದಿಡುತ್ತದೆ. ಸಾಹಿತ್ಯಿಕ ವಿಮರ್ಶೆಗೆ ಒಡ್ಡಿದಾಗ ನೋಡುವ ಕ್ರಮವೇ ಬೇರೆ ಇದೆ ಎನಿಸುತ್ತದೆ ಎಂದರು.

ಪ್ರಾಥಮಿಕ ಮತ್ತು ಪ್ರೌಢಶಾಲಾ ಹಂತದಿಂದಲೇ ಅಕ್ಕ ಮಹಾದೇವಿಯ ವಚನಗಳನ್ನು ಓದಿಕೊಂಡು ಬಂದಿದ್ದು, ಪ್ರಾಥಮಿಕ ದಿಂದ ಸ್ನಾತಕ ಶಿಕ್ಷಣದವರೆಗೆ ಶೈಕ್ಷಣಿಕ ಶಿಸ್ತು ಉತ್ತಮವಾಗಿರಲಿದ್ದು, ವಚನ ಅಂದರೇನು, ಅದರ ಹಿನ್ನೆಲೆ ಏನು, ಅದರ ಕಠಿಣ ಪದಗಳ ಅರ್ಥಗಳೇನು ಎಂಬುದನ್ನು ವಿವರಿಸಿ ಅವರ ಲೋಕದೃಷ್ಟಿಯನ್ನು ಭೂತಕಾಲದಲ್ಲಿಟ್ಟು ನೋಡುತ್ತೇವೆಯೇ ಹೊರತು ವರ್ತಮಾನಕ್ಕೆ ಅನ್ವಯಿಸಿ ನೋಡುವ ಕೆಲಸ ವಾಗುತ್ತಿಲ್ಲ ಎಂದು ವಿಷಾದಿಸಿದರು.

ಕಾರ್ಯಕ್ರಮದಲ್ಲಿ ಮುಕ್ತ ವಿವಿ ಕುಲಪತಿಪ್ರೊ.ಎಸ್‌.ವಿದ್ಯಾಶಂಕರ್‌ ಅಧ್ಯಕ್ಷತೆವಹಿಸಿದ್ದರು. ಪರೀಕ್ಷಾಂಗ ಕುಲಸಚಿವ ಪ್ರೊ.ಎ.ರಂಗಸ್ವಾಮಿ, ಪ್ರೊ.ಬಸವರಾಜು, ಖಾದರ್‌ ಪಾಷ, ತಿಪ್ಪೇಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.