
ಎಲ್ಲಾ ಪಕ್ಷಗಳಲ್ಲೂ ಇರುತ್ತಾರೆ…; ರೌಡಿ ಶೀಟರ್ ವಿಚಾರಕ್ಕೆ ತನ್ವೀರ್ ಸೇಠ್ ಪ್ರತಿಕ್ರಿಯೆ
ಟಿಪ್ಪು ನಿಜಕನಸುಗಳು: ನ್ಯಾಯಾಲಯದ ತೀರ್ಪು ಕಾದು ನೋಡಬೇಕಿದೆ
Team Udayavani, Dec 3, 2022, 8:57 PM IST

ಮೈಸೂರು : ರೌಡಿ ಶೀಟರ್ ಗಳನ್ನು ಜೊತೆಯಲ್ಲಿಟ್ಟುಕೊಳ್ಳುವುದು ಒಳ್ಳೆಯದಲ್ಲ.ಎಲ್ಲ ರಾಜಕೀಯ ಪಕ್ಷಗಳಲ್ಲೂ ಅಂತಹವರು ಇದ್ದೇ ಇರುತ್ತಾರೆ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಶನಿವಾರ ಪ್ರತಿಕ್ರಿಯೆ ನೀಡಿದ್ದಾರೆ.
ರಾಜಕೀಯ ನೇತಾರರ ಜೊತೆ ರೌಡಿ ಶೀಟರ್ ಗಳು ಕಾಣಿಸಿಕೊಳ್ಳುತ್ತಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ಯಾರು ಕೂಡ ಸರ್ಟಿಫಿಕೇಟ್ ತೆಗೆದುಕೊಂಡು ನಮ್ಮ ಮುಂದೆ ಬರುವುದಿಲ್ಲ.ಕೆಲವೊಂದು ಸಂದರ್ಭಗಳಲ್ಲಿ ನಮ್ಮ ಪಕ್ಕ ನಿಂತು ಫೋಟೊ ತೆಗೆಸಿಕೊಳ್ಳುವವರು ಯಾರು ಎಂದು ನಮಗೆ ತಿಳಿದಿರುವುದಿಲ್ಲ.ಯಾವುದೇ ಒಂದು ರಾಜಕೀಯ ಪಕ್ಷ ಸಂವಿಧಾನದ ಅಡಿಯಲ್ಲಿ ಈ ದೇಶಕ್ಕೆ ಕೊಡುಗೆ ನೀಡಿದವರನ್ನು ಜೊತೆಯಲ್ಲಿಟ್ಟುಕೊಳ್ಳಬೇಕು. ಮತದಾರರಲ್ಲಿ ಭಯ ಮೂಡಿಸುವವರನ್ನು, ರೌಡಿ ಶೀಟರ್ ಗಳನ್ನು ಜೊತೆಯಲ್ಲಿಟ್ಟುಕೊಳ್ಳುವುದು ಒಳ್ಳೆಯದಲ್ಲ.
ಎಲ್ಲ ರಾಜಕೀಯ ಪಕ್ಷಗಳಲ್ಲೂ ಅಂತಹವರು ಇದ್ದೇ ಇರುತ್ತಾರೆ.ಕೆಲವರಿಗೆ ರಾಜಕೀಯ ನಾಯಕರ ಶ್ರೀರಕ್ಷೆಯೂ ಇರುತ್ತದೆ.ಆದರೀಗ ದೃಶ್ಯ ಮಾಧ್ಯಮ ಪ್ರಭಾವಿಯಾಗಿರುವುದರಿಂದ ಬೇಗ ಬೆಳಕಿಗೆ ಬರುತ್ತದೆ ಎಂದು ಹೇಳಿದ್ದಾರೆ.
”ದೇಶ ಸೇವೆ ಮಾಡುವಂತಹ, ದೂರದೃಷ್ಟಿ ಉಳ್ಳವರು ರಾಜಕೀಯಕ್ಕೆ ಬರುವಂತಾಗಬೇಕು.ಇತ್ತೀಚೆಗೆ ಮುಖ್ಯಮಂತ್ರಿಗಳು ಸರ್ಕಾರ ಜನರಿಂದ ಬರಬೇಕು, ವಾಮಮಾರ್ಗದಿಂದ ಬರಬಾರದು ಎಂದಿದ್ದಾರೆ. ಯಾವ ಕಾರಣದಿಂದ ಆ ರೀತಿ ಹೇಳಿದ್ದಾರೋ ಗೊತ್ತಿಲ್ಲ. ಈ ರೀತಿ ಒಬ್ಬರಿಗೊಬ್ಬರು ಆರೋಪ ಪ್ರತ್ಯಾರೋಪದಲ್ಲಿ ತೊಡಗಿರೋದು ಸರಿಯಲ್ಲ.ಪಕ್ಷಕ್ಕಿಂತ ದೇಶ ಮುಖ್ಯ ಎಂಬುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು” ಎಂದರು.
ಕಾದು ನೋಡಬೇಕಿದೆ
ಟಿಪ್ಪು ನಿಜಕನಸುಗಳು ನಾಟಕ ಪ್ರದರ್ಶನಕ್ಕೆ ತಡೆಯಾಜ್ಞೆ ತರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ನ್ಯಾಯಾಲಯಕ್ಕೆ ಹೋದಾಗ ನಾಟಕ ಇನ್ನೂ ಪ್ರದರ್ಶನವಾಗಿರಲಿಲ್ಲ.ಹಾಗಾಗಿ ಕೃತಿ ಮಾರಾಟಕ್ಕೆ ಮಾತ್ರ ನಿಷೇಧ ಹೇರಲಾಯಿತು. ನಾಟಕ ಪ್ರದರ್ಶನಕ್ಕೂ ತಡೆಯಾಜ್ಞೆ ಸಿಗುವ ಸಾಧ್ಯತೆಯಿದೆ. ಈ ವಿಚಾರ ಮೈಸೂರಿನ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ. ರಂಗಾಯಣದ ನಿರ್ದೇಶಕರಿಗೆ ಹೈಕೋರ್ಟ್ ನಿಂದ ಇಂದು ಸಮನ್ಸ್ ಕೂಡ ಬಂದಿದೆ. ಅದಕ್ಕೆ ಅವರು ಏನು ಸಮಜಾಯಿಷಿ ಕೊಡುತ್ತಾರೆ, ನ್ಯಾಯಾಲಯ ಏನು ತೀರ್ಪು ಕೊಡುತ್ತದೇ ಎಂಬುದನ್ನು ಕಾದು ನೋಡಬೇಕಿದೆ” ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಉಳ್ಳಾಲ: ನೇಣು ಬಿಗಿದ ಸ್ಥಿತಿಯಲ್ಲಿ ವಿಶೇಷಚೇತನ ಯುವತಿಯ ಶವ ಪತ್ತೆ

ಬಜೆಟ್ ನಲ್ಲಿ ಅಭಿವೃದ್ಧಿ ಹಾಗೂ ಕಲ್ಯಾಣ ಯೋಜನೆಗಳಿಗೆ ಸಮಾನ ಅವಕಾಶ: ಸುನಿಲ್ ಕುಮಾರ್

ಸಿ.ಡಿ ವಿಚಾರದಲ್ಲಿ ಡಿಕೆಶಿ ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸಿದ್ದಾರೆ: ಈಶ್ವರಪ್ಪ

ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ 5300 ಕೋಟಿ ಘೋಷಣೆ ಸ್ವಾಗತಾರ್ಹ: ಸಿಎಂ ಬೊಮ್ಮಾಯಿ

Union Budget 2023: ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಘೋಷಣೆ