ಸಾ.ರಾ.ಮಹೇಶ್‌ ವರ್ತನೆಯಿಂದ ಮೈತ್ರಿ ಸರ್ಕಾರ ಪತನ


Team Udayavani, Sep 16, 2019, 3:00 AM IST

sara-mahesh

ಕೆ.ಆರ್‌.ನಗರ: ಶಾಸಕ ಸಾ.ರಾ.ಮಹೇಶ್‌ ಅವರ ದುರಾಹಂಕಾರದ ವರ್ತನೆಯೇ ರಾಜ್ಯದಲ್ಲಿ ಅಸ್ತಿತ್ವದಲ್ಲಿದ್ದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಪತನಗೊಳ್ಳಲು ಪ್ರಮುಖ ಕಾರಣವಾಗಿದೆ ಎಂದು ಹುಣಸೂರು ಕ್ಷೇತ್ರದ ಅನರ್ಹ ಶಾಸಕ ಎಚ್‌.ವಿಶ್ವನಾಥ್‌ ಕಿಡಿಕಾರಿದರು. ಪಟ್ಟಣದ ತಮ್ಮ ನಿವಾಸದಲ್ಲಿ ಭಾನುವಾರ ಮಾತನಾಡಿದ ಅವರು, ಕೆ.ಆರ್‌.ನಗರ ವಿಧಾನಸಭಾ ಕ್ಷೇತ್ರದ ಶಾಸಕನ ನಡವಳಿಕೆಯಿಂದಲೇ ಒಕ್ಕಲಿಗ ಸಮಾಜದ ಕೆಲವು ಶಾಸಕರು ಜೆಡಿಎಸ್‌ ಪಕ್ಷ ಬಿಟ್ಟು ಹೊರ ಹೋಗಬೇಕಾಯಿತು ಎಂದರು.

ಎಚ್‌.ವಿಶ್ವನಾಥ್‌ ರಾಜಕೀಯವಾಗಿ ಮೂಲೆ ಗುಂಪಾಗಿದ್ದರು. ಅವರನ್ನು ನಾನು ಜೆಡಿಎಸ್‌ ಪಕ್ಷಕ್ಕೆ ಕರೆತಂದು ಅಧಿಕಾರ ಕೊಡಿಸಿದೆ ಎಂದು ಹೇಳುವ ಸಾ.ರಾ.ಮಹೇಶ್‌ ವರ್ತನೆ ಬಾಲಿಶವಾದುದು. ನಾನೂ ಕೂಡ ರಾಜಕೀಯದಲ್ಲಿ 40 ವರ್ಷಗಳಿಂದ ಇದ್ದು ಸೋಲು-ಗೆಲುವು ಎರಡನ್ನೂ ಕಂಡಿದ್ದೇನೆ. ಹಾಗಾಗಿ ನನ್ನ ಬಗ್ಗೆ ಮಾತನಾಡುವಾಗ ಎಚ್ಚರವಿರಲಿ ಎಂದರು.

ಎಚ್‌.ಡಿ.ದೇವೇಗೌಡರ ಕುಟುಂಬ ಅಧಿಕಾರ ಕಳೆದುಕೊಂಡು ಕಣ್ಣೀರಿನಲ್ಲಿ ಕೈತೊಳೆಯಲು ನಾವ್ಯಾರು ಕಾರಣರಲ್ಲ. ಅದಕ್ಕೆ ನೇರ ಹೊಣೆಗಾರ ಸಾ.ರಾ.ಮಹೇಶ್‌ ಮತ್ತು ಅವರ ಸ್ನೇಹಿತರು ಎಂಬುದು ರಾಜ್ಯದ ಜನತೆಗೆ ತಿಳಿದಿರುವ ವಿಚಾರ ಎಂದು ಛೇಡಿಸಿದ ಅವರು, ಈ ಕಟುಸತ್ಯ ಎಚ್‌.ಡಿ.ದೇವೇಗೌಡ ಮತ್ತು ಎಚ್‌.ಡಿ.ಕುಮಾರಸ್ವಾಮಿಯವರಿಗೂ ಮನವರಿಕೆಯಾಗಿದೆ ಎಂದು ಹೇಳಿದರು.

ಕೆ.ಆರ್‌.ನಗರ ತಾಲೂಕಿಗೆ 700 ಕೋಟಿ ರೂ. ಅನುದಾನ ತಂದಿದ್ದೇನೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿರುವ ಸಾ.ರಾ.ಮಹೇಶ್‌ ಅದರ ಲೆಕ್ಕ ಕೊಡಲಿ ಎಂದ ಎಚ್‌.ವಿಶ್ವನಾಥ್‌ ಇದರ ಜತೆಗೆ ಸರ್ಕಾರದ ಅನುದಾನ ವಾಪಸ್‌ ಹೋಗಿದೆ ಎಂದು ಅವರು ಹೇಳಿಕೆ ನೀಡಿರುವುದು ಸತ್ಯಕ್ಕೆ ದೂರವಾದ ಆರೋಪ ಎಂದು ವ್ಯಂಗ್ಯವಾಡಿದರು.

ಕೆ.ಆರ್‌.ನಗರ ಸೇರಿದಂತೆ ನಾಲ್ಕು ತಾಲೂಕುಗಳ ರೈತರ ಜೀವನಾಡಿಯಾಗಿದ್ದ ಚುಂಚನಕಟ್ಟೆ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಮುಚ್ಚಿಸಿದ ನಂತರ ಅದರ ಆರಂಭಕ್ಕೆ ಪಾದಯಾತ್ರೆ, ಧರಣಿಯಂತಹ ನಾಟಕವಾಡಿದ ಸಾ.ರಾ.ಮಹೇಶ್‌ ಕಳೆದ ಸರ್ಕಾರದಲ್ಲಿ ಮುಖ್ಯಮಂತ್ರಿಗಳ ಪರಮಾಪ್ತರಾಗಿದ್ದರೂ ಪುನರಾರಂಭಕ್ಕೆ ಯಾಕೆ ಪ್ರಯತ್ನಿಸಲಿಲ್ಲ ಎಂದು ಪ್ರಶ್ನಿಸಿದರು.

ಕಾರ್ಖಾನೆಯ ಭೂಮಿಯನ್ನು ಸರ್ಕಾರಕ್ಕೆ ಅಡವಿಡಿಸಿ ಆ ಹಣದಿಂದ ಕಾರ್ಮಿಕರ ವೇತನ ಕೊಡಿಸಿದ್ದು ಶಾಸಕರ ಸಾಧನೆ ಎಂದು ಜರಿದ ಎಚ್‌.ವಿಶ್ವನಾಥ್‌ ಕೆ.ಆರ್‌.ನಗರಕ್ಕೆ ನಾನು ಮಾಡಿರುವಷ್ಟು ಅಭಿವೃದ್ಧಿ ಕೆಲಸಗಳನ್ನು ನೀನು ಮಾಡಿಲ್ಲ ಎಂದು ಸಾ.ರಾ.ಮಹೇಶ್‌ ವಿರುದ್ಧ ಏಕ ವಚನದಲ್ಲಿ ಹರಿಹಾಯ್ದರು. ತಮ್ಮ ತಪ್ಪನ್ನು ಮುಚ್ಚಿಸಲು ನನ್ನ ಹೆಸರು ಹೇಳಬೇಡಿ ಎಂದರು.

ತಾಲೂಕಿನಲ್ಲಿ ಮುಚ್ಚಿ ಹೋಗಿದ್ದ ಸಹಕಾರ ಸಂಘಗಳನ್ನು ಪುನಶ್ಚೇತನ ಮಾಡಿ ಸಹಕಾರಿಗಳಿಗೆ ಅನುಕೂಲ ಕಲ್ಪಿಸಿಕೊಡುವುದರ ಜತೆಗೆ ಇತರ ಹತ್ತಾರು ಶಾಶ್ವತ ಕೆಲಸಗಳನ್ನು ಮಾಡಿದ ಸಾಧನೆ ನನ್ನದು ಎಂದ ವಿಶ್ವನಾಥ್‌ 2004ರ ತನಕ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಉತ್ತಮವಾಗಿ ನಾನು ನಡೆಸಿಕೊಂಡು ಬಂದಿದ್ದೆ. ಆದರೆ ಅದನ್ನು ಮುಚ್ಚಿಸಿದ್ದು ಅವರ ಸಾಧನೆ ಎಂದರು.

ಕೆ.ಆರ್‌.ಪೇಟೆ ಅನರ್ಹ ಶಾಸಕ ಕೆ.ಸಿ.ನಾರಾಯಣಗೌಡ ಅವರು ಹೆಚ್‌.ಡಿ.ದೇವೇಗೌಡ ಅವರ ಕುಟುಂಬದ ವಿರುದ್ಧ ನೀಡಿರುವ ಹೇಳಿಕೆಯನ್ನು ಸಮರ್ಥಿಸಿಕೊಂಡ ಎಚ್‌.ವಿಶ್ವನಾಥ್‌ ಅವರು ಹೇಳಿರುವುದು ಸತ್ಯ ಅಡಗಿದೆ ಎಂದರು.  ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಕಳೆದ 15 ದಿನಗಳಿಂದ ಇಡಿ ಕಸ್ಟಡಿಯಲ್ಲಿ ಇರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಕಾನೂನಿಗಿಂತ ಯಾರೂ ದೊಡ್ಡವರಲ್ಲ.

ಆದರೆ ಡಿ.ಕೆ.ಶಿವಕುಮಾರ್‌ ನನ್ನ ಜತೆ ರಾಜಕೀಯವಾಗಿ ಬೆಳೆದವರು. ಹಾಗಾಗಿ ಆದಷ್ಟು ಬೇಗ ಅವರು ಕಾನೂನಿನ ಸಂಕೋಲೆಯಿಂದ ಹೊರಬಂದು ಮತ್ತೆ ಸಕ್ರಿಯ ರಾಜಕೀಯ ಆರಂಭಿಸಬೇಕೆಂದು ಹಾರೈಸಿದರು. ತಾಪಂ ಸದಸ್ಯ ಮುಂಡೂರುಕುಮಾರ್‌, ಎಪಿಎಂಸಿ ಮಾಜಿ ನಿರ್ದೇಶಕ ರಾಜಶೇಖರ, ಪುರಸಭೆ ಮಾಜಿ ಸದಸ್ಯ ಪೆರಿಸ್ವಾಮಿ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.