ದಕ್ಷ ಆಡಳಿತ ನಡೆಸಲು ಬಿಜೆಪಿಗೆ ಅವಕಾಶ ಕೊಡಿ


Team Udayavani, Feb 20, 2018, 12:15 PM IST

m4-dakhsha.jpg

ಮೈಸೂರು: ಮುಂಬರುವ ಚುನಾವಣೆಯಲ್ಲಿ ಬಿಜೆಪಿ 150 ಕ್ಷೇತ್ರಗಳಲ್ಲಿ ಗೆದ್ದು, ಸ್ವತ್ಛ, ದಕ್ಷ ಆಡಳಿತ ನೀಡಲು ಅವಕಾಶ ಕೊಡಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಮನವಿ ಮಾಡಿದರು. ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ ಬಿಜೆಪಿಯ ಬೃಹತ್‌ ಸಮಾವೇಶದಲ್ಲಿ ಅವರು ಮಾತನಾಡಿದರು.

ರಾಜ್ಯದ ಅಭಿವೃದ್ಧಿ ಬಗ್ಗೆ ನಿರ್ಲಕ್ಷ್ಯವಹಿಸಿ, ಲೂಟಿ ಹೊಡೆಯುತ್ತಿರುವ ಈ ಸರ್ಕಾರದಿಂದ ಜನತೆ ಬೇಸತ್ತಿದ್ದಾರೆ. ಈ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಮರಳು ಮಾಫಿಯಾಗೆ ಸರ್ಕಾರವೇ ಮಾರಿಕೊಂಡಿದೆ. ಇದೊಂದು ಅನಾಗರಿಕ ಸರ್ಕಾರ ಎಂದು ಹೈಕೋರ್ಟ್‌ ಛೀಮಾರಿ ಹಾಕಿದೆ ಎಂದು ಟೀಕಿಸಿದರು.

ಲೋಕಾ ಬಲಹೀನ ಮಾಡಿದರು: ಲೋಕಾಯುಕ್ತವನ್ನು ಬಲಹೀನಗೊಳಿಸಿ, ಎಸಿಬಿ ರಚನೆ ಮಾಡುವ ಮೂಲಕ ಭ್ರಷ್ಟಾಚಾರವನ್ನು ಮುಚ್ಚಿ ಹಾಕುವ ಕೆಲಸ ಮಾಡುತ್ತಿದೆ. ಲೋಕಾಯುಕ್ತ ಪ್ರಬಲವಾಗಿದ್ದರೆ ಎಷ್ಟೋ ಜನ ಮಂತ್ರಿಗಳು ಜೈಲಿಗೆ ಹೋಗುತ್ತಿದ್ದರು ಎಂದು ಹೇಳಿದರು.

ಸಮಾಜವಾದಿ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ, ದೇಶದ 6ನೇ ಶ್ರೀಮಂತ ಮುಖ್ಯಮಂತ್ರಿ, 70ಲಕ್ಷ ರೂಪಾಯಿಯ ವಾಚ್‌ ಕಟ್ಟುತ್ತಾರೆ. ಚುನಾವಣೆ ಹೊಸ್ತಿಲಲ್ಲಿ ಬಜೆಟ್‌ ಮಂಡಿಸಿ ಜನರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ ಎಂದು ಜರಿದರು.

ಹದಗೆಟ್ಟ ಕಾನೂನು ವ್ಯವಸ್ಥೆ: ಈ ಸರ್ಕಾರದ ಅವಧಿಯಲ್ಲಿ ರಾಜ್ಯದ 3500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 20ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ. ಶಾಸಕನ ಪುತ್ರನೇ ಮಾರಾಣಾಂತಿಕ ಹಲ್ಲೆ ನಡೆಸುವ ಮಟ್ಟಕ್ಕೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದರು. ಚುನಾವಣಾ ಹಿಂದೂ ರಾಹುಲ್‌ ಗಾಂಧಿ ಅವರ ಅಪ್ರಬುದ್ಧ ಹೇಳಿಕೆಯ ತಾಳಕ್ಕೆ ತಕ್ಕಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಕುಣಿಯುತ್ತಿದ್ದಾರೆ ಎಂದು ಯಡಿಯೂರಪ್ಪ ದೂರಿದರು.

ಭ್ರಷ್ಟರನ್ನೇ ಪಕ್ಷಕ್ಕೆ ಸೇರಿಸಿಕೊಂಡರು: ಸಂಸದ ಬಿ.ಶ್ರೀರಾಮುಲು ಮಾತನಾಡಿ, ಕಳೆದ ನಾಲ್ಕೂವರೆ ವರ್ಷಗಳಿಂದ ನಿದ್ದೆಯಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಕ್ಕೆ ನರೇಂದ್ರಮೋದಿ ಅವರು ಬಂದ ಮೇಲೆ ಎಚ್ಚರವಾಗಿ ನಿದ್ದೆ ಬರುತ್ತಿಲ್ಲ. ಎದೆಯಲ್ಲಿ ಢವ ಢವ ಶುರುವಾಗಿದೆ. ಬಳ್ಳಾರಿಗೆ ಪಾದಯಾತ್ರೆಯಲ್ಲಿ ಬಂದು ಆನಂದ್‌ ಸಿಂಗ್‌, ನಾಗೇಂದ್ರ ರನ್ನು ಭ್ರಷ್ಟರು, ಜೈಲಿಗೆ ಹೋಗಿ ಬಂದವರು ಎಂದು ಟೀಕಿಸಿದ್ದ ಸಿದ್ದರಾಮಯ್ಯ, ಇವತ್ತು ಅವರಿಬ್ಬರನ್ನೂ ತಮ್ಮ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ ಎಂದು ಜರಿದರು.

ಕಾಂಗ್ರೆಸ್‌ ಗೂಂಡಾಗಿರಿ: ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ ಮಾತನಾಡಿ. ಗೂಂಡಾಗಿರಿ ಅಂದರೆ ಕಾಂಗ್ರೆಸ್‌, ಕಾಂಗ್ರೆಸ್‌ ಅಂದರೆ ಗೂಂಡಾಗಿರಿ. ಶಾಸಕನ ಮಗನೇ ಜನಸಾಮಾನ್ಯನ ಮೇಲೆ ಹಲ್ಲೆ ಮಾಡಿದ್ದಾನೆ. ಇಷ್ಟು ದಿನ ಕಾಂಗ್ರೆಸ್‌ನವರು ಹಿಂದೂ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರನ್ನು ಕೊಲ್ಲುತ್ತಿದ್ದರು, ಈಗ ಜನಸಾಮಾನ್ಯರನ್ನೂ ಗುರಿಯಾಗಿಸಿಕೊಂಡಿದ್ದಾರೆ. ಹಲ್ಲೆ ಮಾಡಿದ ಅಪರಾಧಿ ಬೆಂಬಲಿಗರೊಂದಿಗೆ ಪೊಲೀಸ್‌ ಠಾಣೆಗೆ ಬರುತ್ತಾನೆ, ಇದು ಕಾಂಗ್ರೆಸ್‌ ಸಂಸ್ಕೃತಿ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಲೆಲ್ಲ ಕಾನೂನು -ಸುವ್ಯವಸ್ಥೆ ಹದಗೆಟ್ಟು ಗೂಂಡಾ ರಾಜ್ಯ ಆಗಿದೆ ಎಂದು ದೂರಿದರು.

ಯೋಜನೆ ನೀಡಿದ ಪ್ರಧಾನಿ: ಸಂಸದ ಪ್ರತಾಪ್‌ ಸಿಂಹ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮದುವೆ, ಮುಂಜಿ, ಬೀಗರ ಊಟಕ್ಕೆ ವಾರಕ್ಕೊಮ್ಮೆ ಮೈಸೂರಿಗೆ ಬರುತ್ತಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೈಸೂರಿನ ಬಗ್ಗೆ ಅಪಾರ ಪ್ರೀತಿ ಮತ್ತು ಕಾಳಜಿ, ಇದಕ್ಕಾಗಿ ಸಾವಿರಾರು ಕೋಟಿ ರೂ.ಗಳ ಯೋಜನೆಗಳನ್ನು ಹೊತ್ತು ತಂದಿದ್ದಾರೆ ಎಂದರು.

ನಾಲ್ಕು ವರ್ಷಗಳ ಹಿಂದೆ ಮೋದಿ ಅವರ ಜತೆಗೆ ಇದೇ ಮೈದಾನದಲ್ಲಿ ವೇದಿಕೆ ಹಂಚಿಕೊಂಡಾಗ ನಾನು ಚುನಾವಣಾ ಅಭ್ಯರ್ಥಿ. ಇವತ್ತು ಸಂಸದನಾಗಿ ನಿಮ್ಮ ಮುಂದೆ ನಿಂತಿದ್ದೇನೆ. ಇದು ಮೋದಿ ಅವರು ಕೊಟ್ಟಂತಾ ದಯಾಭಿಕ್ಷೆ.
-ಪ್ರತಾಪ್‌ ಸಿಂಹ, ಸಂಸದ

ಟಾಪ್ ನ್ಯೂಸ್

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಾಲ್ಕೇ ದಿನದಲ್ಲಿ ಮ್ಯಾಜಿಕ್‌ ಆಗುತ್ತೆ, ನೋಡ್ತಾ ಇರಿ: ಬಿ.ವೈ.ವಿಜಯೇಂದ್ರ

ನಾಲ್ಕೇ ದಿನದಲ್ಲಿ ಮ್ಯಾಜಿಕ್‌ ಆಗುತ್ತೆ, ನೋಡ್ತಾ ಇರಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.