ಅಂಬೇಡ್ಕರ್‌ ವಿಚಾರದಿಂದ ಭಿನ್ನಾಭಿಪ್ರಾಯ ದೂರ


Team Udayavani, Jun 25, 2018, 2:14 PM IST

m1-ambedkar.jpg

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ವಿಚಾರಗಳನ್ನು ಆರಾಧಿಸಿದರೆ ಭಿನ್ನಾಭಿಪ್ರಾಯಗಳು ದೂರವಾಗಲಿದ್ದು, ಹೀಗಾಗಿ ಇತ್ತೀಚಿನ ದಿನಗಳಲ್ಲಿ ಅಂಬೇಡ್ಕರ್‌ ಅವರನ್ನು ಇಷ್ಟಪಡುವವರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿವೃತ್ತ ಉಪನಿರ್ದೇಶಕ ಎಚ್‌.ಎಂ.ರುದ್ರಸ್ವಾಮಿ ಅಭಿಪ್ರಾಯಪಟ್ಟರು.

ವಿಜಯನಗರ ಮತ್ತು ಬೋಗಾದಿ ಉತ್ತರ ಬಡಾವಣೆಯ ಪರಿಶಿಷ್ಟ ಜನಾಂಗದ ಕ್ಷೇಮಾಭಿವೃದ್ಧಿ ಸಂಘದಿಂದ ವಿಜಯನಗರದ ವಿ.ಕೆ. ಶಿಕ್ಷಣ ಸಂಸ್ಥೆಯಲ್ಲಿ ಭಾನುವಾರ ಆಯೋಜಿಸಿದ್ದ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ 127ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಂಬೇಡ್ಕರ್‌ ಅವರ 20ನೇ ಶತಮಾನದ ಮಹಾನ್‌ ಕ್ರಾಂತಿಕಾರಿ ಪುರಷನಾಗಿದ್ದು, ಆರಂಭದಲ್ಲಿ ಅಂಬೇಡ್ಕರ್‌ ಅವರ ತತ್ವಗಳನ್ನು ವಿರೋಧಿಸಿದವರು ಕೊನೆಗೆ ಅವರ ಚಿಂತನೆಗೆ  ಮಾರು ಹೋಗಿದ್ದಾರೆ. ಹೀಗಾಗಿ ಇಂದು ಅಂಬೇಡ್ಕರ್‌ ಅವರನ್ನು ಇಷ್ಟಪಡುವ ಹಾಗೂ ಅವರನ್ನು ಪಾಲಿಸುವ ಮನೋಭಾವಗಳು ಹೆಚ್ಚಾಗುತ್ತಿದ್ದು, ಅಂಬೇಡ್ಕರ್‌ ರಚನೆ ಮಾಡಿರುವ ಪುಸ್ತಕಗಳಿಗೆ ಇಂದಿಗೂ ಬೇಡಿಕೆ ಹೆಚ್ಚಾಗಿದೆ.

ಇಂಗ್ಲಿಷ್‌ ಸೇರಿದಂತೆ ಜಗತ್ತಿನ ಎಲ್ಲಾ ಭಾಷೆಗಳಿಗೆ ಅವರ ಗ್ರಂಥಗಳು ಅನುವಾದಗೊಂಡಿದ್ದು, ಹೆಚ್ಚಾಗಿ ಕನ್ನಡಕ್ಕೆ ಅನುವಾದಗೊಂಡಿವೆ. ಭಕ್ತಿಯಲ್ಲಿ ಧರ್ಮ ಇದ್ದರೆ ಮುಕ್ತಿ ಸಿಗಲಿದ್ದು, ರಾಜಕೀಯದಲ್ಲಿ ಧರ್ಮವಿದ್ದರೆ ಸರ್ವಾಧಿಕಾರ ಲಭಿಸಲಿದೆ. ಹೀಗಾಗಿ ಅಂಬೇಡ್ಕರ್‌ ಹಾಗೂ ಅವರ ವಿಚಾರಗಳನ್ನು ಆರಾಧಿಸಿದರೆ ಯಾವ ಭಿನ್ನಾಭಿಪ್ರಾಯಗಳು ಉಂಟಾಗುವುದಿಲ್ಲ ಎಂದು ಹೇಳಿದರು. 

ಕಾರ್ಯಕ್ರಮ ಉದ್ಘಾಟಿಸಿದ ಜೆಡಿಎಸ್‌ ಮುಖಂಡ ಜಿ.ಡಿ. ಹರೀಶ್‌ಗೌಡ ಮಾತನಾಡಿ, ಸಂಘ ಸಂಸ್ಥೆಗಳ ಪರಿಕಲ್ಪನೆ ಎಂಬುದು ಆದಿಕಾಲದಿಂದಲೂ ಸಮಾಜದಲ್ಲಿ ಪ್ರಮುಖ ಕಾರ್ಯಗಳನ್ನು ಮಾಡುತ್ತಿವೆ. ಸಂಘ ಸಂಸ್ಥೆಗಳು ಸಮಾಜದಲ್ಲಿ ಶಿಕ್ಷಣ, ಸಾಮಾಜಿಕ ಅರಿವು ಮೂಡಿಸುವ ಜತೆಗೆ ಸಮಾಜವನ್ನು ಅಭಿವೃದ್ಧಿಯ ಕಡೆಗೆ  ಕೊಂಡೊಯ್ಯುವ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ವಿಜಯನಗರ ಕ್ಷೇಮಾಭಿವೃದ್ಧಿ ಸಂಘ ಸಹ ಇದೇ ಹಾದಿಯಲ್ಲಿ ಮುನ್ನಡೆಯಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಡಾ.ಎನ್‌.ದೊಡ್ಡಸಿದ್ದಯ್ಯ, ಉಪಾಧ್ಯಕ್ಷ ಶಿವಲಿಂಗಯ್ಯ, ಮಾಜಿ ಅಧ್ಯಕ್ಷ ಪ್ರೊ.ಎಚ್‌.ಎಲ್‌. ವೆಂಕಟೇಶ್‌, ಹಿನಕಲ್‌ ಗ್ರಾಪಂ ಸದಸ್ಯ ಕುಮಾರ್‌, ಸಮಾಜ ಸೇವಕ ಮಂಜುನಾಥ್‌, ಡಾ.ವೆಂಕಟೇಶ್ವರಮೂರ್ತಿ, ದಂಸಸ ಸಂಚಾಲಕ ಚೋರನಹಳ್ಳಿ ಶಿವಣ್ಣ  ಇನ್ನಿತರರು ಭಾಗವಹಿಸಿದ್ದರು. 

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.