Andhra ; ಕಾರು ಅಪಘಾತದಲ್ಲಿ ಹುಣಸೂರು ಅಬಕಾರಿ DySP ತಂದೆ ಸಾವು
ತಿಮ್ಮಪ್ಪನ ದರ್ಶನಕ್ಕೆ ತೆರಳಿದ್ದ ಡಿವೈಎಸ್ಪಿ ವಿಜಯಕುಮಾರ್ಗೆ ತೀವ್ರಗಾಯ
Team Udayavani, Sep 3, 2023, 6:03 PM IST
ಹುಣಸೂರು: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳಿದ್ದ ಹುಣಸೂರು ಅಬಕಾರಿ ಡಿವೈಎಸ್ ಪಿ ಕೆ.ಟಿ.ವಿಜಯಕುಮಾರ್ ಅವರ ಕಾರು ಅಪಘಾತವಾಗಿ ಅವರ ತಂದೆ ಮೃತಪಟ್ಟಿದ್ದು, ಡಿವೈಎಸ್ಪಿ ಸೇರಿದಂತೆ ಕುಟುಂಬದ ಮೂವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿಜಯಕುಮಾರ್ ತಂದೆ ಗಿರಿಗೌಡ(80) ಮೃತಪಟ್ಟಿದ್ದು, ಕುಟುಂಬ ಸಮೇತ ತಿರುಪತಿಗೆ ತೆರಳಿ ದೇವರ ದರ್ಶನ ಮಾಡಿ ಶುಕ್ರವಾರ ಬೆಂಗಳೂರಿಗೆ ಹಿಂತಿರುಗುತ್ತಿದ್ದ ವೇಳೆ ಆಂಧ್ರಪ್ರದೇಶದ ಪುಲಮುನ್ನೂರು ಬಳಿಯ ಹೆದ್ದಾರಿಯಲ್ಲಿ ಮಧ್ಯರಾತ್ರಿ 1.30 ರ ವೇಳೆ ಲಾರಿಯೊಂದನ್ನು ಹಿಂದಿಕ್ಕುವ ಸಮಯದಲ್ಲಿ ಅಪಘಾತ ಸಂಭವಿಸಿ ಕಾರು ಸಂಪೂರ್ಣ ಜಖಂಗೊಂಡಿದೆ.
ಅವಘಡದಲ್ಲಿ ಕಾರಿನ ಮುಂಭಾಗದಲ್ಲಿ ಕುಳಿತಿದ್ದ ತಂದೆ ಗಿರಿಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿಯಲ್ಲಿ ಕುಳಿತಿದ್ದ ವಿಜಯಕುಮಾರ್ ತೀವ್ರವಾಗಿ ಗಾಯಗೊಂಡಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲನೆ ಮಾಡುತ್ತಿದ್ದ ಅಬಕಾರಿ ಇನ್ಸ್ಪೆಕ್ಟರ್ ಲೋಕೇಶ್, ಕಾರಿನಲ್ಲಿದ್ದ ವಿಜಯಕುಮಾರ್ ಅವರ ತಾಯಿ ಮತ್ತು ಅಕ್ಕ ಘಟನೆಯಲ್ಲಿ ಯಾವುದೇ ಗಾಯವಿಲ್ಲದೆ ಪಾರಾಗಿದ್ದಾರೆ.
ಅಂತ್ಯ ಸಂಸ್ಕಾರ: ಅಪಘಾತದಲ್ಲಿ ಮೃತ ಪಟ್ಟ ಗಿರಿಗೌಡ ಅವರ ಅಂತ್ಯ ಸಂಸ್ಕಾರ ಸ್ವಗ್ರಾಮ ಮದ್ದೂರು ತಾಲೂಕಿನ ಕೆಸ್ತೂರಿನಲ್ಲಿ ಭಾನುವಾರ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ